Friday, December 30, 2011

ಅಜ್ಞಾನಿ ಯೊಬ್ಬ ಪ್ರಾರಂಭಿಸಿದ ಬ್ಲಾಗ್ ಗೆ ನಾಲ್ಕು ವರ್ಷವಂತೆ !!!! ಹಾಗೂ ನಿಮಗೆ ಹೊಸ ಕ್ಯಾಲೆಂಡರ್ ವರ್ಷದ ಶುಭಾಶಯಗಳಂತೆ!!!



ಬ್ಲಾಗ್ ಗೆಳೆಯರ ಬಳಗ.


ನಮಸ್ಕಾರ ಕೇವಲ ನಾಲ್ಕು ವರ್ಷದ ಹಿಂದಿನ ಮಾತು  , ಮೂರುಜನ  ಸ್ನೇಹಿತರ ಗುಂಪೊಂದು   ಟೀ ಕುಡಿಯಲು ಮೈಸೂರಿನ ಇರ್ವಿನ್ ರಸ್ತೆಯ ಒಂದು ಹೋಟೆಲಿನಲ್ಲಿ ಸೇರಿತ್ತು. ಸೇರಿದ್ದ ಮೂರುಜನರಲ್ಲಿ ಒಬ್ಬರು ಶರತ್  ಮಾತಾಡುತ್ತಾ  [ಅವರು ಆಗಲೇ ಸ್ಥಳೀಯ ಆಂಗ್ಲ ಪತ್ರಿಕೆಗೆ  ಉಪ ಸಂಪಾದಕರಾಗಿ ಕೆಲಸ ಮಾಡುತ್ತಿದ್ದರು ] ನಿಮಗೆ ಗೊತ್ತಾ ಬಾಲು, ಇತ್ತೀಚೆಗಂತೂ ವಿಜ್ಞಾನ  ಬಹಳ ಮುಂದುವರೆದಿದೆ , ನಿಮಗೆ ಅಚ್ಚರಿ ಆಗುತ್ತೆ ನಾನು ಈಗ ಅಂತರ್ಜಾಲದಲ್ಲಿ  ಬ್ಲಾಗ್ ಅಂತಾ ಪುಟ ಮಾಡಿದ್ದೇನೆ ಹಾಗು ಅದರಲ್ಲಿ  ಇಂಗ್ಲೀಶ್ ನಲ್ಲಿ  ಬರೆಯುತ್ತಿದ್ದೇನೆ , ನಾನು ಬರೆದ ತಕ್ಷಣ ಪ್ರಪಂಚದ ಯಾವುದೋ ದೇಶದಿಂದ ಫೀಡ್ ಬ್ಯಾಕ್ ಸಿಗುತ್ತೆ ಸಾರ್ ಅಂದ್ರೂ ,  ಮತ್ತೊಬ್ಬ ಗೆಳೆಯ ಸಾಫ್ಟ್ ವೇರ್  ಟೆಕ್ಕಿ  ಗುರುದತ್ ಸಹ ಅದಕ್ಕೆ ದನಿ ಗೂಡಿಸಿದರು, ಮೊದಲು ಈ ಮಾತನ್ನು ಕೇಳಿ ಬ್ಲಾಗಿನ ಗಂಧ ಗಾಳಿ ಇಲ್ಲದ ನಾನು ಬಿಟ್ಟ ಬಾಯಿ ಬಿಟ್ಟಂತೆ ಹೌದಾ  ಅಂದಿದ್ದೆ. ಮನದಲ್ಲಿ ಅರೆ ನಾನೂ ಬ್ಲಾಗ್ ಮಾಡ ಬಹುದಾ ಅನ್ನಿಸಿದ್ದು ನಿಜ  ಆದರೆ ಈ ಅಜ್ಞಾನಿಗೆ  ಮನೆಯಲ್ಲಿ  ಕಂಪ್ಯೂಟರ್ , ಇಂಟರ್ನೆಟ್ ಇದ್ದರೂ ಬ್ಲಾಗ್ ಬಗ್ಗೆ ಏನೂ  ತಿಳುವಳಿಕೆ ಇರಲಿಲ್ಲ.  ಸರಿ ಆತ್ಮೀಯ ಗೆಳೆಯ ಗುರುದತ್ ನನ್ನು ಕಾಡಿ ಹೇಗೆ ಸಾರ್ ಬ್ಲಾಗ್ ಮಾಡೋದು ಅಂದೇ , ಬಾಲು ಜಾಸ್ತಿ ತಲೆ ಕೆಡಿಸಿಕೊಳ್ಳಬೇಡಿ , ಗೂಗಲ್ ಸರ್ಚ್ ಗೆ ಹೋಗಿ ಅಲ್ಲಿ ಜಾಲಾಡಿ ಅಲ್ಲಿ ಸಿಗುತ್ತೆ ಮಾಹಿತಿ ಅಂದ್ರೂ .
ಬ್ಲಾಗ್ ಗೆಳೆಯರು ಹೀಗೂ ಉಂಟು

Saturday, December 24, 2011

ರಫಿ ಯಾಕೋ ಇಂದು ನಿನ್ನ ನೆನಪಾಗಿದೆ.ನನ್ನ ಮನದಲ್ಲಿ ನಿನ್ನ ಹಾಡುಗಳ ನೆನಪಿನ ಚಿಲುಮೆ ಉಕ್ಕಿದೆ.!!!!

ಇವತ್ತು   {೨೪ ಡಿಸೆಂಬರ್ ೨೦೧೧ } ಮುಂಜಾನೆ ಎದ್ದವನಿಗೆ , ಯಾಕೋ ಬೇಸರವಾಗಿ  ಮನಸ್ಸಿಗೆ ಹಿತವಾದ ಹಾಡು ಕೇಳುವ ಆಸೆಯಾಗಿ  ಬಾನ್ಸುರಿ ಸಿ.ಡೀ. ಹುಡುಕುತ್ತಿದ್ದೆ. ಅಲ್ಲೇ ಇದ್ದ ಪತ್ರಿಕೆಯಲ್ಲಿ  ಒಂದು ಹೆಡ್ ಲೈನ್ ಕಣ್ಣಿಗೆ ಬಿತ್ತು.  "ಮೊಹಮದ್ ರಫಿ ಜನುಮದಿನ  ೨೪ ನೆ ಡಿಸೆಂಬರ್ ರಂದು  ಮರೆಯಲಾರದ ಮಹಾ ಗಾಯಕ ಎಂದು". ನೋಡಿದ ತಕ್ಷಣ ಮೊಹಮದ್ ರಫಿ ಹಾಡಿನ  ಸಿ.ಡೀ ತೆಗೆದು ಮುಂಜಾನೆಯೇ ಹಾಕಿಕೊಂಡು ಕುಳಿತೆ. ಮನಸಿಗೆ ಹಿತವಾಯಿತು.ಮನದಲ್ಲಿ ರಫಿ ಹಾಡಿನ ನೆನಪುಗಳ ಚಿಲುಮೆಗೆ ಜೀವಬಂದು ಚಿಮ್ಮಲು ಶುರುವಾಯಿತು. ಆ ಚಿಲುಮೆಯ ಫಲ ಶ್ರುತಿಯೇ ಈ ಲೇಖನ.ಹೌದು ನನ್ನ ಜೀವಿತ ಕಾಲದಲ್ಲಿ ಕಂಡ ಒಬ್ಬ ಅಪ್ರತಿಭ ಗಾಯಕ , ಇವರ ಯಾವ ಹಾಡು ಇಷ್ಟಾ ಆಗೋಲ್ಲಾ ಹೇಳಿ. ಶಾಸ್ತ್ರೀಯ ಸಂಗೀತಕ್ಕೂ ಸೈ, ಪ್ರೇಮ ಸಂಗೀತಕ್ಕೂ ಸೈ, ಘಜಲ್ ಹಾಡಲೂ ಸೈ, ಯಾಹೂ ಅಂತಾ ಕುಣಿತದ ಹಾಡಿಗೂ ಸೈ, ಯಾವ ಭಾಷೆಯ ಹಾಡಾದರೂ ಹಾಡಲು ಸೈ. ಯಾರೂ ಏನೇ ಅಂದ್ರೂ ಈ ಗಾಯಕನ ನಂತರ ಮತ್ತೊಬ್ಬ ರಫಿ ಹುಟ್ಟಲು ಸಾಧ್ಯವಿಲ್ಲಾ ಬಿಡಿ. ಹೌದು ಸಾರ್ ರಫಿ ಯಾ ಹಾಡನ್ನು ಕೇಳುತ್ತಿದ್ದರೆ  ಆತನ  ನಿಷ್ಕಲ್ಮಶ ನಗು ಮುಖದ ಚಿತ್ರಗಳೇ  ಕಾಣುತ್ತವೆ. ಕಪಟ ಅರಿಯದ  ಸಭ್ಯ ಜೀವನ ನಡೆಸಿದ , ಅಜಾತ ಶತ್ರು ಇವರು.
ಮೊಹಮದ್ ರಫಿ
ಮೊಹಮ್ಮದ್ ರಫಿ ಅವರು ಹಜ್ಜಿ ಅಲಿ ಮೊಹಮ್ಮದ್ ಅವರ ಆರನೆಯ ಕಿರಿಯ ಪುತ್ರರಾಗಿದ್ದಾರೆ.ಅವರು ಪಂಜಾಬ್ ರಾಜ್ಯದ (ಬ್ರಿಟಿಶ್ ಭಾರತ)  ಅಮೃತಸರ   ಬಳಿಯ "ಕೊಟ್ಲಾ ಸುಲ್ತಾನ್ ಸಿಂಗ್ "ಗ್ರಾಮದಲ್ಲಿ ಜನಿಸಿದ್ದಾರೆ ಮೊಹಮದ್  ರಫಿ ಅವರನ್ನು ಚಿಕ್ಕವರಿರುವಾಗ ಫೀಕಾ ಎಂದು ಸಂಕ್ಷಿಪ್ತ ನಾಮದಿಂದ ಕರೆಯಲಾಗುತ್ತಿತ್ತು.ಅವರು ಹಳ್ಳಿಯಲ್ಲಿ ಫಕೀರ್ ಅವರ ಹಾಡುಗಳ ಮೂಲಗಳನ್ನು ಅನುಕರಿಸುತ್ತಿದ್ದರು. ರಫಿ ಅವರ ತಂದೆ ೧೯೩೫-೩೬, ರಲ್ಲಿ ಲಾಹೋರ್,ಗೆ ಹೋಗಿ ನೆಲೆಸಿದರು,ನಂತರ ಅವರ ಕುಟುಂಬ ಅವರನ್ನು ಹಿಂಬಾಲಿಸಿತು. ರಫಿ ಅವರ ಕುಟುಂಬವು ಲಾಹೋರ್ ನ ನೂರ್ ಮೊಹಲ್ಲಾದಲ್ಲಿ ಒಂದು ಪುರುಷರಿಗಾಗಿ ಸಲೂನ್ ನನ್ನು ಹೊಂದಿದೆ. ಅವರ ಅಳಿಯ ಸಂಬಂಧಿ ಮೊಹಮ್ಮದ್ ಹಮೀದ್ ಇದರ ಒಡೆಯರಾಗಿದ್ದು ಅವರೇ ರಫಿಯವರಲ್ಲಿನ ಪ್ರತಿಭೆ ಗುರ್ತಿಸಿ ಸಂಗೀತ ಲೋಕಕ್ಕೆ ಪ್ರೊತ್ಸಾಹಿಸಿದರು. ನಂತರ ರಫಿ ಅವರು ಶಾಸ್ತ್ರೀಯ ಸಂಗೀತವನ್ನು ಉಸ್ತಾದ್ ಬಡೆ ಗುಲಾಮ್ ಅಲಿ ಖಾನ್, ಉಸ್ತಾದ್ ಅಬ್ದುಲ್ ವಹೀದ್ ಖಾನ್ , ಪಂಡಿತ ಜೀವನ್ ಲಾಲ್ ಮಟ್ಟೂ ಮತ್ತು ಫಿರೋಜ್ ನಿಜಾಮ್ ಅವರಲ್ಲಿ ಸಂಗೀತಾಭ್ಯಾಸ ಮಾಡಿದರು.
ರಫಿ ಅವರು ೧೩ನೇಯ ವರ್ಷ ವಯಸ್ಸಿನವರಗಿದ್ದಾಗ ಮೊದಲ ಬಾರಿಗೆ ಸಾರ್ವಜನಿಕವಾಗಿ ತಮ್ಮ ಸಂಗೀತ ಕಚೇರಿ ನೀಡಿದ್ದಾರೆ.ಕೆ.ಎಲ್ ಸೈಗಲ್ ಅವರ ಸಂಗೀತ ಕಚೇರಿಯಲ್ಲಿ ಅವರಿಗೆ ಈ ಪ್ರದರ್ಶನದ ಅವಕಾಶ ದೊರೆಕಿತು. ರಫಿ ಅವರು ಶ್ಯಾಮ್ ಸುಂದರ ಅವರ ಮಾರ್ಗದರ್ಶನದಲ್ಲಿ ಚೊಚ್ಚಿಲ ಹಿನ್ನಲೆಗಾಯಕರಾಗಿ "ಸೊನಿಯೆ ನೀ,ಹೀರಿಯೆ ನೀ" ಎಂಬ ಹಾಡನ್ನು  ಪಂಜಾಬಿ  ಚಿತ್ರ ಗುಲ್ ಬಲೊಚ್ ನಲ್ಲಿ ಜೀನತ್ ಬೇಗಮ್ ರೊಂದಿಗೆ ಹಾಡಿದ್ದಾರೆ. ಅದೇ ವರ್ಷ ರಫಿ ಅವರನ್ನು ಲಾಹೋರ್ ನ ಆಲ್ ಇಂಡಿಯಾ ರೇಡಿಯೊ ಕೇಂದ್ರದಲ್ಲಿ ಅವರಿಗಾಗಿ ಹಾಡಲು ಆಮಂತ್ರಿಸಲಾಗಿತ್ತು. ಅವರು ತಮ್ಮ ವೃತ್ತಿಪರತೆಯನ್ನು ಚೊಚ್ಚಿಲ ಚಿತ್ರ ಶ್ಯಾಮ್ ಸುಂದರ್ ಅವರ-ನಿರ್ದೇಶಿತ ೧೯೪೧ ರಲ್ಲಿನ ಗುಲ್ ಬಲೊಚ್ ಮತ್ತು ಅದರ ಬೆನ್ನ ಹಿಂದೆಯೇ ಬಾಂಬೆ ಚಿತ್ರ ಗಾಂವೊ ಕಿ ಗೌರಿ,ಯಲ್ಲಿಯೂ ಹಿನ್ನಲೆ ಗಾಯಕರಾಗಿದ್ದಾರೆ.

ಲೈಲಾ ಮಜ್ನೂ (೧೯೪೫)ಮತ್ತು ಜುಗ್ನು ಚಿತ್ರಗಳಲ್ಲಿ ರಫಿ ಅವರು ಸಣ್ಣ ಪುಟ್ಟ ಪಾತ್ರಗಳನ್ನು ಮಾಡಿದ್ದಾರೆ. ಲೈಲಾ-ಮಜ್ನೂ ದಲ್ಲಿ ಅವರು 'ತೇರಾ ಜಲ್ವಾ'ದ ಗೀತೆಯಲ್ಲಿನ ಕೋರಸ್ ನಲ್ಲಿ ಕಾಣಿಸಿಕೊಂಡಿದ್ದರು.
ರಫಿ ಅವರು ೧೯೪೪ ರಲ್ಲಿ ಬಾಂಬೆಗೆ (ಈಗಿನ ಮುಂಬಯಿ)ಬಂದು ಸಹೋದರರೊಂದಿಗೆ ಬೆಹೆಂಡಿ ಬಜಾರ್ ನ ವಾಣಿಜ್ಯ ಪ್ರದೇಶದ ಜನನಿಬಿಡ ಪ್ರದೇಶದಲ್ಲಿ ಹತ್ತಡಿಯ ಚಿಕ್ಕ ಕೋಣೆಯೊಂದನ್ನು ಬಾಡಿಗೆ ಪಡೆದರು. ಇಲ್ಲಿ ತನ್ವೀರ್ ನಕ್ವಿ ಅವರು ಅವರನ್ನು ಕೆಲವು ಚಲನಚಿತ್ರ ನಿರ್ಮಾಪಕರಿಗೆ ಪರಿಚಯಿಸಿದರು.ಅದರಲ್ಲಿ ಅಬ್ದುರ್ ರಶೀದ್ ಕರ್ದಾರ್,ಮೆಹಬೂಬ್ ಖಾನ್ ಮತ್ತು ನಟ-ನಿರ್ದೇಶಕ ನಜೀರ್ ಅವರನ್ನು ಪರಿಚಯಿಸಿದರು. ಚೌಪಾಟಿಯ ಸಮುದ್ರಕ್ಕೆ ಮುಖಮಾಡಿ ಅವರು ಪ್ರತಿ ನಿತ್ಯ ಮುಂಜಾನೆ ರಿಯಾಜ್ ಮಾಡುವುದು ಅವರ ದಿನದ ರೂಢಿಯಾಗಿತ್ತು. ಮುಂಬಯಿನಲ್ಲಿಯೂ ಸಹ ಶ್ಯಾಮ್ ಸುಂದರ್ ಅವರು ರಫಿ ಅವರಿಗೆ ಜಿ.ಎಂ.ದುರಾನಿಯವರೊಂದಿಗೆ ಅವರಿಗೆ 'ಅಜಿ ದಿಲ್ ಹೊ ಕಾಬು ಮೈ ತೊ ದಿಲದಾರ್ ಕಿ ಐಸಿ ತೈಸಿ..'ಹಾಡಿನಲ್ಲಿ ಯುಗಳ ಗೀತೆ ಹಾಡಿದ್ದು ಗಾವೊಂ ಕಿ ಗೌರಿ ಚಿತ್ರದ್ದು ಮೊದಲ ಹಿಂದಿ ಹಾಡಿದ ಧ್ವನಿ ಮುದ್ರಣದ ಚಲನಚಿತ್ರವಾಗಿತ್ತು. ಹಲವು ಹಾಡುಗಳೂ ಆಗ ಧ್ವನಿಮುದ್ರಣಗೊಂಡವು.
ಮಹಾತ್ಮಾ ಗಾಂಧಿ ಅವರ ಹತ್ಯೆಯ ನಂತರ ಹುಸನ್ಲಾಲ್ ಭಗತರಾಮ್-ರಾಜೆಂದ್ರ ಕೃಷ್ಣನ್-ಅವರ 'ಸುನೊ ಸುನೊ ಏಯೆ ದುನಿಯಾವಾಲೊ,ಬಾಪೂಜಿ ಕಿ ಅಮರ್ ಕಹಾನಿ..'ಎಂಬ ಹಾಡನ್ನು ಹಾಡಿದ್ದಾರೆ. ಭಾರತದ ಪ್ರಧಾನ ಮಂತ್ರಿ "ಜವಾಹರ ಲಾಲ್ ನೆಹರೂ " ಅವರು ರಫಿಯವರನ್ನು ಕರೆದು ಮನೆಯಲ್ಲಿ ಹಾಡಲು ಆಮಂತ್ರಿಸಿದ್ದರು. ರಫಿ ಅವರು ನೆಹರೂ  ಅವರಿಂದ ಭಾರತದ ಸ್ವಾತಂತ್ರ್ಯ ದಿನದಂದು ರಜತ ಪದಕ ಪಡೆದುಕೊಂಡರು. ಆಗ ೧೯೪೯, ರಲ್ಲಿ ರಫಿ ಹಲವು ಜನಪ್ರಿಯ ಹಾಡುಗಳನ್ನು ಸಂಗೀತ ನಿರ್ದೇಶಕರಾದ ನೌಶಾದ್ ರೊಂದಿಗೆ (ಚಾಂದಿನಿ ರಾತ್ , ದಿಲ್ಲಗಿ ಮತ್ತುದುಲಾರಿ ) ಶ್ಯಾಮ್ ಸುಂದರ್ ಅವರ (ಬಜಾರ್ ) ಮತ್ತು ಹುಸ್ನಲಾಲ್ ಭಗತರಾಮ್ (ಮೀನಾ ಬಜಾರ್ ).
ರಫಿ ಅವರ ಮೊದಲ ಹಾಡು ನೌಶಾದ್ ರೊಂದಿಗೆ "ಹಿಂದುಸ್ತಾನ್ ಕೆ ಹಮ್ ಹೈ",ಶ್ಯಾಮ್ ಕುಮಾರ್ ಅವರೊಂದಿಗೆ ಅಲಾಉದ್ದೀನ್ ಮತ್ತು ಇನ್ನುಳಿದವರೊಂದಿಗೆ ಸಾಥ್ ನೀಡಿದ್ದಾರೆ.ಎ.ಆರ್ ಕರ್ದಾರ್ ಅವರ ಪೆಹೆಲೆ ಆಪ್ (೧೯೪೪)ರಲ್ಲಿ ಮೂಡಿ ಬಂತು. ಅದೇ ವೇಳೆಗೆ ೧೯೪೫ ರ ಚಲನಚಿತ್ರ ಗಾವೊಂ ಕೆ ಗೊರಿ ಗಾಗಿ "ಅಜಿದಿಲ್ ಹೊ ಕಾಬೂ ಮೈ"ಹಾಡನ್ನು ಹಾಡಿದರು. ಅವರು ಈ ಹಾಡನ್ನೇ ತಮ್ಮ ಮೊದಲ ಹಿಂದಿ ಭಾಷೆಯ ಹಾಡೆಂದು ಪರಿಗಣಿಸುತ್ತಾರೆ.
ರಫಿ ಎರಡು ಚಲನಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ರಫಿ ಅವರು ೧೯೪೫ ರಲ್ಲಿ "ತೇರೆ ಜಲ್ವಾ ಜಿಸ್ ನೆ ದೇಖಾ"ದಲ್ಲಿನ ಸಮೂಹ ಗಾಯಕರೊಂದಿಗೆ ಚಿತ್ರ ಲೈಲಾ ಮಜ್ನೂ ದಲ್ಲಿ ಪರದೆ ಮೇಲೆ ಕಾಣಿಸಿಕೊಂಡಿದ್ದಾರೆ. ನೌಶಾದ್ ರಿಗಾಗಿ ಹಲವು ಹಾಡಿಗೆ ಅವರು ಕೋರಸ್ ಆಗಿದ್ದಾರೆ.ಅದರಲ್ಲಿ "ಮೇರೆ ಸಪ್ನೊಂ ಕಿ ರಾಣಿ,ರೂಹಿ ರೂಹಿ"ಇದನ್ನು ಕೆ.ಎಲ್ ಸೈಗಲ್ ಅವರೊಂದಿಗೆ ಶಹಾಜಾನ್ (೧೯೪೬)ಚಿತ್ರದಲ್ಲಿ ಹಾಡಿದ್ದಾರೆ. ರಫಿ ಅವರು "ತೇರೆ ಖಿಲೊನಾ ಟೂಟಾ ಬಲಕ್"ಹಾಡನ್ನು ಮೆಹಬೂಬ್ ಖಾನ್ ಅವರಅನ್ ಮೋಲ್ ಘಡಿ (೧೯೪೬) ಮತ್ತು ಯುಗಳ ಗೀತೆಯೊಂದನ್ನು ನೂರ್ ಜಹಾನ್ ಅವರೊಂದಿಗೆ ೧೯೪೭ ರ ಚಿತ್ರಜುಗ್ನು ,ದಲ್ಲಿ "ಯಹಾ ಬದ್ಲಾ ವಫಾ ಕಾ" ಹಾಡಿಗೂ ಧ್ವನಿ ನೀಡಿದ್ದಾರೆ. ಭಾರತ ಪಾಕಿಸ್ತಾನ ಇಬ್ಬಾಗದ  ನಂತರ ರಫಿ ಭಾರತದಲ್ಲಿರಲು ನಿರ್ಧರಿಸಿ ತಮ್ಮ ಕುಟುಂಬವನ್ನು ಮುಂಬಯಿಗೆ ಸ್ಥಳಾಂತರಿಸಿದರು. ಅದೇ ರೀತಿ ನೂರ್ ಜಹಾನ್  ಪಾಕಿಸ್ತಾನಕ್ಕೆ ಕ್ಕೆ ಮರಳಿ ಹಾಡುಗಾರ ಅಹ್ಮದ್ ರಶ್ದಿವರೊಂದಿಗೆ ಜೋಡಿಯಾದರು.

ರಫಿ ಆಗಿನ ಹಲವು ಗಾಯಕರ ಪ್ರಭಾವಕ್ಕೊಳಗಾದರು.ಉದಾಹರಣೆಗೆ ಕೆ.ಎಲ್ ಸೈಗಲ್,ತಲತ್ ಮೆಹಮೂದ್ ಮತ್ತು ಅಧಿಕವಾಗಿ ಜಿ.ಎಂ ದುರಾನಿಯವರ ಶೈಲಿಗಳನ್ನು ಅವರ ಹಾಡುಗಳಲ್ಲಿ ಕೇಳಬಹುದಾಗಿದೆ. ಅವರು ತಮ್ಮ ಇಂತಹ ಮಾದರಿಗಳಲ್ಲಿ "ಹಮ್ಕೊ ಹಸ್ತೆ ದೇಖ್ ಜಮಾನಾ ಜಲತಾ ಹೈ (ಹಮ್ ಸಬ್ ಚೋರ್ ಹೈ, ೧೯೫೬)] ಮತ್ತು"ಖಬರ್ ಕಿಸಿ ಕೊ ನಹಿ, ವೊ ಕಿಧರ್ ದೇಖತೆ (ಬೆಕಸೂರ್, ೧೯೫೦), ಇತ್ಯಾದಿಗಳಲ್ಲಿ ತಮ್ಮನ್ನು ಪ್ರಭಾವಿಸಿದವರೊಂದಿಗೆ ಹಾಡಿದ್ದಾರೆ.
ಕುಟುಂಬದೊಡನೆ ರಫಿ

ರಫಿ ಅವರು ೧೯೪೫ ರಲ್ಲಿ ತಮ್ಮ ಸಂಭಂಧಿ ಬಶಿರಾ,ಅವರ ಸಂಕ್ಷಿಪ್ತವಾದ "ಮಾಝಿ"ಅವರನ್ನು ತಮ್ಮ ಹಳ್ಳಿಯಲ್ಲಿಯೇ ವಿವಾಹವಾದರು.ಅವರು ನಾಲ್ಕು ಪುತ್ರರು ಮತ್ತು ಮೂವರು ಪುತ್ರಿಯರಿದ್ದಾರೆ. ಅವರು ಅತ್ಯಂತ ಶಿಸ್ತಿನ ವ್ಯಕ್ತಿ ಧಾರ್ಮಿಕ ಸ್ವಭಾವದ ಉತ್ತಮ ವ್ಯಕ್ತಿಯಾಗಿದ್ದರು  ಅವರು ಕುಟುಂಬದ ವ್ಯಕ್ತಿ,ಧ್ವನಿ ಮುದ್ರಣದ ಕೊಠಡಿಯಿಂದ ಅಲ್ಲಿನ ವರೆಗೂ ಅವರು ಶಿಸ್ತಿನ ಸಿಪಾಯಿ ಆಗಿದ್ದಾರೆ. ಅವರು ಚಲನಚಿತ್ರಗಳ ಸಮಾರಂಭಗಳಲ್ಲಿ ಭಾಗವಹಿಸುತ್ತಿರಲಿಲ್ಲ,ಅವರು ಧೂಮಪಾನ ಅಥವಾ ಮದ್ಯಪಾನ ಮಾಡುತ್ತಿರಲಿಲ್ಲ. ಅವರು ತಮ್ಮ ರಿಯಾಜ್ (ಸಂಗೀತ ಅಭ್ಯಾಸ)ವನ್ನು ಮುಂಜಾನೆ ೩ ರಿಂದ ೭ ರವರೆಗೆ ಅತ್ಯಂತ ವ್ಯವಸ್ಥಿತವಾಗಿ ಮಾಡುತ್ತಿದ್ದರು. ಅವರ ಹವ್ಯಾಸಗಳೆಂದರೆ ಕೇರಮ್ ಮತ್ತು ಬ್ಯಾಂಡ್ಮಿಟನ್ ಮತ್ತು ಪತಂಗ ಹಾರಿಸುವಿಕೆ.  
ಸರ್ವಪಲ್ಲಿ ರಾಧಾಕೃಷ್ಣನ್  ರೊಂದಿಗೆ ರಫಿ
ತಮ್ಮ ೪೦ ವರ್ಷಗಳ ವೃತ್ತಿ ಜೀವನದಲ್ಲಿ ರಫಿ ಸುಮಾರು ೨೬,೦೦೦ ಚಲನಚಿತ್ರಗೀತೆಗಳಿಗೆ ಕಂಠದಾನ ಮಾಡಿದ್ದಾರೆ ಅವರ ಹಾಡುಗಳಲ್ಲಿ ಶಾಸ್ತ್ರೀಯದಿಂದ ಹಿಡಿದು ದೇಶಭಕ್ತಿ ಗೀತೆಗಳ ವರೆಗೆ ವಿಸ್ತರಿಸಿವೆ.ಕವಾಲಿಗಳಿಂದ ಹಿಡಿದು ಘಜಲ್ಸ್ ಮತ್ತು ಭಜನ್ಸ್ ಮತ್ತು ಮೃದು ಮಧುರ ಪ್ರೇಮ ಗೀತೆಗಳು ಅವರ ಪ್ರಮುಖ ಕೊಡುಗೆಗಳಾಗಿವೆ. ಅವರು ಹಿಂದಿ  ಮತ್ತು ಉರ್ದು  ಭಾಷೆಗಳಲ್ಲಿ ಅತ್ಯುತ್ತಮ ಹಿಡಿತ ಹೊಂದಿದ್ದರಿಂದ ಅವರಿಗೆ ಈ ವಿಭಿನ್ನತೆ ಸಾಧನೆ ಸಾಧ್ಯವಾಗಿದೆ. ಅವರು ಹಲವಾರು ಭಾರತೀಯ ಭಾಷೆಗಳಲ್ಲಿ ಹಾಡಿದ್ದಾರೆ,ಅದರಲ್ಲಿ  ಹಿಂದಿ ,ಕೊಂಕಣಿ,  ಉರ್ದು , ಭೋಜಪುರ್,ಒರಿಯಾ,ಬೆಂಗಾಲಿ, ಪಂಜಾಬಿ,ಮರಾಠಿ,ಸಿಂಧಿ, ಕನ್ನಡ,ಗುಜರಾತಿ, ,ಮಾಘಿ, ಮತ್ತು ಇನ್ನೂ ಹಲವಾರು ಭಾಷೆ  ಗಳಲ್ಲಿಯೂ ಕಂಠದಾನ ಮಾಡಿದ ಖ್ಯಾತಿ ಅವರದು. ಅವರು ಕೆಲವು ಇಂಗ್ಲೀಶ್ ಪರ್ಸಿಯನ್,  ಸ್ಪಾನಿಶ್  ಮತ್ತು ಡಚ್ ಹಾಡುಗಳನ್ನೂ ಧ್ವನಿ ಮುದ್ರಣ ಮಾಡಿದ್ದಾರೆ.
ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ಜುಲೈ ೨೪,೨೦೧೦ ರಲ್ಲಿ ಪ್ರಕಟವಾದ ಲೇಖನವೊಂದರಲ್ಲಿ ಅವರ ಧ್ವನಿ ಎಂದರೆ "ಸುಮಾರು೧೦೧ ಪ್ರಕಾರದಲ್ಲಿ "ಐ ಲೌ ಯು"ವನ್ನು ಒಂದೇ ಹಾಡಿನಲ್ಲಿ ಹೇಳಿಸಬೇಕೆಂದರೆ ಮೊಹಮ್ಮದ ರಫಿ ಅವುಗಳನ್ನೆಲ್ಲಾ ಬಲ್ಲರು ಎಂದು ವರ್ಣಿಸಿದೆ. ಅತ್ಯಂತ ಸಣ್ಣ ಪ್ರಕಾರದ ಮರಿ ಪ್ರೀತಿ,ಎಳೆಯ ವಯಸ್ಸಿನ ಅಪಕ್ವ ಪ್ರೇಮದ ರೋಮಾಂಚನ,ಯಾವುದೇ ನಿರೀಕ್ಷೆಗಳಿಲ್ಲದ ಪ್ರೀತಿಯ ತತ್ವ ಮತ್ತು ಹೃದಯ ಭಗ್ನವಾದ ದುರಂತ ಪ್ರೇಮ-ಹೀಗೆ ಯಾವುದನ್ನೂ ಅವರು ಸಮರ್ಪಕ ಭಾವಗಳಲ್ಲಿ ಅಭಿವ್ಯಕ್ತಿಗೊಳಿಸುವಲ್ಲಿ ಸಫಲರಾಗಿದ್ದಾರೆ. ಅದು ಬರೀ ಪ್ರೇಮವಲ್ಲ,ಅದು ಜೀವನದ ನವರಸಗಳ ಸಂಗಮವಿದ್ದಂತೆ ತೋರಿಸಿದ್ದಾರೆ-ವಿಫಲ ಕವಿಯೊಬ್ಬನ ಮರೆವುಗಳಿವೆ,ಕವಿಯೊಬ್ಬನ ಸಕ್ರಿಯ ಕ್ರಿಯಾಶೀಲತೆ ಇದೆ,ಓರ್ವ ಸಾಲದ ಹೊರೆಹೊತ್ತ ರೈತನೊಬ್ಬನ ನಿರಾಸೆ ಇದೆ,ಹೀಗೆ ಇವರೆಲ್ಲರ ಸೂಕ್ತ ಸಂದರ್ಭದ ಧ್ವನಿಯಾಗಿದ್ದಾರೆ.ರಫಿ ಅವರ ನಾಲ್ಕು ದಶಕಗಳ ಈ ವೃತ್ತಿ ಜೀವನವು ಪ್ರತಿ ಋತು ಮತ್ತು ಪ್ರತಿ ಕಾರಣಕ್ಕೂ ಸೂಕ್ತವಾಗಿತ್ತು."ಅವರು ೫ ನ್ಯಾಶನಲ್ ಅವಾರ್ಡ್ಸ್ ರಾಷ್ಟ್ರೀಯ ಪುರಸ್ಕಾರ ಮತ್ತು ಆರು ಬಾರಿ ಫಿಲಂ ಫೇರ್ ಅವಾರ್ಡ್ ಗೆ ಪಾತ್ರರಾಗಿದ್ದಾರೆ.  ೧೯೬೭ ರಲ್ಲಿ ಪಧ್ಮ ಶ್ರೀ  ಪ್ರಶಸ್ತಿಯನ್ನು ಭಾರತ ಸರ್ಕಾರ ರಫಿಯವರಿಗೆ ನೀಡಿ ಸತ್ಕರಿಸಿತು.
 ರಫಿಯವರ ವ್ರುತ್ತಿಬದ್ದತೆಗೆ  ಸಾಕ್ಷಿಯಾಗಿ ಹಲವಾರು ಘಟನೆಗಳು ನಡೆದಿದ್ದರೂ  ಲತಾ ಮಂಗೇಶ್ಕರ್ ಹಾಗು ರಫಿಯವರ ಈ ಘಟನೆ ಮರೆಯಲಾಗದ್ದು . ಇದು ಹಿಂದಿ ಚಿತ್ರರಂಗದ ಐತಿಹಾಸಿಕ ಘಟನೆಯಾಗಿ ಉಳಿದಿದೆ.
ಮೊಹಮದ್ ರಫಿ ಹಾಗು ಲತಾ ಮಂಗೇಶ್ಕರ್

ಲತಾ ಮಂಗೇಶ್ಕರ್ ಆಗ ರಫಿಯ ಬೇಡಿಕೆ ಪರಿಗಣಿಸಿ ೧೯೬೨-೧೯೬೩ ರಲ್ಲಿ ತಮ್ಮ ಬೇಡಿಕೆಯಡಿ ತಮ್ಮ ರಾಜಧನದ ಪ್ರಮಾಣದ ಶೇಕಡಾ ೫ ರಷ್ಟರ ಪಾಲು ಕೇಳಲು ಅದೇ ಅರ್ಧದಷ್ಟು ಪಾಲು ಕೇಳಲು ಆಗ್ರಹಿಸಿದಾಗ ಅದು ಸಂಯೋಜಕರ ಗಲಿಬಿಲಿಗೆ ಕಾರಣವಾಗುತ್ತದೆ. ಲತಾ ಅವರ ಬೇಡಿಕೆ ಹಿನ್ನಲೆಯಲ್ಲಿ ಈ ಜೋಡಿ ಹಾಡಿಗಾಗಿ ಸಂಗೀತ ನಿರ್ದೇಶಕರುಗಳು ಅರ್ಧ ಸಂಭಾವನಾ ರಾಜಧನಕ್ಕೊಪ್ಪಬೇಕಲ್ಲದೇ ೫ ರ ಶೇಕಡಾವನ್ನು ಸಂಯೋಜನಕನ ಪಾಲಿಗಿರಲೆಂದು ಹೇಳಿದ್ದರು. ರಫಿ ಹೇಳುವಂತೆ ತಮ್ಮ ಹಾಡಿಗಾಗಿನ ಬೇಡಿಕೆಯ ಸಂಭಾವನೆ ನೀಡಿದ ಅನಂತರ ನಿರ್ಮಾಪಕ-ತಮ್ಮ ಜವಾಬ್ದಾರಿ ಕೊನೆಯಾಗುವುದೆಂದು ಹೇಳಿಕೆ ನೀಡಿದ್ದಾರೆ. ಅದರ ನಂತರ ಚಿತ್ರ ಯಶಸ್ಸಾದರೆ ಚಿತ್ರ ನಿರ್ಮಾಪಕನಿಗೆ ಉತ್ತಮ ಅದೃಷ್ಟ,ಅದಕ್ಕೆ ಗ್ರಾಮ್ಕೊ (HMV)ದ ಸಂಭಾವನೆಯನ್ನು ಅವರೇ ಪಡೆಯುವ ಅವಕಾಶ ಪಡೆಯುತ್ತಾರೆ.
ಒಂದು ಚಿತ್ರ ವಿಫಲವಾದರೆ ಈಗಾಗಲೇ ತಾನು ತನ್ನ ಹಾಡಿಗೆ ಸಂಭಾವನೆ ಪಡೆದಿದ್ದು ಹೀಗಾಗಿ ಚಿತ್ರ ನಿರ್ಮಾಪಕ ಮತ್ತು ತಾವು ಆ ಜವಾಬ್ದಾರಿ ಕಳೆದುಕೊಳ್ಳುತ್ತೇವೆ,ಎನ್ನುತ್ತಾರೆ. ರಫಿ ಹೇಳುವಂತೆ "ನಾವು ಹಿನ್ನಲೆ ಗಾಯಕರಾಗಿ ಹಾಡನ್ನು ಸೃಜಿಸಲಾರೆವು,ನಾವು ಕೇವಲ ಅದನ್ನು ಪರದೆ ಮೇಲೆ ಸಂಗೀತ ನಿರ್ದೇಶಕ ಹೇಳಿದಂತೆ ಮರು-ಸೃಷ್ಟಿ ಮಾಡುತ್ತೇವೆ. ನಾವು ಹಾಡುತ್ತೇವೆ,ಅವರು ಸಂಭಾವನೆ ನೀಡುತ್ತಾರೆ,ಅಲ್ಲಿಗೆ ನಮ್ಮಿಬ್ಬರ ಬದ್ದತೆ ಮುಗಿಯಿತು

ಲತಾ,ಈ ಹೇಳಿಕೆಯು ಸಂಭಾವನಾ ವಿಷಯದಲ್ಲಿ ಇದು ಅಸ್ಥಿರತೆಯನ್ನು ಹುಟ್ಟು ಹಾಕುತ್ತದೆ ಎನ್ನುತ್ತಾರೆ. ಲತಾ ಅವರು ನಂತರ ತಾವು ರಫಿಯೊಂದಿಗೆ ಹಾಡುವುದಿಲ್ಲ ಎಂದು ಹೇಳಿದರು,ಆದರೆ ರಫಿ ಒಬ್ಬರೇ ಆಗ ಲತಾ ಜೊತೆ ಹಾಡಲು ಉತ್ಸುಕತೆ ತೋರಿದ್ದರು. ಅದಾದ ನಂತರ ಎಸ್.ಡಿ ಬರ್ಮನ್ ಅವರ ಸಂಧಾನದ ಮೂಲಕ ತಮ್ಮ ನಿರ್ಧಾರ ಬದಲಿಸಿ ಜೊತೆಯಾಗಿ ಹಾಡಲು ಒಪ್ಪಿದರು.
ಮೋಹದ ರಫಿ  ಹಾಡುಗಳು ಇಂದಿಗೂ ಅಮರ.
ರಫಿ ಅವರು ಜುಲೈ೩೧,೧೯೮೦,ಗುರುವಾರ ರಾತ್ರಿ ೧೦:೫೦ ರ ಸುಮಾರು ಹೃದಯಾಘಾತಕ್ಕೊಳಗಾಗಿ ಮೃತರಾದರುಅವರ ಕೊನೆಯ ಹಾಡು "ಶ್ಯಾಮ್ ಫಿರ್ ಕ್ಯುಂವ್ ಉದಾಸ್ ಹೈ ದೋಸ್ತ್"(ಆಸ್ ಪಾಸ್ )ಇದಕ್ಕಾಗಿ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಅವರ ಹಾಡಿಗೆ ಧ್ವನಿ ನೀಡಿದ್ದು ತಮ್ಮ ಸಾವಿನ ಕೆಲವು ಗಂಟೆಗಳ ಮುಂಚೆ ಧ್ವನಿಮುದ್ರಣ ಮಾಡಿದ್ದರು. ಅವರು ನಾಲ್ವರು ಪುತ್ರರು (ಸಈದ್ ರಫಿ,ಖಲೀಲ್ ರಫಿ,ಹಮಿದ್ ರಫಿ,ಶಾಹಿದ್ ರಫಿ)ಮೂವರು ಪುತ್ರಿಯರಾದ (ಪರವೀನ್,ನಸ್ರೀನ್,ಯಾಸ್ಮಿನ್)ಮತ್ತು ೧೮ ಮೊಮ್ಮಕ್ಕಳನ್ನು ಅಗಲಿದ್ದಾರೆ.ಅಂದು ಭಾರತೀಯ ಸಂಗೀತ ರಂಗದಲ್ಲಿ ಒಂದು ಮರೆಯಲಾರದ ದ್ವನಿ ಅಸ್ತಂಗತವಾಯಿತು. ಆದರೆ ಅವರು ಹಾಡಿರುವ ಹಾಡುಗಳು ಪ್ರತಿಕ್ಷಣವೂ  ವಿಶ್ವದೆಲ್ಲೆಡೆ ಪ್ರಸರಿಸುತ್ತಾ ಅವರನ್ನು ಜೀವಂತವಾಗಿ ಇಟ್ಟಿವೆ. ರಫಿಯ ಬಗ್ಗೆ ಎಷ್ಟು ಬರೆದರೂ ಸಾಲದಷ್ಟು ಮಾಹಿತಿಗಳು ನಮ್ಮ ಸುತ್ತ ಹರಡಿವೆ. ರಫಿಯ ನೆನಪಲ್ಲಿ  ಅಂತರಜಾಲದಿಂದ  ಮಾಹಿತಿ ಹೆಕ್ಕಿ , ಚಿತ್ರಗಳನ್ನು ಗೂಗಲ್ ಸರ್ಚ್ ನಲ್ಲಿ ಇಳಿಸಿ, ವಿಕಿ ಪೀಡಿಯಾ ಸಹಕಾರ ಪಡೆದು  ಈ ಲೇಖನವನ್ನು ಭಟ್ಟಿ ಇಳಿಸಿದ್ದೇನೆ. ಇವರಿಗೆಲ್ಲಾ  ಕೃತಜ್ಞತೆಗಳು . ರಫಿಯನೆನಪಿನಲ್ಲಿ ಇವತ್ತು ರಫಿ ಹಾಡನ್ನು ಕೇಳುತ್ತಾ ಅಗಲಿದ ಭಾರತದ ನಕ್ಷತ್ರಕ್ಕೆಪ್ರೀತಿಯ  ನಮನ  ಸಲ್ಲಿಸೋಣ ಬನ್ನಿ
ಗೌರವ ಪ್ರಶಸ್ತಿಗಳು
  • ೧೯೪೮ - ರಫಿ ಅವರು ಭಾರತ ಪ್ರಧಾನಿ ಯವರಿಂದ  ಭಾರತದ ಮೊದಲ ಸ್ವಾತಂತ್ರ್ಯ ದಿನದಂದು ಬೆಳ್ಳಿ ಪದಕ ಪಡೆದರು
  • ೧೯೬೭ -  ಪಧ್ಮ ಶ್ರೀ  ಪುರಸ್ಕಾರ ಭಾರತ ಸರ್ಕಾರದಿಂದ  ನೀಡಲಾಯಿತು.
  • ೧೯೭೪ - ಫಿಲ್ಮ್ ವರ್ಲ್ಡ್ ಮ್ಯಾಗ್ಜಿನ್ ನಿಂದ ಬೆಸ್ಟ್ ಸಿಂಗರ್ ಅವಾರ್ಡ್ ನ್ನು "ತೇರೀ ಗಲಿಯೊಮೆ ನಾ ರಖೆಂಗೇ ಕದಮ್ ಆಜ್ ಕೆ ಬಾದ್" ಹಾಡಿಗೆ ಪ್ರಶಸ್ತಿ ಬಂತು (ಹವಸ್,೧೯೭೪).
  • ೨೦೦೧ - ರಫಿ ಅವರನ್ನು "ಸಹಸ್ರಮಾನದ ಅತ್ಯುತ್ತಮ ಗಾಯಕ" ಪ್ರಶಸ್ತಿಯನ್ನು ಮುಂಬಯಿನಲ್ಲಿನ ಹೀರೋ ಹೊಂಡಾ  ಮತ್ತು ಸ್ಟಾರ್ ಡಸ್ಟ್ ಮ್ಯಾಗ್ಜಿನ್ ಗಳು ಜನವರಿ ೭, ೨೦೦೧ರಲ್ಲಿ ನೀಡಿದವು. ರಫಿ ಈ ಜನಮತದಲ್ಲಿ ೭೦% ರಷ್ಟು ಮತ ಪಡೆದರು.
ರಾಷ್ಟ್ರೀಯ ಚಲನ ಚಿತ್ರ ಪುರಸ್ಕಾರ :

ವರ್ಷ ಹಾಡು (ಚಿತ್ರೀಕರಣ) ಸಂಗೀತ ನಿರ್ದೇಶಕ ಗೀತರಚನಕಾರ
೧೯೫೭ "ಜಿನ್ಹೆನಾ ನಾಜ್ ಹೈ ಹಿಂದ್ ಪಾರ್r" ಪ್ಯಾಸಾ ಸಚಿನ್ ದೇವ್ ಬರ್ಮನ್ ಸಾಹಿರ್ ಲಿಸಿಯಾನ್ವಿ
೧೯೬೪ "ಚಾಹೂಂಗಾ ಮೈ ತುಜೆ " ದೋಸ್ತಿ ಲಕ್ಷ್ಮೀಕಾಂತ್-ಪ್ಯಾರೇಲಾಲ್ ಮಜ್ರೂಹ್ ಸುಲ್ತಾನ್ ಪುರಿ
೧೯೬೬ "ಬಾಹಾರೋಂ ಫೂಲ್ ಬರಸಾವೊ" ಸೂರಜ್‌‌‌ ಶಂಕರ್ ಜೈಕಿಶನ್ Shailendra
೧೯೬೭] "ಬಾಬುಲ್ ಕಿ ದುವಾಯೆ" ನೀಲ್ ಕಮಲ್‌ ರವಿ ಸಾಹೀರ್ ಲುದಿಯಾನ್ವಿ
೧೯೭೭ "ಕ್ಯಾ ಹುವಾ ತೇರಾ ವಾದಾ" ಹಮ್ ಕಿಸಿಸಿಸೆ ಕಮ್ ನಹಿ ರಾಹುಲ ದೇವ್ ಬರ್ಮನ್ ಮಜ್ರೂಹ್ ಸುಲ್ತಾನ್ ಪುರಿ
ಫಿಲಂ ಫೇರ್ ಪ್ರಶಸ್ತಿಗಳು .:
ಕಿಶೋರ್ ಕುಮಾರ್ ಜೊತೆ ರಫಿ ಸಲ್ಲಾಪ !!!!

ವರ್ಷ ಹಾಡು (ಚಿತ್ರೀಕರಣ) ಸಂಗೀತ ನಿರ್ದೇಶಕ ಗೀತರಚನಕಾರ
೧೯೬೦ "ಚೌದಹ್ವೀಂ ಕಾ ಚಾಂದ್ ಹೊ" "ಚೌದಹ್ವೀಂ ಕಾ ಚಾಂದ್ " ಬಾಂಬೆ ರವಿ ಶಕೀಲ್ ಬದಾಯೂನಿ
೧೯೬೧ "ತೇರಿ ಪ್ಯಾರೀ ಪ್ಯಾರೀ ಸೂರತ್ ಕೊ" ಸಸುರಾಲ್ ಶಂಕರ್ ಜೈಕಿಶನ್ ಶೈಲೇಂದ್ರ
೧೯೬೪ "ಚಾಹೂಂಗಾ ಮೈ ತುಝೆ" ದೋಸ್ತಿ ಲಕ್ಷ್ಮೀಕಾಂತ-ಪ್ಯಾರೆಲಾಲ್ ಮಜ್ರೂಹ್ ಸುಲ್ತಾನ್ ಪುರಿ
೧೯೬೬ "ಬಹಾರೋ ಫೂಲ್ ಬರಸಾವೊ" ಸೂರಜ್‌‌‌ ಶಂಕರ್ ಜೈಕಿಶನ್ ಶೈಲೇಂದ್ರ
೧೯೬೮ "ದಿಲ್ ಕೆ ಝರೋಂಕೆ ಮೆ" ಬ್ರಹ್ಮಚಾರಿ ಶಂಕರ್ ಜೈಕಿಶನ್ ಶೈಲೇಂದ್ರ
೧೯೭೭ "ಕ್ಯಾ ಹುವಾ ತೇರಾ ವಾದಾ" ಹಮ್ ಕಿಸಿಸೆ ಕಮ್ ನಹಿ ರಾಹುಲ ದೇವ್ ಬರ್ಮನ್ ಮಜ್ರೂಹ್ ಸುಲ್ತಂಪುರಿ
ನಾಮನಿರ್ದೇಶಿತಗೊಂಡಿದ್ದು :
ವರ್ಷ ಹಾಡು (ಚಿತ್ರೀಕರಣ) ಸಂಗೀತ ನಿರ್ದೇಶಕ ಗೀತರಚನಕಾರ
1961 "ಹುಸ್ನವಾಲೇ ತೇರಾ ಜವಾಬ್ ನಹೀ" ಘರಾನಾ ರವಿ ಶಕೀಲ್ ಬದಾಯುನಿ
1962 "ಏ ಗುಲಾಬದನ್ ಏ ಗುಲಾಬದನ್" ಪ್ರೊಫೆಸರ್ ಶಂಕರ್ ಜೈಕಿಶನ್ ಶೈಲೇಂದ್ರ
1963 "ಮೇರೆ ಮೆಹಬೂಬ್ ತುಝೆ" ಮೇರೆ ಮೆಹಬೂಬ್ ನೌಶಾದ್ ಶಕೀಲ್ ಬದಾಯುನಿ
1965 "ಛೂ ಲೇನೆ ದೊ ನಾಜುಕ್ ಹೋಂಟೋಂಕೊ" ಕಾಜಲ್ ರವಿ
೧೯೬೮ "ಮೈ ಗಾಂವೂ ತುಮ್ ಸೋ ಜಾವೊ" ಬ್ರಹ್ಮಚಾರಿ ಶಂಕರ್ ಜೈಕಿಶನ್ ಶೈಲೇಂದ್ರ
೧೯೬೯ "ಬಡಿ ಮಸ್ತಾನಿ ಹೈ" ಜೀನೆ ಕಿ ರಾಹ್ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಆನಂದ್ ಭಕ್ಷಿ (/೦}
೧೯೭೦ "ಖಿಲೋನಾ, ಜಾನ್ ಕರ್" ಖಿಲೋನಾ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಆನಂದ್ ಭಕ್ಷಿ (/೦}
೧೯೭೩ "ಹಮ್ ಕೊ ತೊ ಜಾನ್ ಸೆ ಪ್ಯಾರಿ" ನೈನಾ ಶಂಕರ್ ಜೈಕಿಶನ್ ಹಸರತ್ ಜೈಪುರಿ
೧೯೭೪ "ಅಚ್ಛಾ ಹೀ ಹುವಾ ದಿಲ್ ಟೂಟ್ ಗಯಾ" ಮಾ ಬಹೆನ್ ಓರ್ ಬೀವಿ ಶಾರದಾ ಖಮರ ಜಲಾಲಾಬಾದಿ, ವೇದ್ಪಾಲ್ ವರ್ಮಾ
೧೯೭೭ "ಪರ್ಧಾ ಹೈ ಪರ್ಧಾ" ಅಮರ್ ಅಕ್ಬರ್ ಅಂತೋನಿ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಆನಂದ್ ಭಕ್ಷಿ (/೦}
೧೯೭೮ "ಆದಮೀ ಮುಸಾಫಿರ್ ಹೈ" ಅಪ್ನಾಪನ್ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಆನಂದ್ ಭಕ್ಷಿ (/೦}
೧೯೭೯ "ಚಲೋ ರೇ ಡೋಲಿ ಉಠಾವೊ ಕಹಾರ್" ಜಾನಿ ದುಶ್ಮನ್ ಲಕ್ಷ್ಮಿಕಾಂತ್-ಪ್ಯಾರೆಲಾಲ್ ವರ್ಮಾ ಮಲಿಕ್
೧೯೮೦ "ಮೇರೆ ದೋಸ್ತ್ ಕಿಸ್ಸಾ ಯೆಹೆ" ದೋಸ್ತಾನಾ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಆನಂದ್ ಭಕ್ಷಿ (/೦}
೧೯೮೦ "ದರ್ದ್-ಎ-ದಿಲ್ ದರ್ದ್-ಎ-ಜಿಗರ್" ಕರ್ಜ್ ಲಕ್ಷ್ಮಿಕಾಂತ್-ಪ್ಯಾರೆಲಾಲ್ ಆನಂದ್ ಭಕ್ಷಿ (/೦}
೧೯೮೦ "ಮೈನೆ ಪೂಛಾ ಚಾಂದ್ ಸೆ" ಅಬ್ದುಲ್ಲ್ಹಾ ರಾಹುಲ ದೇವ್ ಬರ್ಮನ್ ಆನಂದ್ ಭಕ್ಷಿ (/೦}
ಇತರ ಪ್ರಶಸ್ತಿಗಳು :
ವಿಜೇತ
ವರ್ಷ (ಚಿತ್ರೀಕರಣ) ಸಂಗೀತ ನಿರ್ದೇಶಕ ಗೀತರಚನಕಾರ
1957 ತುಮ್ಸಾ ನಹಿ ದೇಖಾ   ಓ.ಪಿ.ನಯ್ಯರ್ ಮಜ್ರೂಹ್ ಸುಲ್ತಂಪುರಿ
೧೯೬೫ ದೋಸ್ತಿ ಲಕ್ಷ್ಮಿಕಾಂತ-ಪ್ಯಾರೆಲಾಲ್ ಮಜ್ರೂಹ್ ಸುಲ್ತಂಪುರಿ
೧೯೬೬ ಆರ್ಜೂ ಶಂಕರ್ ಜೈಕಿಶನ್ ಹಸರತ್ ಜೈಪುರಿ
 
ಸುರ್ ಶೃಂಗಾರ್ ಪ್ರಶಸ್ತಿ 
ವಿಜೇತ
ವರ್ಷ (ಚಿತ್ರೀಕರಣ) ಸಂಗೀತ ನಿರ್ದೇಶಕ ಗೀತರಚನಕಾರ



1964ಚಿತ್ರಲೇಖಾರೋಶನ್
ಸಾಹಿರ್ ಲುಧಿಯಾನ್ವಿ    

Sunday, December 11, 2011

ಕನ್ನಡ ಚಿತ್ರರಂಗದ ಪ್ರಯೋಗ ಶೀಲ ಸಂಗೀತ ನಿರ್ದೇಶಕ ಜಿ.ಕೆ.ವಿ.ನಿಮಗೆ ಗೊತ್ತೇ ???




ಜಿ . ಕೆ .ವಿ .

ಮೊನ್ನೆ ಹಾಗೆ ಹಳೆಯ ಚಿತ್ರಗೀತೆ ಕೇಳುತ್ತಿದ್ದೆ , "ಆಗದು ಎಂದು ಕೈಲಾಗದು ಎಂದೂ ಕೈಕಟ್ಟಿ ಕುಳಿತರೆ" ಹಾಡು ಬರುತ್ತಿತ್ತು , ಪಕ್ಕದಲ್ಲಿ ಕುಳಿತಿದ್ದ ನನ್ನ ಮಗ [ ಆಧುನಿಕ ಸಂಗೀತ ಪ್ರಿಯ ] ಕೇಳಿದ, ಅಪ್ಪ... ಹಾಡಿನ ಸಂಗೀತ ಚೆನ್ನಾಗಿದೆ ಮ್ಯೂಸಿಕ್ ಕಂಪೋಸರ್ ಯಾರು ಅಂತಾ ಕೇಳಿದ. ನನಗೂ ಅಚ್ಚರಿಯಾಗಿ ಸಂಗೀತ ನಿರ್ದೇಶಕರ ಹೆಸರು ಹೇಳಿ ಹಾಡಿನ ಸಂಗೀತ ಯಾಕೆ ಇಷ್ಟ ಆಯ್ತು? ಎಂದೇ , ಅದಕ್ಕೆ ಅವನು ಹಾಡನ್ನು ಟಿ.ವಿ.ಯಲ್ಲಿ ನೋಡಿದ್ದೇ ಅಲ್ಲಿನ ದೃಶ್ಯಗಳಲ್ಲಿ ಬರುವ ಮೆಷಿನ್ ಶಬ್ಧಗಳನ್ನೂ ಹಾಡಿಗೆ ಪೂರಕವಾಗುವಂತೆ ಸಂಗೀತದಲ್ಲಿ ನುಡಿಸಿ ಹಾಡಿನಲ್ಲಿ ತಂದಿದ್ದಾರೆ , ಹಾಡಿನ ದೃಶ್ಯಕ್ಕೂ ಸಂಗೀತಕ್ಕೂ ಬಹಳ ಹೊಂದಾಣಿಕೆ ಇದೆ ಅದಕ್ಕೆ ಅವತ್ತಿನಿಂದ ಹಾಡಿನ ಸಂಗೀತಗಾರ ಯಾರು ಎಂಬ ಬಗ್ಗೆ ಕುತೂಹಲ ಇತ್ತು ಅದಕ್ಕೆ ಕೇಳಿದೆ ಅಂದಾ ....!
ಇವತ್ತಿನ ಪೀಳಿಗೆಗೆ ಆ ಅದ್ಭುತ  ವ್ಯಕ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದಿರಲಾರದು ,ಆದರೆ ಹಾಡಿನ ಪರಿಚಯವಂತೂ ಇದ್ದೆ ಇರುತ್ತದೆ . ಆದರೆ ನಿಮಗೆ ತಿಳಿದಿರಬಹುದು ಈ ವ್ಯಕ್ತಿಯ ಬಗ್ಗೆ  ಸ್ವಲ್ಪ ಕ್ಲೂ ಬೇಕಾ ???  ೧] ಕನ್ನಡ ಚಿತ್ರ ರಂಗದಲ್ಲಿ  ಭೀಮ್ ಸೇನ್ ಜೋಷಿ , ಬಾಲ ಮುರಳಿ ಕೃಷ್ಣ , ಮನ್ನಾಡೆ, ಜೇಸುದಾಸ್, ಸುಮನ್ ಕಲ್ಯಾಣ್ ಪುರ್  ರಂತಹ ದಿಗ್ಗಜಗಳಿಂದ     ಕನ್ನಡ  ಚಿತ್ರಗಳಲ್ಲಿ ಹಾಡು ಹೇಳಿಸಿದ   ಸಾಹಸಿ,
೨] ಡಾ./.ರಾಜ್ ಕುಮಾರ್ ಸಾಮಾನ್ಯ ನಟ ಆಗಿದ್ದ ಕಾಲದಲ್ಲಿ ಅವರ ಪ್ರತಿಭೆಗೆ ಮಾರುಹೋಗಿ  "ಸಂಪತ್ತಿಗೆ ಸವಾಲ್ ", "ಮಹಿಷಾಸುರ ಮರ್ಧಿನಿ" ಚಿತ್ರಗಳಿಗಿಂತ ಮೊದಲೇ ಹಾಡನ್ನು ಹಾಡಿಸಿದ ಪ್ರಯೋಗ ಶೀಲ,
೩} ಸಂಗೀತ ನಿರ್ದೇಶನದ ಜೊತೆಗೆ  ಕನ್ನಡ ಭಾಷೆಯ ಚೆಲುವಿಗೆ ಸೋತು ತಾನು ಕನ್ನಡ ಹಾಡನ್ನು ಹಾಡಿ, ಆ ಸುಂದರ ಹಾಡುಗಳು ಇಂದಿಗೂ ಜನಮನದಲ್ಲಿ ನಿಲ್ಲುವಂತೆ ಮಾಡಿದ  ಛಲವಾದಿ ವ್ಯಕ್ತಿ.
 ೪] ಕನ್ನಡ ದಲ್ಲಿ ನಿರ್ಮಾಣವಾದ ಬಾಂಡ್ ಚಿತ್ರಗಳಿಗೆ  ವಿದೇಶಿ  ಸಂಗೀತ ಸಾಧನಗಳ ಮೂಲಕ ಸಂಗೀತ ನೀಡಿದ ಸಂಗೀತ ನಿರ್ದೇಶಕ.
ಈಗ ಗೊತ್ತಾಗಿರಬೇಕು ???  ಆಲ್ವಾ  !!!!  ಅಯ್ಯೋ ಗೊತಾಗ್ಲಿಲ್ವಾ ???ಹೋಗ್ಲಿ ಬಿಡಿ  ಕೊನೆಯದಾಗಿ  ಒಂದು ಕ್ಲೂ ........................................!!
೪]ಕನ್ನಡ ಚಿತ್ರ ಒಂದಕ್ಕೆ ಅಗತ್ಯ ವಿದ್ದ ಶಹನಾಯಿ ವಾದನಕ್ಕೆಈ ದೇಶದ  ಖ್ಯಾತ ಶಹನಾಯಿ ವಾದಕರಾದ  ಉಸ್ತಾದ್ ಬಿಸ್ಮಿಲ್ಲಾ ಖಾನ್ ರವರನ್ನು ಕರೆತಂದು  ಅವರ ಸಂಗೀತ ಮಾಂತ್ರಿಕತೆಯನ್ನು ಕನ್ನಡಿಗರಿಗೆ ಪರಿಚಯಿಸಿದ ಮಾಂತ್ರಿಕ.

ಜಿ.ಕೆ ವೆಂಕಟೇಶ್

 ಅದ್ಭತ ಗಾಯಕಿ ಸುಮನ್ ಕಲ್ಯಾಣ್ ಪೂರ್

ಅದ್ಭುತ ಗಾಯಕ ಮನ್ನಾ ಡೇ

ಪಂಡಿತ್ ಭೀಮ್ ಸೇನ್ ಜೋಷಿ 
ಕರ್ನಾಟಕ ಸಂಗೀತ ದಿಗ್ಗಜ  ಬಾಲ ಮುರಳಿ ಕೃಷ್ಣ  
ಉಸ್ತಾದ್ ಬಿಸ್ಮಿಲ್ಲಾ ಖಾನ್
ಈಗ ಗೊತ್ತಾಗಿರುತ್ತೆ ಬಿಡಿ !! ಹೌದು  ನಿಮ್ಮ ಅನಿಸಿಕೆ ಸರಿ  ನಾನು ಈಗ ಬರೆಯಲು ಹೊರಟಿರುವುದು ಕನ್ನಡ ಚಿತ್ರ ರಂಗದ ಒಬ್ಬ  ಮಹಾನ್  ಸಂಗೀತ ನಿರ್ದೇಶಕ ಜಿ.ಕೆ.ವೆಂಕಟೇಶ್ ಬಗ್ಗೆ . ಹೌದು ನಾನು ಬಾಲ್ಯ ದಿಂದಲೂ ಕನ್ನಡ ಚಿತ್ರ ರಂಗದ ಬಹಳಷ್ಟು ಹಾಡುಗಳನ್ನು ರೇಡಿಯೋ ದಲ್ಲಿ ಕೇಳುತ್ತಾ ಬೆಳೆದವನು.ಚಿಕ್ಕವನಿದ್ದಾಗಿನಿಂದಲೂ  ಇವರ ಸಂಗೀತದ ಹಾಡುಗಳು ನನ್ನ ಗಮನ ಸೆಳೆಯುತ್ತಿದ್ದವು. "ಸಂಧ್ಯಾ ರಾಗದ  ಈ ಪರಿಯ ಸೊಬಗು " " ದೂರದ ಬೆಟ್ಟದ ಪ್ರೀತಿನೆ ಆ ದ್ಯಾವ್ರು ತಂದಾ " "ಬಂಗಾರದ ಮನುಷ್ಯದ  ಎಲ್ಲಾ ಹಾಡುಗಳು  " ಭೂತಯ್ಯನ ಮಗ ಅಯ್ಯು , ಕಸ್ತೂರಿ ನಿವಾಸ, ಹಾಲು ಜೇನು, ಸನಾದಿ  ಅಪ್ಪಣ್ಣ  ,ಸಂಪತ್ತಿಗೆ ಸವಾಲು,  ಚಿತ್ರದ  ಎಲ್ಲಾ ಹಾಡುಗಳು   ಇನ್ನೂ ಬಹಳಷ್ಟು    ನನ್ನ ಅಚ್ಚುಮೆಚ್ಚಿನ ಹಾಡುಗಳಾಗಿ ಉಳಿದವು ಹಾಗು ಇಂದಿಗೂ ಉಳಿದಿವೆ.   ಬನ್ನಿ ಜಿ.ಕೆ.ವೆಂಕಟೇಶ್ ಬಗ್ಗೆ ತಿಳಿಯೋಣ.                                                                                                                    ಗುರ್ಜದ ಕೃಷ್ಣದಾಸ ವೆಂಕಟೇಶ [ ಜಿ.ಕೆ.ವೆಂಕಟೇಶ್ ಮೂಲ ಹೆಸರು ] ಮೂಲತಃ  ತೆಲುಗಿನವರು, ೨೧-೦೯-೧೯೨೭ ರಲ್ಲಿ ಜನನ , ಚಿಕ್ಕ ವಯಸ್ಸಿನಲ್ಲಿ ತನ್ನ ಅಣ್ಣ ಜಿ.ಕೆ.ಎಸ.ಪತಿ ಅವರಿಂದ ವೀಣಾ ವಾದನ ಕಲಿಕೆ , ನಂತರ  ಮುಂದಿನ ವರ್ಷಗಳಲ್ಲಿ ಸಹ ವೀಣಾ ವಾದಕರಾಗಿ S. V. ವೆಂಕಟರಮನ್ , S. M. ಸುಬ್ಬಯ್ಯ  ನಾಯ್ಡು and C. R. ಸುಬ್ಬುರಾಮನ್ .     ಮುಂತಾದವರಿಗೆ  ಸಾಥ್ ನೀಡಿ ಸಂಗೀತದ ಗರಡಿಯಲ್ಲಿ ಪಳಗಿದರು. ನಂತರ ಒಳ್ಳೆಯ ಹಾಡುಗಾರರೂ ಆಗಿ ತಯಾರಾದ ಕಾರಣ  ಆಕಾಶವಾಣಿ ಯಲ್ಲೂ        ಸಹ ಇವರು ಗಾಯಕರಾಗಿ ಹಾಡಿದ್ದರು . ಆ ನಂತರದ ದಿನಗಳಲ್ಲಿ ಎಂ.ಎಸ.ವಿಶ್ವನಾಥನ್ ,  ಎಸ.ಎಂ ಸುಬ್ಬಯ್ಯ ನಾಯ್ಡು  ಮುಂತಾದ ಗೆಳೆಯರ ಗರಡಿಯಲ್ಲಿ ಸಿನಿಮಾಗಳಿಗೆ ರಾಗ ಸಂಯೋಜನೆ ಕೆಲಸ ಕಲಿತರು . ನಂತರ ತಾವೇ ಸಂಗೀತ ನಿರ್ದೇಶನಕ್ಕಿಳಿದು  ೧೯೫೨ ರಲ್ಲಿ ಮಲಯಾಳಂ ಭಾಷೆಯಲ್ಲಿ ತಯಾರಾಗಿ ತಮಿಳಿಗೆ ಡಬ್ ಆದ   "ನಡಿಗೈ"    ಚಿತ್ರಕ್ಕೆ ಮೊದಲ ಸಂಗೀತ ನಿರ್ದೇಶಿಸಿದರು  , ಮುಂದೆ ೧೯೫೫ ರಲ್ಲಿ  ಡಾ// ರಾಜ್ ಕುಮಾರ್ ಅಭಿನಯದ   "ಸೋದರಿ"      ಚಿತ್ರಕ್ಕೆ ಸ್ವರ ಸಂಯೋಜನೆ ಮಾಡಿದರು  ಎರಡನೇ ಪ್ರಯತ್ನ ಯಶಸ್ವಿಯಾಗಿ ಕನ್ನಡ ಜನರ ಮನಸ್ಸಿಗೆ ಹತ್ತಿರವಾದರು. ಮುಂದೆ ಅದೇ ವರ್ಷ " ಓಹಿಲೇಶ್ವರ  '' ಎಂಬ ಚಿತ್ರದ ಸಂಗೀತ ನೀಡುವ ಅವಕಾಶ ಸಿಕ್ಕಿತು  ಆ ಚಿತ್ರದಲ್ಲಿ ಅಂದರೆ ೧೯೫೫ ರಲ್ಲೇ  ರಾಜಕುಮಾರ್   ಕಂಪನಿ ನಾಟಕದ  ಕಲಾವಿದರಾದ ಕಾರಣ ಹಾಡುಗಾರಿಕೆ   ಇದ್ದೆ ಇರುತ್ತದೆ ಎಂಬ  ಉತ್ಸಾಹದಿಂದ ರಾಜಕುಮಾರ್ ರವರ  ದ್ವನಿಯಲ್ಲಿ "   ಶರಣು "    ಎಂಬ ಭಕ್ತಿ ಪ್ರಧಾನ  ಗೀತೆಯನ್ನು ಹಾಡಿಸಿದರು. ಇದು ರಾಜಕುಮಾರ  ಬದುಕಿನಲ್ಲಿ ಪ್ರಥಮವಾಗಿ ಕನ್ನಡ ಚಿತ್ರರಂಗದ ಲ್ಲಿ  ಚಿತ್ರದಲ್ಲಿ ನಟಿಸಿದ ಜೊತೆಗೆ ಹಾಡಿದ  ಗಾಯಕ  ಎಂಬ ಇತಿಹಾಸಕ್ಕೆ ನಾಂದಿಯಾಯಿತು.                                                                                                                                     [ http://www.raaga.com/player4/?id=170399&mode=100&rand=0.5298554935387211 ]  ರಲ್ಲಿ ಈ ಹಾಡನ್ನು ಕೇಳಬಹುದು. 


 ಅಂದಿನ ದಿನಗಳಲ್ಲಿ ಕನ್ನಡ ಚಿತ್ರಗಳಲ್ಲಿ  ತನ್ನ ಪ್ರತಿಭೆ  ಮೆರೆದ  ಜಿ.ಕೆ.ವೆಂಕಟೇಶ್  , ಟಿ. ಜಿ.ಲಿಂಗಪ್ಪ, ವಿಜಯ ಭಾಸ್ಕರ್  ರವರೊಂದಿಗೆ  ಕನ್ನಡ ಚಿತ್ರರಂಗದಲ್ಲಿ ನೆಲೆ ಕಂಡುಕೊಂಡರು. ಅಂದಿನ ದಿನಗಳಲ್ಲಿ  ಪಿ.ಬಿ. ಶ್ರೀನಿವಾಸ್  ರಂತ  ಹೊಸ ಗಾಯಕರನ್ನು  ಹೆಚ್ಚು ಅವಕಾಶ ನೀಡಿ  ಬೆಳಸಿದ ಜಿ.ಕೆ.ವೆಂಕಟೇಶ್  , ಕನ್ನಡದಲ್ಲಿ ತಯಾರಾದ   ಜೇಮ್ಸ್ ಬಾಂಡ್ ಶೈಲಿಯ           ಚಿತ್ರಗಳಿಗೆ   ಆಧುನಿಕ ವಾಧ್ಯಗಳೊಂದಿಗೆ  ಸಂಗೀತ ನೀಡಿ ದರು.  ಇಂತಹ ಪ್ರಯೋಗಕ್ಕೆ ಕನ್ನದಲ್ಲಿ ಬಹಳ ಪ್ರೋತ್ಸಾಹ ಸಿಕ್ಕಿತು.  ಆ ದಿನಗಳಲಿ  ವಿಶ್ವಾದ್ಯಂತ  ಪ್ರಸಿದ್ದಿ ಹೊಂದಿದ್ದ "ಬೀಟಲ್ಸ್ "     ಹಾಡಿನ ಕಡೆ  ಯುವಕರು ಮುಖ ಮಾಡಿದ್ದನ್ನು ಕಂಡು ಕನ್ನಡ ದಲ್ಲಿ ತಾವೂ ಸಹ ಪ್ರಯೋಗ ಮಾಡಿ   ಡಾ// ರಾಜಕುಮಾರ್ ಅಭಿನಯಿಸಿದ  ಲಗ್ನ ಪತ್ರಿಕೆ ಎಂಬ  ಹಾಸ್ಯ ಚಿತ್ರದಲ್ಲಿ ಸೀನು ಸುಬ್ಬು  ಹಾಡನ್ನು  ವೇಗವಾಗಿ ಹಾಡಿಸಿ ಕೇಳಲು ಇಂಗ್ಲೀಷಿನ  ಬೀಟಲ್ಸ್  ತಂಡದ ಹಾಡಿನಂತೆ  ತಯಾರುಮಾಡಿ ಕೊಟ್ಟು ಗೆದ್ದರು ಇವತ್ತಿಗೂ ಈ ಹಾಡು ವೇಗವಾಗಿ   ಹಾಡಲಾದ  ಕನ್ನಡ ಪಾಪ್   ಹಾಡು , ಹೀಗೆ ಪ್ರಯೋಗ ಮಾಡುತ್ತಾ ಜಿ.ಕೆ.ವೆಂಕಟೇಶ್   ಬಹಳಷ್ಟು ಹಿಟ್  ಗೀತೆಗಳನ್ನು ನೀಡಿದ್ದಾರೆ. ೧೯೫೫ ರ ವರ್ಷದಲ್ಲಿ   ಸಂಗೀತ ನೀಡಿದ ಕನ್ನಡ ದ  ಸೋದರಿ  ಚಿತ್ರದಿಂದ ೧೯೮೫  ರಲ್ಲಿ  ಅಂತಿಮವಾಗಿ  ಸಂಗೀತ ನೀಡಿದ  ಅದೇ ಕಣ್ಣು  ಚಿತ್ರದ ವರೆಗೆ   ಕನ್ನಡ ಚಿತ್ರ ರಂಗದಲ್ಲಿ ಸಂಗೀತ  ದಿಗ್ಗಜರಾಗಿ ಮೆರೆದು  ಅರವತ್ತೊಂದು  ಕನ್ನಡ ಚಿತ್ರಗಳಿಗೆ ರಾಗ ಸಂಯೋಜನೆ ಮಾಡಿ  ಕನ್ನಡಕ್ಕೆ ಮಧುರ ಹಾಡುಗಳ ಕೊಡುಗೆ ನೀಡಿದ್ದಾರೆ.

ಮತ್ತೊಂದು ವಿಶೇಷ ಅಂದರೆ  ಕನ್ನಡದಲ್ಲಿ ಸಂಗೀತ ನೀಡಿದ ಮೊದಲ ಚಿತ್ರ ಹಾಗು ಕೊನೆಯ ಚಿತ್ರ ಎರಡೂ ಡಾ// ರಾಜಕುಮಾರ್  ರವರ ಚಿತ್ರಗಳೇ ಆಗಿದ್ದು  ಇತಿಹಾಸ, ಮತ್ತೊಂದು  ವಿಚಾರ ಡಾ// ರಾಜಕುಮಾರ್ ರವರಲ್ಲಿನ ಗಾಯಕನನ್ನು  ಪ್ರಥಮವಾಗಿ , ಓಹಿಲೇಶ್ವರ  ಚಿತ್ರದಲ್ಲಿ, ನಂತರ  ಎಸ. ಜಾನಕಿಯವರ ಜೊತೆ  ಮಹಿಷಾಸುರ ಮರ್ಧಿನಿ ಚಿತ್ರದಲ್ಲಿ  "ತುಂಬಿತು ಮಾನವ " ' ಹಾಡಿನಲ್ಲಿ,
ಯಾರೇ ಕೂಗಾಡಲಿ ಅಂತಾ ಹಾಡಿದರು ರಾಜಕುಮಾರ್

ಮೂರನೆಯದಾಗಿ ಸಂಪತ್ತಿಗೆ ಸವಾಲ್  ಚಿತ್ರದ ಯಾರೇ ಕೂಗಾಡಲಿ ಹಾಡಿನ ಮೂಲಕ [ ಈ ಹಾಡನ್ನು ಹಾಡಲು  ಪಿ.ಬಿ.ಶ್ರೀನಿವಾಸ  ರವರು ನಿರಾಕರಿಸಿದ ಕಾರಣ  , ಈ ಹಾಡಿನಲ್ಲಿ  ನಾಯಕ ನಟ ರಾಜ್ ಕುಮಾರ್  ರವರಿಗೆ  ಈ ಹಾಡಿನಿಂದ  ಅವಮಾನವಾಗಬಾರದು  ಎಂಬ ಕಾರಣವೆಂದು ಹೇಳುತ್ತಾರೆ ] ಗಾಯಕನ ಪಟ್ಟ ಒದಗಿಸಿದರು. ಕನ್ನಡ ಚಿತ್ರಗಳಲ್ಲಿ ಹಲವು ಬಗೆಯ ಪ್ರಯೋಗ ಮಾಡಿ ಯಶಸ್ವಿಯಾದರು . ಸಂಧ್ಯಾ ರಾಗದಲ್ಲಿ "ಪಂಡಿತ್ ಭೀಮಸೇನ್ ಜೋಷಿ,"        " ಗಾನ ಗಾರುಡಿಗ  ಬಾಲಮುರಳಿ ಕೃಷ್ಣ "  , ಸನಾದಿ ಅಪ್ಪಣ್ಣ ಚಿತ್ರದಲ್ಲಿ  ಚಿತ್ರದ ನಾಯಕ ನಟನ  ಅಭಿನಯಕ್ಕೆ ಪೂರಕವಾಗ ಬೇಕೆಂಬ ಕಾರಣದಿಂದ  "ಉಸ್ತಾದ್ ಬಿಸ್ಮಿಲ್ಲಾ ಖಾನ್ "     ಕಲಾವತಿ ಚಿತ್ರದಲ್ಲಿ  ಪ್ರಸಿದ್ದ ಗಾಯಕರಾದ  " ಮನ್ನಾಡೆ "   , ಸುಮನ್ ಕಲ್ಯಾಣ್ ಪೂರ್ ,  ಶಂಕರ್ ಸುಂದರ್ ಚಿತ್ರಕ್ಕೆ ಯೇಸುದಾಸ್  ರಂತಹ ಮಹಾನ್ ಗಾಯಕರನ್ನು ಕರೆಸಿ ಕನ್ನಡ ಚಿತ್ರಗಳಲ್ಲಿ ಹಾಡಿಸಿದ  ಪ್ರಯೋಗ ಶೀಲ ಸಂಗೀತ ನಿರ್ದೇಶಕ ಇವರಾದರು.   ಬನ್ನಿ ಇವರ  ಕೆಲವು ಹಿಟ್ ಹಾಡುಗಳ ಪರಿಚ ಮಾಡಿಕೊಳ್ಳೋಣ
  
ಜಿ.ಕೆ.ವೆಂಕಟೇಶ್ 

  • ಆಹಾ  ಮೈಸೂರು  ಮಲ್ಲಿಗೆ  , [ಬಂಗಾರದ  ಮನುಷ್ಯ ]
  • ಆಡಿಸಿ  ನೋಡು , ಬೀಳಿಸಿ  ನೋಡು  [ಕಸ್ತೂರಿ ನಿವಾಸ]
  • ಎಲ್ಲಿ  ಮರೆಯಾದೆ  ,[ಭಕ್ತ  ಕುಂಬಾರ]  
  • ಪ್ರೀತಿನೆ  ಆ  ದ್ಯಾವ್ರು  ತಂದ  ಆಸ್ತಿ  ನಮ್ಮ  ಬಾಳಿಗೆ  ,[ ದೂರದ ಬೆಟ್ಟ] [ ಈ ಹಾಡಿನಲ್ಲಿ  ಕುಲುಮೆಯಲ್ಲಿ ಕಬ್ಬಿಣ ಕುಟ್ಟುವ ಶಬ್ದವನ್ನು ಹಾಡಿಗೆ ಪೂರಕವಾಗಿ ಬಳಸಲಾಗಿದೆ ]
  • ಕನ್ನಡದಾ  ಮಕ್ಕಳೆಲ್ಲ  ಒಂದಾಗಿ  ಬನ್ನಿ  , [ಕಣ್ತೆರೆದು ನೋಡು,]
  • ಇಳಿದು  ಬಾ  ತಾಯಿ , [ಅರಿಸಿನ  ಕುಂಕುಮ]  
  • ರವಿವರ್ಮನ  ಕುಂಚದ   ಕಲೆ ,  [ಸೊಸೆ  ತಂದ  ಸೌಭಾಗ್ಯ]  
  • If you come today, it's too early ,  [ಆಪರೇಷನ್  ಡೈಮಂಡ್ ರಾಕೆಟ್]
  • ಬಾಳು  ಬೆಳಕಾಯಿತು  ,  [ಹಾಲು  ಜೇನು]
  • ನಿನದೆ  ನೆನಪು  ದಿನವು  ಮನದಲ್ಲಿ  , [ರಾಜ  ನನ್ನ  ರಾಜ] 
  • ರಾಧಿಕೆ ನಿನ್ನ ಸರಸ ಇದೇನೇ [ತಂದೆ ಮಕ್ಕಳು ]  [ ಈ ಹಾಡು ಮೂಲತಃ ಹಿಂದಿಯ ಬೇಟಿ ಬೀಟಾ ಚಿತ್ರದದ್ದಾದರೂ  ಅಲ್ಲಿನ ಹಾಡು ರಾಧೀಕೆ ತೆರೆ ಬಾನ್ಸುರಿ  ಹಾಡನ್ನು ಮಹಮದ್ ರಫಿ ಹಾಡಿದ್ದರು ಅದರಿಂದ ಸ್ಪೂರ್ತಿಗೊಂಡು ಅದೇ ಶೈಲಿಯಲ್ಲಿ  ಎ.ಪಿ.ಬಾಲಸುಬ್ರಮಣ್ಯಂ ರವರಿಂದ  ಹಾಡಿಸಿ ಆ ಹಾಡು ಕೂಡ ಕನ್ನಡದಲ್ಲಿ ಹಿಟ್ ಆಯಿತು ಇಂದಿಗೂ  ಕೂಡ ಜನಪ್ರೀಯ ಹಾಡುಗಳಲ್ಲಿ ಒಂದಾಗಿದೆ.]   
  • ನೀ ಬಂದು ನಿಂತಾಗ  [ ಕಸ್ತೂರಿ ನಿವಾಸ ][  ಆ ಕಾಲದಲ್ಲಿಯೇ ಈ ಹಾಡಿನಲ್ಲಿ  ಸ್ಟೀರಿಯೋ ರೆಕಾರ್ಡಿಂಗ್ ಮಾಡಲಾಗಿದೆ. ಇದರಲ್ಲಿನ ಗಿಟಾರ್ ವಾದನ , ಪಿ.ಬಿ.ಶ್ರೀನಿವಾಸ್, ಎಸ.ಜಾನಕಿ ಅವರುಗಳ ಹಾಡಿಗೆ ಪೂರಕವಾಗಿ ನುಡಿಸಲಾಗಿದ್ದು ಅದು   ಈ ಗೀತೆಯ ಹೈ ಲೈಟ್ ಆಗಿ   ಅಂದಿನ ಕಾಲಕ್ಕೆ ಕನ್ನಡ ಚಿತ್ರಗಳಲ್ಲಿ ಪ್ರಥಮ ಸ್ಟೀರಿಯೋ  ರೆಕಾರ್ಡಿಂಗ್ ಹಾಡಾಗಿ  ಈ ಹಾಡು ಉತ್ತಮ ಸ್ಟೀರಿಯೋ ಸಂಗೀತದ ಸ್ಪಷ್ಟ  ಅನುಭವ ನೀಡಿ ಹಿಟ್ ಆಯಿತು.                                                                                                                            *ನಾರಿಯ  ಸೀರೆ  ಕದ್ದ , ರಾಧೆಯ  ಮಾನವ  ಗೆದ್ದ  , [ದಾರಿ  ತಪ್ಪಿದ  ಮಗ]

Tuesday, December 6, 2011

ವೈ ದಿಸ್ ಕೊಲ ವೇರಿ, ಕೊಲವೇರಿ ಕೊಲವೇರಿ ..............ಅ ಡೀ ..............???????[urged to kill ]






ಇದೇನಿದು ಇವನಿಗೂ ಕೊಲವೇರಿ ಮೇನಿಯಾ ಅಂಟಿಕೊಂಡಿತಾ ಅನ್ನಬೇಡಿ!!. ಹೌದು ಸರ್ ಹೊರಜಗತ್ತಿಗೆ ಕಿವಿ ತೆರೆದರೆ ಇವತ್ತು ನಿಮಗೆ ಬೇಕಿರಲಿ, ಬೇಡದಿರಲಿ ಬೀದಿಯಲ್ಲಿ, ಮೊಬೈಲ್ ಗಳ ರಿಂಗ್ ಟೋನಿನಲ್ಲಿ, ಪಡ್ಡೆ ಹೈಕಳ ಐ ಪಾಡಿನಲ್ಲಿ , ಟೆಕ್ಕಿಗಳ ಲ್ಯಾಪ್ ಟಾಪ್, ಬಾತ್ ರೂಂ ನಲ್ಲಿ ಸ್ನಾನ ಮಾಡುತ್ತಾ ಹಾಡುವ ಕಲಾವಿದರಲ್ಲಿ,ಶಾಲೆ , ಕಾಲೇಜುಗಳ ಸಮಾರಂಭದಲ್ಲಿ, ಎಫ್. ಎಂ ಗಳಲ್ಲಿ , ಹಳ್ಳಿಯ ಮೂಲೆಗಳಲ್ಲಿ , ಮಕ್ಕಳ ಬಾಯಿಯಲ್ಲಿ, ಟಿ. ವಿ. ಚಾನಲುಗಳಲ್ಲಿ , ರೆಸ್ಟೋರೆಂಟ್ ನಲ್ಲಿ, ತೇಲಿಬರುವ ಹಾಡು ಇದೆ ಆಗಿದೆ. ನಿಮಗೆಇನ್ನು "ಯೂ ಟ್ಯೂಬ್", "ಫೇಸ್ ಬುಕ್ " ನಲ್ಲಿ ಈ ಹಾಡಿನ ಹಿಟ್ ಬಗ್ಗೆ ದಾಖಲೆಯಂತೆ,ಹಲವಾರು ದೇಶ ವಿದೇಶಗಳಲ್ಲಿಯೂ ಇದರ ಕಮಾಲ್ ಜೋರಂತೆ , ವಿದೇಶಿಯರಿಗೂ ಈ ಹಾಡು ಇಷ್ಟವಂತೆ!! ಈಗ ನೋಡಿ ಸೋನು ನಿಗಮ್ ಮಗ ಹಾಡಿದಾ ಅಂತಾ , ಬ್ರೆಕಿಂಗ್ ನ್ಯೂಸ್ ಕೊಡ್ತಾ ಇವೆ ಮಾಧ್ಯಮಗಳು, ಇದರ ಯಶಸ್ಸನ್ನು ನೋಡಿ ಇದು ಇವತ್ತಿನ ರಾಷ್ಟ್ರ ಗೀತೆ ಅಂತಾ ಯಾರೋ ನಾಚಿಕೆ ಬಿಟ್ಟು ಹೇಳುತ್ತಿದ್ದರು ಈ ಹಾಡು ಒಂದು ಭಗ್ನ ಪ್ರೇಮದ ಹಾಡಂತೆ, ಭಗ್ನ ಪ್ರೇಮಿಗಳ ನೋವು ಇದರಲ್ಲಿ ಇದೆಯಂತೆ, ಇತ್ಯಾದಿ ವಿಶ್ಲೇಷಣೆಗಳು ಇವೆ. ಆದರೆ ಈ ಹಾಡಿನ ಸಂಪೂರ್ಣ ಅರ್ಥ ಆಗದೆ "ವೈ ದಿಸ್ ಕೊಲವೇರಿ" ಅಂತಾ ಇರೋವರೆ ಜಾಸ್ತಿ ಆದರೂ ಅದನ್ನು ತೋರಿಸಿಕೊಳ್ಳದೆ ತಮಗೂ ಅರ್ಥಾ ಆಗಿದೆ ಎಂಬ ಕೃತಕತೆ ಇಂದಾ ಜನರು ನಟಿಸುತ್ತಿರುವಂತೆ ಅನ್ನಿಸುತ್ತಿದೆ. [ ನನ್ನ ಅನಿಸಿಕೆಗೆ ಕೊಲವೇರಿ ಹಾಡು ಅರ್ಥವಾದ  ನಿಮ್ಮಂತವರನ್ನು  ಹೊರತು ಪಡಿಸ ಬಹುದು . ಆದ್ರೆ ಒಂದಂತೂ ನಿಜ ತಮಿಳು ಚಿತ್ರ ರಂಗದಲ್ಲಿ ನಡೆಯುತ್ತಿರುವ ಹಲವು ಪ್ರಯೋಗಗಳ , ಬೆಳೆಯುತ್ತಿರುವ ಯುವ ಪ್ರತಿಭೆಗಳ , ಅದರಿಂದ ತಮಿಳು ಚಿತ್ರ ರಂಗಕ್ಕೆ ಆಗುತ್ತಿರುವ ಲಾಭಗಳ ,ಒಂದು ಚಿತ್ರಣ ಕಲ್ಪಿಸಿಕೊಂಡರೆ ಕನ್ನಡ ಚಿತ್ರ ರಂಗದ ಕರುಳು ಹಿಂಡಿದಂತೆ ಆಗುತ್ತದೆ. ಕೊಲವೇರಿ ಹಾಡನ್ನೇ ಉದಾಹರಣೆಗೆ ತೆಗೆದು ಕೊಂಡರೆ ಕೊಲವೇರಿ ಹಾಡು ಒಂದು ಸಾಮಾನ್ಯ ಹಾಡು ಅಷ್ಟೇ ಅದರ ರಚನೆಕಾರರಿಗೆ, ಹಾಡುಗಾರರಿಗೂ, ಸಂಗೀತಗಾರರಿಗೂ ಈ ಹಾಡಿನ ಯಶಸ್ವಿ ಬಗ್ಗೆ ಅರಿವಿರಲಿಲ್ಲ. ಆದರೆ ಇದರಲ್ಲಿ ಬಹಳ ಇಷ್ಟಪಟ್ಟು, ಕಷ್ಟಪಟ್ಟು, ಒಂದು ಟೀಮ್ ವರ್ಕ್ ಮಾಡಿದಾರೆ.



ಶೀರ್ಷಿಕೆ ಸೇರಿಸಿ













ಶೀರ್ಷಿಕೆ ಸೇರಿಸಿ



ಅವರುಗಳಿಗೆ ಆಸರೆಯಾಗಿ ತಮಿಳು ಚಿತ್ರರಂಗದ ದಿಗ್ಗಜಗಳು ನಿಂತಿದ್ದಾರೆ ಅಷ್ಟೇ. [ ನಮ್ಮ ಚಿತ್ರ ರಂಗದಲ್ಲಿ ಕಾಲೆಳೆಯುವ ಮಂದಿಗೆ ಇಂತಹ ಘಟನೆ ಕಾಣೋದಿಲ್ಲಾ ಬಿಡಿ ] ಇಲ್ಲದಿದ್ದರೆ ವಿಶ್ವಕ್ಕೆ ಪರಿಚಯವೇ ಇಲ್ಲದಿದ್ದ ಅನಿರುದ್ಹ್ ಎಂಬಾ ಒಬ್ಬ ಹೊಸ ಸಂಗೀತ ನಿರ್ದೇಶಕ ತನ್ನ ಮೊದಲ ಚಿತ್ರಕ್ಕೆ ಈ ಮಟ್ಟಿನ ಯಶಸ್ಸು ಸಾಧಿಸಲು ಸಾಧ್ಯವಾಗುತಿರಲಿಲ್ಲ. ಇನ್ನೂ ಅಧಿಕೃತ ವಾಗಿ ಹಾಡುಗಳು,ಬಿಡುಗಡೆ ಆಗದೆ, ಚಿತ್ರ ಚಿತ್ರೀಕರಣ ಕೂಡ ಆಗದೆ ಈ ಹಾಡಿನ ರೆಕಾರ್ಡಿಂಗ್ ಚಿತ್ರಣದ ಮೂಲಕ ಹಾಡನ್ನು ಮಾಧ್ಯಮಗಳ ಮೂಲಕ ಜನರಿಗೆ ತಲುಪಿಸಿ ಯಶಸ್ವಿಯಾಗಿದ್ದಾರೆ ಆ ತಂಡದವರು. ಇದರಿಂದ ನಮ್ಮ ಕನ್ನಡ ಚಿತ್ರ ರಂಗದ ಮಾರ್ಕೆಟಿಂಗ್ ಹಾಗು ಅವರ ಮಾರ್ಕೆಟಿಂಗ್ ಗೆ ಇರುವ ವೆತ್ಯಾಸ ತಿಳಿಯುತ್ತದೆ. ಇನ್ನೂ ಇತ್ತೀಚಿಗೆ ಪ್ರಾಂತೀಯ ದ್ರಾವಿಡ ಭಾಷೆ ಹಾಡುಗಳನ್ನು ಸಾಲಾ ಮದ್ರಾಸಿ ಅನ್ನುತಿದ್ದ ಉತ್ತರ ಭಾರತೀಯರೂ ಸಹ ಅಪ್ಪಿಕೊಂಡು ಮುದ್ದಾದುತ್ತಿರುವುದು ಹಾಗು ಅದೇ ಟ್ಯೂನ್ ಕಾಪಿ ಮಾಡಿ ತಮ್ಮ ಮಾತನ್ನು ಸೇರಿಸಿ ಹಾಡುತ್ತಿರುವುದು ವಿಸ್ಮಯವೇ ಸರಿ . ನಾನು ಇಲ್ಲಿ ತಮಿಳನ್ನು ವೈಭವೀಕರಿಸುತ್ತಿಲ್ಲಾ , ಆದರೆ ಒಂದು ಭಾಷೆ ಯಲ್ಲಿ ನಿಜ ಪ್ರತಿಭೆಗಳಿಗೆ ಸರಿಯಾದ ಪ್ರೋತ್ಸಾಹ ಸಿಕ್ಕರೆ ಭಾಷೆ ಹೇಗೆ ಬೆಳೆಯುತ್ತದೆ ಹಾಗು ಆ ಭಾಷೆಯ ಚಿತ್ರರಂಗ ಹೇಗೆ ಉನ್ನತಿ ಸಾಧಿಸುತ್ತದೆ ಎಂಬ ಬಗ್ಗೆ ನನ್ನ ಆಸಕ್ತಿ ಇದೆ. ನಮ್ಮ ಕನ್ನಡ ಚಿತ್ರ ರಂಗದಲ್ಲಿಯೂ ಪ್ರತಿಭೆಗಳಿಗೆ ಬರವಿಲ್ಲ , ಆದರೆ ನಾವೂ ಮೊದಲೇ ಒಂದು ಚೌಕಟ್ಟನ್ನು ಹಾಕಿಕೊಂದು ಬಿಟ್ಟಿದ್ದೇವೆ ಅದರ ಆಚೆ ಯೋಚಿಸುತ್ತಿಲ್ಲ ಅನ್ನಿಸುತ್ತೆ.

 ೧] ಕನ್ನಡ ಭಾಷೆಗೆ ಸೀಮಿತ ವ್ಯಾಪ್ತಿ ಇದೆ , ಕನ್ನಡ ಚಿತ್ರಗಳನ್ನು ಕರ್ನಾಟಕದಲ್ಲೇ ಸುಮಾರು ಮೂರು ಕೋಟಿ ಜನ ನೋಡುವುದಿಲ್ಲ ಅದಕ್ಕೆ ಎಂಬ ವಾದ[ ಇದು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಪ್ರೇಕ್ಷಕನ ಮೇಲೆ ಅಪವಾದ ಹೊರಿಸುವ ಹುನ್ನಾರ ]
2] ಕನ್ನಡದಲ್ಲಿ ಒಳ್ಳೆ ಕಲಾವಿದರ ಕೊರತೆ ಇದೆ .[ ಇದಕ್ಕೆ ಕನ್ನಡಿಗರೇ ಉತ್ತರಿಸ ಬೇಕೂ , ಎಷ್ಟೋ ಜನ ಉತ್ತಮ ಕಲಾವಿದರು ಕಣ್ಣಿಗೆ ಕಾಣುತ್ತಿದ್ದರೂ ಕುರುಡರಂತೆ ವರ್ತಿಸುತ್ತಿದ್ದಾರೆ ಅನ್ನಿಸುವುದಿಲ್ಲವೇ ]

೩ ] ಕನ್ನಡ ದಲ್ಲಿ ಉತ್ತಮ ಕಥೆಗಳ ಕೊರತೆ ಇದೆ [ ತಪ್ಪು ತಪ್ಪು ಕನ್ನಡ ದಲ್ಲಿರುವ ಉತ್ತಮ ಕಥೆಗಳನ್ನು ಓದುವ ನಿರ್ಮಾಪಕ, ನಿರ್ದೇಶಕ, ಕಲಾವಿದರು ಕನ್ನಡ ಚಿತ್ರ ರಂಗದಲ್ಲಿ ಕಡಿಮೆ ಇದ್ದ್ದಾರೆ]



Monday, November 14, 2011

ಮೂರು ನದಿಗಳು ಸಂಗಮವಾಗುವ ಸ್ಥಳ !!!! ಜಗದ ಜನರ ಕಣ್ಣಿಗೆ ಬೀಳದೆ ನಿರ್ಮಲವಾಗಿದೆ!!!!

ಮೂರು ನದಿಗಳು ಸೇರುವ ಪಾತ್ರ ಗೂಗಲ್ ಮ್ಯಾಪ್ನಲ್ಲಿ


ಹೌದು ಈ ಜಾಗದ ಬಗ್ಗೆ ಪರಿಚಯ ಮಾಡಿಕೊಡಲಾ ಬೇಡವ ಎಂಬ ಜಿಜ್ಞಾಸೆ ಕಾಡಿದೆ. ಪರಿಚಯ ಮಾಡಿಕೊಟ್ಟರೆ ಹೆಚ್ಚಿನ ಜನ ಬಂದು ಈ ಜಾಗದ ನಿರ್ಮಲತೆ ಹಾಳಾಗುವ ಭಯ.ಏಕೆಂದರೆ ನಮ್ಮಲ್ಲಿ ಇಂತಹ ಸ್ಥಳಗಳಿಗೆ ಹೋಗುವ ಕೆಲವು ಜನ ಗೊತ್ತಲ್ಲ!!! ಚೆನ್ನಾಗಿ ತಿಂದು ಕುಡಿದು ಮಜಾ ಮಾಡಿ ಕುಡಿದ ಬಾಟಲ್ ಗಳನ್ನೂ , ಕಸವನ್ನು ಚೆಲ್ಲಾಡಿ ಬರುತ್ತಾರೆ.[ ಉದಾಹರಣೆ ಕೆ.ಆರ್.ಎಸ ಸಮೀಪವಿರುವ ಬಲಮುರಿ ] ಎಂಬ ಭಯ, ಪರಿಚಯ ಮಾಡಿಕೊಡದಿದ್ದರೆ ಇಂತಹ ಸುಂದರ ಪರಿಸರವನ್ನು ನೋಡುವ ಅವಕಾಶವನ್ನು ಹಲವಾರು ಒಳ್ಳೆಯ ಜನರಿಗೆ ತಪ್ಪಿಸಬೇಕಲ್ಲಾ ಎನ್ನುವ ಸಂಕಟ , ಇವುಗಳ ಮೇಲಾಟದಲ್ಲಿ ಪರಿಚಯ ಮಾಡಿಕೊಡುವ ಬಗ್ಗೆ ನಿರ್ಧರಿಸಿ ಈ ಲೇಖನ ಪ್ರಕಟಿಸಿದ್ದೇನೆ. ಏನ್ ಮಹಾ ಬುದ್ದಿವಂತಾ ಇವನು ಎಲ್ಲಾ ಗೊತ್ತೂ ಅನ್ನೋಹಂಗೆ ಆಡ್ತಾನೆ ಬಹಳ ಜಂಬಾ ಇವನಿಗೆ ಅಂತೀರಾ ??? ಇಲ್ಲಾ ರೀ ನೀವು ಇಲ್ಲಿ ಪರಿಚಯ ಮಾಡಿಕೊಳ್ಳುವ ಪರಿಸರದ ಜಾಗದ ಬಗ್ಗೆ ಅಂತರ್ಜಾಲ ಜಾಲಾಡಿದರೂ ಮಾಹಿತಿ ದೊರೆಯಲ್ಲಾ , ವಿಕಿಪಿಡಿಯಾ ದಲ್ಲೂ ಮಾಹಿತಿ ಇಲ್ಲ, ಗೂಗಲ್ ಸರ್ಚ್ ಈ ಜಾಗದ ಬಗ್ಗೆ ತಲೆ ಒಗೆಯುತ್ತದೆ. ಅಚ್ಚರಿ ಆಯ್ತಾ ಬನ್ನಿ ಆ ಜಾಗಕ್ಕೆ ಹೋಗೋಣ. ಕೆ.ಆರ್.ಎಸ. ಹಿನ್ನೀರಿನ ತಡಿಯಲ್ಲಿ ಹಲವಾರು ವಿಸ್ಮಯ ಕಾರಿ ಜಾಗಗಳು ಅಡಗಿಕೊಂಡಿವೆ, ಹಿನ್ನೀರಿನ ಚಾಚು ಮಂಡ್ಯ ಜಿಲ್ಲೆ ಹಾಗು ಮೈಸೂರು ಜಿಲ್ಲೆಗೆ ಸೇರಿದ ಪಾಂಡವಪುರ , ಕೆ ಆರ್.ಪೇಟೆ ,[ಮಂಡ್ಯ ಜಿಲ್ಲೆ ] ಕೆ.ಆರ್.ನಗರ , ಹುಣಸೂರು [ ಮೈಸೂರು ಜಿಲ್ಲೆ ] ಈ ಭಾಗದಲ್ಲಿ ಹರಡಿ ಕೊಂಡಿದೆ. ಈ ಭಾಗಗಳಲ್ಲಿನ ಹಲವಾರು ವಿಸ್ಮಯಗಳು ಹೊರ ಜಗತ್ತಿಗೆ ತಿಳಿದಿಲ್ಲ. ಅದಕ್ಕೆ ಹೆಚ್ಚಿನ ಪ್ರಚಾರವೂ ಇಲ್ಲ ಹಾಗಾಗಿ ಜನರ ಕಣ್ಣಿಗೆ ಮರೆಯಾಗಿ ಉಳಿದಿವೆ.ಅಂತಹ ಒಂದು ಜಾಗ ಈ ಸಂಗಮೇಶ್ವರ ಪುರ ಅಥವಾ ಸಂಗಾ ಪುರ ಎನ್ನುವ ಸ್ಥಳ.

ಸಂಗಮೇಶ್ವರ ಹಾಗು ಪಾರ್ವತಿ ದೇವಾಲಯಗಳು.

ಈ ಪ್ರದೇಶದಲ್ಲಿ ಮೂರು ನದಿಗಳು ಸಂಗಮವಾಗಿ ಸುಂದರ ಪರಿಸರ ನಿರ್ಮಿಸಿವೆ.ಕೊಡಗು ಜಿಲ್ಲೆ ತಲಕಾವೇರಿ ಯಿಂದ ಹರಿದು ಬರುವ ಕಾವೇರಿ, ಕೊಡಗಿನ ಬ್ರಹ್ಮ ಗಿರಿ ಬೆಟ್ಟದ ಲ್ಲಿ ಹುಟ್ಟಿ ಇರುಪ್ಪು ಮೂಲಕ ಹರಿದು ಬರುವ ಲಕ್ಷ್ಮಣ ತೀರ್ಥ ಹಾಗು ಚಿಕ್ಕ ಮಗಳೂರು ಜಿಲ್ಲೆ ಮೂಡಿಗೆರೆಯ ಸಮೀಪದ "ಜಾವಳಿ" ಯಿಂದ ಹರಿದು ಬರುವ ಹೇಮಾವತಿ ನದಿಗಳು ಇಲ್ಲಿ ಪ್ರೀತಿಯಿಂದ ಸಂಗಮಿಸಿ ಸಂಭ್ರಮಿಸುತ್ತವೆ .ಮೂರು ನದಿಗಳು ಇಲ್ಲಿ ಹಲವಾರು ಸಣ್ಣ ಸಣ್ಣ ಭೂಶಿರ,ಹಾಗು ದ್ವೀಪಗಳನ್ನು ನಿರ್ಮಿಸಿವೆ.
ಭೂಶಿರದ ಕಡೆಗೆ ಸಾಗುವ ಹಾದಿ

ಜನರ ಕಣ್ಣಿಗೆ ಕಾಣದೆ ನಿರ್ಮಲವಾಗಿರುವ ಸಂಗಮೇಶ್ವರ
ಭೂಶಿರದ ತುದಿಯ ಭಾಗ. [ ಎಡಭಾಗದಲ್ಲಿ ಹೇಮಾವತಿ , ಬಲಭಾಗದಲ್ಲಿ ಕಾವೇರಿ , ಎದುರು ಭಾಗದಲ್ಲಿ ಲಕ್ಷ್ಮಣ ತೀರ್ಥ ನದಿಗಳ ಸಂಗಮ]

ಪ್ರದೇಶಕ್ಕೆ ಐತಿಹಾಸಿಕ ಪೌರಾಣಿಕ ಮಹತ್ವ ಸಾರುವ ವಿಚಾರಗಳು ಇಲ್ಲದಿದ್ದರೂ ಕುಟುಂಬ ಸಮೇತ ಎಲ್ಲರೂ ಹಾಯಾಗಿ ಯಾವುದೇ ಅಡೆತಡೆ ಇಲ್ಲದೆ ವಿಹರಿಸಿ ಬರಬಹುದು. ಪ್ರದೇಶಕ್ಕೆ ಬರುವವರು ಯಾವುದೇ ಕಾರಣಕ್ಕೂ ಮರೆಯದೆ ತಿಂಡಿ ಊಟಗಳನ್ನು ಜೊತೆಯಲ್ಲಿ ತನ್ನಿರಿ . ದಯಮಾಡಿ ಸುಮಾರುಎರಡು ಹೊತ್ತಿನ ಆಹಾರ ತರುವುದು ಒಳ್ಳೆಯದು .ಈ ಪ್ರದೇಶದಲ್ಲಿ ಚೆಲುವನ್ನು ನೋಡುತ್ತಾ ದಿನ ಕಳೆಯುವುದು ತಿಳಿಯುವುದಿಲ್ಲ. ಭೂಶಿರದ ತಟದಲ್ಲಿ ಕುಳಿತು ಗುಂಪಾಗಿ ಊಟ ಮಾಡುತ್ತಿದರೆ ಅನುಭವವೇ ಬೇರೆ. ಇಲ್ಲಿಯೂ ಸಹ ಹಲವಾರು ಬಗೆಯ ಪಕ್ಷಿಗಳನ್ನು ಪಕ್ಷಿವೀಕ್ಷಕರು ಗಮನಿಸಬಹುದು, ನೀರಿನಲ್ಲಿ ಯಾವುದೇ ಹೆದರಿಕೆ ಇಲ್ಲದೆ ಸುರಕ್ಷಿತ ಜಾಗದಲ್ಲಿ ಈಜಬಹುದು,[ ಆದರೆ ಗಮನಿಸಿ ಹೆಚ್ಚು ದೂರ ಹೋದಲ್ಲಿ ಸುಳಿಗೆ ಸಿಲುಕುವ ಅಪಾಯವಿದೆ ] ಸನಿಹದಲ್ಲೇ ಇರುವ ಸಂಗಮೇಶ್ವರ ,ಪಾರ್ವತಿ ದೇವಾಲಯದಲ್ಲಿ ದೇವರ ಆಶೀರ್ವಾದ ಪಡೆಯಬಹುದು.ಎಲ್ಲಕಿಂತ ಹೆಚ್ಹಾಗಿ ಯಾವುದೇ ಗಲೀಜಿಲ್ಲದ , ನಿರ್ಮಲವಾದ ಪ್ರದೇಶದಲ್ಲಿ ಕುಟುಂಬದವರು ಮನರಂಜನೆಯ ಆಟ ಆಡಿ ಸಂತೋಷ ಹೊಂದ ಬಹುದು. ಪ್ರದೇಶಕ್ಕೆ ಬಂದೊಡನೆ ನಿಮಗೆ ಎದುರಾಗುವುದು ಮೀನುಗಾರರ ಹರಿಗೋಲು, ಸಣ್ಣ ಶೆಡ್ಡುಗಳು ಇತ್ಯಾದಿ
ನದಿಯಲ್ಲಿ ಸಿಗುವ ಮೀನುಗಳು
ಹೌದು ಇಲ್ಲಿ ಹೇರಳವಾಗಿ ಸಿಗುವ ಹಲವಾರು ಜಾತಿಯ ಮೀನುಗಳು ಮೈಸೂರು, ಬೆಂಗಳೂರು, ಪೂನ, ಮುಂತಾದೆಡೆಗೆ ಸಾಗಿಸಲ್ಪಡುತ್ತವೆ. ಛಾಯ ಚಿತ್ರ ತೆಗೆಯುವ ಹವ್ಯಾಸ ಇದ್ದಲ್ಲಿ ಕ್ಯಾಮರಾಗಳಿಗೆ ಹಬ್ಬ ಅಂತೂ ಗ್ಯಾರಂಟಿ .ಒಮ್ಮೆ ನೀವೂ ಸಹ ನಿಮ್ಮ ಕುಟುಂಬ ದೊಡನೆ ಇಲ್ಲಿಗೆ ಮರೆಯದೆ ಹೋಗಿಬನ್ನಿ [ ಆದರೆ ಅಲ್ಲಿನ ನಿರ್ಮಲತೆ ಕಾಪಾಡಲು ಸಹಕರಿಸಿ ]
ನಿರ್ಮಲ ವಾತಾವರಣದ ಸುಂದರ ನೋಟ

Wednesday, November 9, 2011

ವರಾಹನಾಥ ಕಲ್ಲಹಳ್ಳಿಯ ನೀವು ನೋಡಿದ್ದೀರಾ ????? ಹೇಮಾವತಿ ನದಿಯ ತಟದಲ್ಲಿ ಭೂದೇವಿಯ ಜೊತೆ ಕುಳಿತ ವರಾಹಾವತಾರಿ !!!!!


ಭೂ  ವರಾಹ ನಾಥ ಸ್ವಾಮೀ ಮೂಲ ವಿಗ್ರಹ.

ವರಾಹ ನಾಥ ಕಲ್ಲಹಳ್ಳಿ  ಮಂಡ್ಯ ಜಿಲ್ಲೆಯ ಕೆ .ಅರ. ಪೇಟೆ ತಾಲೂಕಿನ ಒಂದು ಪುಣ್ಯ ಕ್ಷೇತ್ರ !ಕೆ.ಅರ. ಪೇಟೆ ಯಿಂದ ೧೮.ಕಿ.ಮಿ.,ಮೈಸೂರಿನಿಂದ ೪೩ ಕಿ.ಮಿ. ದೂರದಲ್ಲಿದೆ.ಪಶ್ಚಿಮ ದಿಂದ ಉತ್ತರಕ್ಕೆ ಸಾಗುವ ಹೇಮಾವತಿ ನದಿಯ ದಡದಲ್ಲಿ ದೇವಾಲಯ ನಿರ್ಮಾಣವಾಗಿದೆ!ದೇವಾಲಯ ಪೂರ್ವಕ್ಕೆ ಮುಖ ಮಾಡಿದ್ದು ,ಗರ್ಭ ಗಡಿಯಲ್ಲಿ ಎತ್ತರದ ಪೀಠದ ಮೇಲೆ ವರಾಹ ಸ್ವಾಮಿ ಹಾಗು ಎಡ ತೊಡೆಯ ಮೇಲೆ ಭೂದೇವಿಯು ಆಸಿನಳಾಗಿದ್ದು, ಅವಳ ಸೊಂಟವನ್ನು ವರಾಹಸ್ವಾಮಿಯು ಬಳಸಿ ವಿಶಿಷ್ಟ ಬಂಗಿಯಲ್ಲಿ ದರ್ಶನ ನೀಡುತ್ತಾನೆ!ಮೂರ್ತಿಯು  ಭವ್ಯ ವಾಗಿದ್ದು ೧೫ ಅಡಿ ಎತ್ತರವಿದೆ!ಹೊರಗಿನಿಂದ ದೇವಾಲಯ ನೋಡಿದವರಿಗೆ ಇಷ್ಟು ದೊಡ್ಡ ದೇವರ ಮೂರ್ತಿ ಒಳಗಡೆ ಇದೆ ಎಂದರೆ ನಂಬಲಾರರು!ಇದನ್ನು ಭೂವರಾಹನಾಥ  ಸನ್ನಿದಿ ಎಂದು ನಂಬಿರುವ  ಜನರು ಭೂಮಿಗೆ ಸಂಬಂದಿಸಿದ ಕಷ್ಟಗಳು ಪರಿಹಾರ ವಾಗುತ್ತವೆ ಎಂದು ಹೇಳುತ್ತಾರೆ!ದೇವಾಲಯದ ಮುಂಭಾಗದಲ್ಲಿ  ಒಂದು ಶಿಲಾಶಾಸನದ ಕಲ್ಲಿದ್ದು ದೇವಾಲಯದ ಮಾಹಿತಿ ನೀಡುತ್ತಿದೆ
ಶಾಸನ ಕಲ್ಲು 
ಹಿಂದೆ ಇದ್ದ ದೇವಾಲಯ.[ ಈಗ ಹೊಸ ದೇವಾಲಯ ನಿರ್ಮಾಣ ಆಗುತ್ತಿದೆ ]

.೧೩೩೪ರ ಈ ಶಾಸನದ ರೀತ್ಯಾ ಮಹಾಪ್ರಧಾನ ಆದಿ ಸಿಂಗೇಯ ನಾಯಕನು ಕಲ್ಲಹಳ್ಳಿ ಗ್ರಾಮವನ್ನು ಅಗ್ರಹಾರವಾಗಿಸಿ ,ರಾಣಿ ದೇಮಲದೇವಿಯ ಹೆಸರಿನಲ್ಲಿ ದೇವಲಾಪುರ ಎಂದು ನಾಮಕರಣ ಮಾಡಿ ,ರಾಜ ಗುರು ಗುಮ್ಮಟ ದೇವನಿಗೆ ದಾನ ಮಾಡಿರುವುದಾಗಿ ತಿಳಿಸುತ್ತದೆ.ಶಾಸನದಲ್ಲಿ ಸೂರ್ಯ-ಚಂದ್ರ ,ಕಮಂಡಲ ,ದೀಪ ಮಾಲೆ ಕಂಬ ಅರ್ದ ಮಾನವ ಹಾಗು ಅರ್ದ ಬೇರುಂಡ ಪಕ್ಷಿ ಕೆತ್ತನೆಯಿದ್ದು ,ಪಂಜ ಮೇಲೆತ್ತಿ  ಗರ್ಜಿಸಿರುವ ಹುಲಿಯ ಕೆತ್ತನೆ ಅದ್ಭುತವಾಗಿದೆ              .ಬಂದವರು ಜೊತೆಯಲ್ಲಿ  ಊಟ ತಿಂಡಿ ಯನ್ನು ತರುವುದು ಒಳ್ಳೆಯದು ! ಇಲ್ಲಿ ತಿನ್ನಲು ಯಾವ ಸೌಲಬ್ಯ ಇರುವುದಿಲ್ಲ .ಮೈಸೂರಿನಿಂದ ಒಂದು ಸರ್ಕಾರಿ ಬಸ್ಸು ಬೆಳಿಗ್ಗೆ ೭ ಗಂಟೆಗೆ ಹೊರಡುತ್ತದೆ .ಸ್ವಂತ ವಾಹನ ಇದ್ದಲ್ಲಿ ಇನ್ನು ಸುತ್ತ ಮುತ್ತ  ಕೆಲವು ಪ್ರದೇಶ ನೋಡಬಹುದು!ಒಮ್ಮೆ ಪ್ರಯತ್ನಿಸಿ ಸಂತೋಷ ಹೊಂದಿರಿ.

Sunday, October 30, 2011

ಕನ್ನಡ ತಾಯಿಗೆ ಇತಿಹಾಸದ ಕಿರೀಟ ತೊಡಿಸಿದ ಬೆಂಜಮಿನ್ ಲೆವಿಸ್ ರೈಸ್ !!!!ಈಗ ಇವನ್ಯಾರೆಂದು ನಮಗೆ ಗೊತ್ತೇ ಇಲ್ಲಾ !!!!

ಕನ್ನಡನಾಡಿಗೆ ತಮ್ಮ ವಿಶೇಷ ಕೊಡುಗೆ ನೀಡಿದ ಹಲವಾರು ಮಹನೀಯರು ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸಿ ಮರೆಯಾಗಿದ್ದಾರೆ.ಹಾಲಿ ಇವರು ಯಾರು ಎಂಬುದೇ ಬಹಳಷ್ಟು  ಕನ್ನಡಿಗರಿಗೆ ಗೊತ್ತಿಲ್ಲ , ಯಾಕೆಂದ್ರೆ ಇವರ ಹೆಸರಿನಲ್ಲಿ ನಮ್ಮ ನಾಡಿನಲ್ಲಿ ಯಾವುದೇ ರಸ್ತೆ, ಪುತ್ತಳಿ,,ವೃತ್ತ, ಬಡಾವಣೆ, ಇರುವುದಿಲ್ಲ ಹಾಗು ಇವರ ಬಗ್ಗೆ  ಕನಿಷ್ಠ ನೆನಪೂ ಸಹ ಮೂಡಿಸುವ ಮಾಹಿತಿಗಳೂ ಸಹ ಮರೆಯಾಗುತ್ತಿವೆ.ಯಾವುದೇ ಪ್ರದೇಶದ ಭಾಷೆ , ಸಾಹಿತ್ಯ,ಸಂಸ್ಕೃತಿ,ಇತಿಹಾಸಗಳ ಅಧ್ಯಯನಕ್ಕೆ ಶಾಸನಗಳು ಅಮೂಲ್ಯ ಆಕರಗಳು,ಇವು ಒಂದು ಜನಾಂಗದ ಆಸ್ತಿ , ಕನ್ನಡ ನಾಡಿನ ಶಾಸನ ಸಂಪತ್ತು ಹೇರಳವಾಗಿದ್ದರೂ ಅವುಗಳು ಮರೆಯಾಗಿದ್ದಾಗ , ಅವುಗಳನ್ನು ಹುಡುಕಿ  ಸಂಶೋದಿಸಿ ಕನ್ನಡ ನಾಡಿನ ಹಿರಿಮೆ ಸಾರಿದ ಈ ಸಾಹಸಿ ಗೆ ನಮ್ಮ ನಾಡಿನಲ್ಲಿ ಕನ್ನಡಿಗರ ಹೃದಯದಲ್ಲಿ  ಸ್ಥಾನ  ಸಿಗಬೇಕಾದದ್ದು  ನ್ಯಾಯ.. ಕನ್ನಡಿಗರಾದ ನಾವು   ಕನ್ನಡ ರಾಜ್ಯೋತ್ಸವ  ಆಚರಣೆ ಮಾಡುವ ಮೊದಲು  ಕನ್ನಡ ಇತಿಹಾಸಕ್ಕೆ ಕೊಡುಗೆ ನೀಡಿ ,ಕನ್ನಡ ನಾಡಿನಲ್ಲಿ ಹಲವಾರು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಮರೆಯಾಗಿಹೋದ ಒಬ್ಬ ಧೀಮಂತ ವ್ಯಕ್ತಿ ಬಗ್ಗೆ  ತಿಳಿಯಬೇಕಾಗಿದೆ ಹಾಗು ಮುಂದಿನ ಪೀಳಿಗೆಗೆ ಇಂತಹ ಮಹನೀಯರ ಬಗ್ಗೆ ತಿಳಿಸಬೇಕಾಗಿದೆ. ಹಾಗಾಗಿ  "ಬೆಂಜಮಿನ್ ಲೆವಿಸ್ ರೈಸ್"  ಬಗ್ಗೆ ತಿಳಿಯೋಣ ಬನ್ನಿ.


1894 ರ ಮೈಸೂರ ಜಿಲ್ಲೆಯ  ಎಪಿಗ್ರಾಫಿಯಾ
         


        .ಬೆಂಜಮಿನ್ ಲೆವಿಸ್ ರೈಸ್ [1837 -1927 ]ರವರು ಹುಟ್ಟಿದ್ದು 17 ನೆ ಜುಲೈ 1837 ರಲ್ಲಿ  ಇಂಗ್ಲೆಂಡಿನಲ್ಲಿ ವಿಧ್ಯಾಭ್ಯಾಸ ಮುಗಿಸಿ 1860 ರಲ್ಲಿ ಭಾರತಕ್ಕೆ ಕಾಲಿಡುತ್ತಾರೆ.ಅವರಿಗೆ ಮೊದಲು ಸಿಕ್ಕ ಕೆಲಸವೇ ಬೆಂಗಳೂರಿನ ಸೆಂಟ್ರಲ್ ಹೈಸ್ಕೂಲಿನ ಮುಖ್ಯೋಪಾಧ್ಯಾಯ ಹುದ್ದೆ.ನಂತರ 1865  ರಿಂದ   1868  ವರೆಗೆ ಮೈಸೂರು ಹಾಗು ಕೊಡಗು ಪ್ರಾಂತಗಳಲ್ಲಿ ಶಾಲಾ ತನಿಖಾಧಿಕಾರಿ ಹುದ್ದೆ ನಿರ್ವಹಣೆ ಮಾಡಿರುತ್ತಾರೆ..ನಂತರ 1868  ರಲ್ಲಿ ವಿಧ್ಯಾ ಇಲಾಖೆಯ ಮುಖ್ಯಾಧಿಕಾರಿಯಾಗಿ  ಉತ್ತಮ ಸೇವೆ ಸಲ್ಲಿಸಿ ಎಲ್ಲರ ಗಮನ ಸೆಳೆಯುತ್ತಾರೆ.[ನಿಮಗೆ ತಿಳಿದಿರಲಿ ಮೈಸೂರು ಪ್ರಾಂತದಲ್ಲಿ ಇವರು ಜನಗಣತಿ ಆರಂಭಿಸಿ ಮಾಹಿತಿ ಅಂಕಿ ಅಂಶ ಕಲೆ ಹಾಕಿ  ಯೋಜನೆ ತಯಾರಿಕೆಗೆ ಅನುವು  ಮಾಡಿಕೊಟ್ಟಿದ್ದಾರೆ ಹಾಗು ಈ ಜನಗಣತಿ ಭಾರತದ ಮೊದಲ ಜನಗಣತಿ ಎಂದು ಇಂದಿಗೂ ಹೇಳಲಾಗುತ್ತದೆ.ಭಾರತದ ಮೊದಲ ಜನಗಣತಿ ಪ್ರಾರಂಭವಾಗಿದ್ದು ಕನ್ನಡ ನಾಡಿನಲ್ಲಿ ಎಂದರೆ ಪ್ರತಿ ಕನ್ನಡಿಗನೂ ಹೆಮ್ಮೆಪಡಬೇಕು.ಇದೆ ಆಧಾರದ ಮೇಲೆ ಇಂದಿಗೂ  ಸಹ ಭಾರತ ಜನಗಣತಿಯನ್ನು ಪ್ರತಿ ಹತ್ತು ವರ್ಷಕೊಮ್ಮೆ ದೇಶಾಧ್ಯಂತ ನಡೆಸಲಾಗುತ್ತಿದೆ]   ನಂತರ 1882  ರಲ್ಲಿ .ಹಂಟರ್ ವಿಧ್ಯಾ ಸಮಿತಿಯ ಕಾರ್ಯದರ್ಶಿಯಾಗಿ  ಇಲಾಖೆಯ ಜವಾಬ್ಶಾರಿ ನಿರ್ವಹಿಸಿ ಅಂದಿನ ಸರ್ಕಾರದ ಮೆಚ್ಚುಗೆಗೆ ಪಾತ್ರರಾಗುತ್ತಾರೆ.ಇವರ ಕಾರ್ಯಶೀಲತೆ ಗಮನಿಸಿದ ಸರ್ಕಾರ ಇವರನ್ನು 1884 ರಲ್ಲಿ ಹೊಸದಾಗಿ ರಚಿಸಿದ ಪುರಾತತ್ವ ಇಲಾಖೆಯ ನಿರ್ದೇಶಕರನ್ನಾಗಿ ನಿಯೋಜಿಸುತ್ತದೆ.ಹಾಗು 1890 ರಲ್ಲಿ ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ನಿಯೋಜನೆ ಮಾಡುತ್ತದೆ. ಈ ಅವಧಿಯಲ್ಲಿ ಬಿ.ಎಲ್.ರೈಸ್ ರವರು ಮಹಾತ್ಸಾಧನೆ ಮಾಡುತ್ತಾರೆ. ಮೊದಲೇ ಉತ್ಸಾಹಿಯಾಗಿದ್ದ  ರೈಸ್ ತಾವು ಕರ್ತವ್ಯ  ನಿರ್ವಹಿಸುವ ಅವಧಿಯಲ್ಲೇ ಹಲವು ಭಾಷೆಯಲ್ಲಿ  ಪಾಂಡಿತ್ಯ ಪಡೆದು,ಕನ್ನಡ ನಾಡನ್ನು, ಜನರನ್ನು ಚೆನ್ನಾಗಿ ಅರಿತಿದ್ದರು.ಪ್ರವಾಸ ಮಾಡುವ ಸಮಯದಲ್ಲಿ ತಮಗೆ ದೊರೆತ ಓಲೆಗರಿಗಳು,ಹಸ್ತ ಪ್ರತಿಗಳು,ಸ್ಥಳ ಪುರಾಣ, ಚರಿತ್ರೆ ಇವುಗಳನ್ನು ಕಲೆ ಹಾಕಿದ್ದರು.ಇವರ ಅವಧಿಯಲ್ಲಿ ಹಲವಾರು ದೇವಾಲಯಗಳಲ್ಲಿದ್ದ , ಪಾಳು ಬಿದ್ದ ದೇವಾಲಯ/ಮಂಟಪ ಗಳ ಬಳಿ ದೊರೆತ , ಹೊಲ ಗದ್ದೆಗಳಲ್ಲಿ ಅನಾಥವಾಗಿಬಿದ್ದಿದ್ದ , ಶಾಸನಗಳು,ಊರ ಒಳಗಡೆ ಕಂಡುಬಂದ , ಬಹಳಷ್ಟು ಶಾಸನಗಳನ್ನು ಪತ್ತೆ ಹಚ್ಚಿ  ಅಭ್ಯಾಸ ಮಾಡಿ ಅವುಗಳಿಂದ ತಿಳಿದುಬರುವ  ಮಾಹಿತಿಯನ್ನು ಕ್ರೂಧೀಕರಿಸಿ ರಾಶಿ ಹಾಕಿದರು.





ಮದ್ದೂರ್ ತಾಲೂಕಿನ ಅಪರೂಪದ ಆತಕೂರ್ ಶಾಸನ



.
ತಲಕಾಡಿನ ಶಾಸನ.  



              
ಈ ರೀತಿ  ಶಾಸನ , ಮಾಹಿತಿ ಸಂಗ್ರಹಿಸಿದ ಬಿ.ಎಲ್.ರೈಸ್ ತಾವೇ ಆಸಕ್ತಿ ಯಿಂದ ಹಲವಾರು ಶಾಸನಗಳನ್ನು ಓದಿ, ಹಿರಿಯರಿಂದ ಮಾಹಿತಿ ಪಡೆದು,ಯಾವುದೇ ಪೂರ್ವಾಗ್ರಹವಿಲ್ಲದೆ ಟಿಪ್ಪಣಿ ಮಾಡಿಕೊಂಡು ಆಸಕ್ತಿ ಪೂರ್ಣ ಕಾರ್ಯ ಮುಂದುವರೆಸಿದರು .1876 ರಲ್ಲಿ ಬರ್ಗೆಸ್ ಎಂಬುವರು ಆರಂಭಿಸಿದ" indian antiquary "  ಪತ್ರಿಕೆಯ ಮೊದಲ ಸಂಚಿಕೆಯಲ್ಲೇ ಮಡಿಕೇರಿ ತಾಮ್ರ ಶಾಸನದ ಬಗ್ಗೆ ಲೇಖನ ಪ್ರಕಟಿಸಿದರು.1879  ರಲ್ಲಿ ಮೈಸೂರು ಹಾಗು ಕೊಡಗಿನ ಸೀಮೆಯಲ್ಲಿ ದೊರೆತ ಶಾಸನಗಳ ಇಂಗ್ಲೀಷ್ ಅನುವಾದದ "ಮೈಸೂರ್ ಇನ್ಸ್ಕ್ರಿಪ್ಶನ್ಸ್" ಗ್ರಂಥ ಪ್ರಕಟ  ಮಾಡಿದರು.ನಂತರ ಎಪಿಗ್ರಾಫಿಯ ಕರ್ನಾಟಕ ಗ್ರಂಥ ಮಾಲೆ ಆರಂಭಿಸಿ  ಕೊಡಗಿನ ಸೀಮೆಯಲ್ಲಿ ಕಂಡುಬಂದ ಶಾಸನಗಳ ಅಪೂರ್ವ ಕ್ರೂಧೀಕರಣ ಮಾಡಿ ಕನ್ನಡ ಹಾಗು ಇಂಗ್ಲೀಷ್ ಭಾಷೆಯಲ್ಲಿ ಅರ್ಥ ನೀಡಿ  1896 ರಲ್ಲಿ "ಕೊಡಗಿನ ಗೆಜೆಟೀರ್" ಅನ್ನು ಎಪಿಗ್ರಾಫಿಯ ಕರ್ನಾಟಕ ಮಾಲೆಯಲ್ಲಿ ಮೊದಲು ಹೊರತಂದು ಇತಿಹಾಸ ನಿರ್ಮಿಸಿದರು.ಇದು ಇಡೀ ದೇಶದಲ್ಲೇ ಪ್ರಥಮವಾಗಿ ಪ್ರಕಟವಾದ  ಶಾಸನಗಳ ಒಂದು ಅಪೂರ್ವ ಗ್ರಂಥವಾಯಿತು.ನಂತರ ಇದನ್ನು ಈಗ ದೇಶಾದ್ಯಂತ ಮಾಡಲಾಗುತ್ತಿದೆ.1889 ರಲ್ಲಿ ಹಾಸನ ಜಿಲ್ಲೆ  ಶ್ರವಣ ಬೆಳಗೊಳದಲ್ಲಿ ದೊರೆತ ಶಾಸನಗಳ ಆಧಾರದ ಮೇಲೆ "ಶ್ರವಣ ಬೆಳಗೊಳದ ಶಾಸನಗಳು '' ಎಂಬ ಎರಡನೇ ಸಂಪುಟ ಹೊರಬಂದಿತು.ಅಧಿಕಾರದಲ್ಲಿದ್ದ ಹದಿನಾರು ವರ್ಷದಲ್ಲಿ  ಎಪಿಗ್ರಾಫಿಯಾ ಕರ್ನಾಟಕದ ಉಳಿದ ಹತ್ತು ಬೃಹದ್ ಸಂಪುಟಗಳನ್ನು ಪ್ರಕಟ ಮಾಡಿ ಜಿಲ್ಲಾ ವಾರು  ಶಾಸನಗಳ  ಮಾಹಿತಿ ಪ್ರಕಟಿಸಿದ್ದಾರೆ.




ಶ್ರೀ ರಂಗ ಪಟ್ಟಣದ ಸಮೀಪ  ಕಬ್ಬಿನ ಗದ್ದೆಯಲ್ಲಿ ಸಿಕ್ಕಿರುವ ಶಾಸನ.


ಬಿ.ಎಲ್. ರೈಸ್ ರವರು ಹನ್ನೆರಡು ಸಂಪುಟಗಳ ಕರ್ನಾಟಕ ಎಪಿಗ್ರಾಫಿಯ ಪ್ರಕಟಿಸಿದ ಬೆನ್ನಹಿಂದೆ ಅದರಲ್ಲಿ 8869 ಶಾಸನಗಳು ಬೆಳಕಿಗೆ ಬಂದಿದ್ದವು.ಅವರ ಕಾರ್ಯಕ್ಕೆ ಹಲವಾರು ಘನ ವಿಧ್ವಾಂಸರು, ಮೇಧಾವಿಗಳು, ಹಿರಿಯರು, ಜೊತೆಗೆ ಹಲವು ಗ್ರಾಮಗಳ ಜನತೆ  ಪ್ರೋತ್ಸಾಹ ನೀಡಿ ಮಾಹಿತಿ ಕಲೆಹಾಕಲು ನೆರವಾಗಿದ್ದರು .ಇದರಿಂದಾಗಿ ಕರ್ನಾಟಕದ ಚರಿತ್ರೆಯನ್ನು ಅರಿಯಲು ಒಂದು ಒಳ್ಳೆಯ ಆಧಾರ ಸಿಕ್ಕಿತು.ಬಿ.ಎಲ್.ರೈಸ್ ಕಂಡು ಹಿಡಿದ ಶಾಸನಗಳು ಕರ್ನಾಟಕದ ಚರಿತ್ರೆಯನ್ನು ಕ್ರಿ.ಪೂ.3  ನೆ ಶತಮಾನಕ್ಕೆ ಕರೆದೊಯ್ದವು. ಈ ಎಲ್ಲಾ ಶಾಸನಗಳಿಂದ ತಿಳಿದು ಬಂದ ರಾಜಕೀಯ ತಿರುಳನ್ನು ಬಿ.ಎಲ್.ರೈಸ್ " ಮೈಸೂರ್ ಅಂಡ್ ಕೂರ್ಗ್ ಫ್ರಂ ಇನ್ಸ್ಕ್ರಿಪ್ಶನ್ಸ್"ಎಂಬ ಗ್ರಂಥದಲ್ಲಿ ಬರೆದಿದ್ದಾರೆ. ಇವರು ಪ್ರಕಟಿಸಿರುವ ಎಪಿಗ್ರಾಫಿಯಾ ಶೇಣಿಯ ಗ್ರಂಥಗಳಲ್ಲಿ ಹಲವು ದೇವಾಲಯಗಳ ನಕ್ಷೆ ಪ್ರಕಟಗೊಂಡಿದ್ದು ಇವರು ಎಷ್ಟು ವೈಜ್ಞಾನಿಕವಾಗಿ ಅವುಗಳ ಅಧ್ಯಯನ ಮಾಡಿದ್ದಾರೆ ಎಂಬುದನ್ನು ತೋರಿಸುತ್ತವೆ.



ಸೋಮನಾಥಪುರದ ದೇವಾಲಯದ ನಕ್ಷೆ


Tuesday, October 4, 2011

ಇಲ್ಲೊಂದು ಆಕ್ಸಿಡೆಂಟ್ ಪುರಾಣ!!!ಹರಕೆಕುರಿಯ ಕಥಾಯಣ!!!!!!

  ನಮಸ್ಕಾರ  ಒಳ್ಳೆ ನವರಾತ್ರಿ ಸಮಯದಲ್ಲಿ   ಇದ್ಯಾವುದೋ ಆಕ್ಸಿಡೆಂಟ್ ಪುರಾಣ ತಂದಾ!!!!!! ಅಂತಾ ಬಯ್ದುಕೋ  ಬೇಡಿ , ನವರಾತ್ರಿಯನ್ನು ನಮ್ಮ ಬ್ಲಾಗ್ ಮಿತ್ರರು ನಗು ನಗುತ್ತಾ ಆಚರಿಸಲಿ ಅಂತಾ ಒಂದು ಹಳೆಯ ನೈಜ ಘಟನೆಯ ಚಳಕು ಇಲ್ಲಿ ಹಾಕಿದ್ದೇನೆ. ಓದಿ  ನೀವು ನಕ್ಕರೆ  ಅದೇ ನನ್ನ ನವರಾತ್ರಿಯ  ಶುಭಾಶಯಗಳು .ಬನ್ನಿ ಹೋಗೋಣ ಬಸ್ಸಿಗೆ.

 ಯಾರ್ರೀ ತುಮಕೂರು , ತುಮಕೂರು ಬೇಗ ಬನ್ನಿ ರೈಟ್ .......... ಹತ್ತಿ  ಸರ್ ಹತ್ತಿ ಸಾರ್ ......... ಅಂದ ಕಂಡಕ್ಟರ್ ...............................!!! ಬಸ್ಸಿನಲ್ಲಿ ಪ್ರತಿ ನಿತ್ಯ ಪ್ರಯಾಣಿಸುತ್ತಿದ್ದ .....ವಿವಿಧ ಸರ್ಕಾರಿ ಇಲಾಖೆ, ಬ್ಯಾಂಕ್, ಖಾಸಗಿ , ಇತರ ಸಂಸ್ಥೆಯ ಅಧಿಕಾರಿಗಳು, ನೌಕರರು,    ಸ್ಟಾರ್ಟ್ ಆದ ಬಸ್ಸನ್ನು  ದಡ ದಡ ನೆ ಹತ್ತಿ ತಮ್ಮ ತಮ್ಮ ಜಾಗ ಹಿಡಿದರು, ಬಸ್ಸಿನಲ್ಲಿ ಸೀಟ್ ಸಿಕ್ಕವರು ರಾಜ್ಯ ಗೆದ್ದ ಹರುಷದಲ್ಲಿ ಪೇಪರ್ ಓದುತ್ತಾ ಇರುವಂತೆ ನಟಿಸುತ್ತಾ ನಿಂತವರ ಚಲನ ವಲನ ನೋಡುತ್ತಾ ಮನದಲ್ಲಿ ನಗುತ್ತಾ ಮಂಡಿಗೆ ತಿನ್ನುತ್ತಿದ್ದರೆ , ಸೀಟ್ ಸಿಗದೇ ನಿಂತವರು ತಮ್ಮ ಅಸಮಾಧಾನವನ್ನು ಕಂಡಕ್ಟರ್ , ಡ್ರೈವರ್ ಮೇಲೆ ಹಾಕಿ............  ಈ ಬಸ್ಸು ಬಹಳ ಸ್ಲೋ ಕಣ್ರೀ ಇವರ ಕೊಬ್ಬು ಜಾಸ್ತಿಯಾಯ್ತು . ಇವರಿಂದಾಗಿ ನಾವು ಯಾವತ್ತೂ ಸರಿಯಾದ ಟೈಮಿಗೆ ನಮ್ಮ ಕೆಲಸಕ್ಕೆ ಹೊಗೊಕಾಗಲ್ಲಾ ಅಂತಾ ಶಾಪಾ ಹಾಕ್ತಾ ಇರ್ತಿದ್ರೂ........ ಸೀಟ್ ಸಿಗುವುದು ಸಿಗದಿರುವ ಆಟಾ ಎಲ್ಲರಿಗೂ ಒಂದಲ್ಲಾ ಒಂದು ದಿನ  ಅನುಭವ ಆಗುತ್ತಿದ್ದ ಕಾರಣ ಬರುತ್ತಿದ್ದ ಡೈಲಾಗ್ ಗಳು ವೆತ್ಯಾಸವಾಗುತ್ತಿದ್ದವು....

 ಹಾಗೆ ಕಳೆಯುತ್ತಿದ್ದ ಪ್ರಯಾಣದಲ್ಲಿ  ಒಮ್ಮೆ ಹೀಗಾಯ್ತು .........................."ದುರಾಸೆ ಪುರ "ದ ಬಳಿ ಬರುತ್ತಿದ ನಮ್ಮ ಎಕ್ಸ್ಪ್ರೆಸ್ಸ್ ಬಸ್ಸಿಗೆ ಒಂದು   "ಕುರಿ ಮರಿ"   ರಸ್ತೆಯ ಒಂದು ಬದಿಯಿಂದ  ಗಾಭರಿ ಯಿಂದ ಓಡಿಬಂದು ಚಲಿಸುತ್ತಿದ್ದ ಬಸ್ಸಿನ  ಎಡಭಾಗದ   ಹಿಂದಿನ ಚಕ್ರಕ್ಕೆ ಸಿಕ್ಕಿ  ಹಾಕಿಕೊಂಡು ಮೃತ ಪಟ್ಟಿತು , ಅದನ್ನು  ಅಟ್ಟಿಸಿಕೊಂಡು ಬಂದ ಚಿಕ್ಕ ಮಗು  ಆ "ಕುರಿ ಮರಿ " ಸತ್ತಿದ್ದನ್ನು ಕಂಡು ಸಂತೋಷದಿಂದ  ನಕ್ಕಿತ್ತು. ಅಲ್ಲೇ ರಸ್ತೆಯಲ್ಲಿದ್ದ  ಹಲವು ಜನರು ಬಸ್ಸನ್ನು ಅಡ್ಡ ಹಾಕಿ  ನಿಲ್ಲಿಸಿ  ಡ್ರೈವರ್ ಹಾಗು ಕಂಡಕ್ಟರ್ ಗೆ ಗೂಸ ಕೊಟ್ಟರು ಬನ್ನಿ  ಸನ್ನಿವೇಶ ನೀವು ನೋಡುವಿರಂತೆ..................................!!!!!!!!!!ಯಾವಾಗ ಕುರಿಮರಿ  ಬಸ್ಸಿನ ಚಕ್ರಕ್ಕೆ ಸಿಕ್ಕಿ ಕೊಂಡಿತೋ  , ಬಸ್ಸು ನಿಂತ ತಕ್ಷಣ  , ಪಾಪ ಡ್ರೈವರ್ ಹತ್ತಿರ ಹೋದ ಒಬ್ಬ  ಲೇ ಯಾರ್ಲಾ  ಅದು ಡೈವರ್ರು  ಇಳಿಲಾ  ಕೇಳಾಕೆ ಅಂತಾ ಹೇಳಿ ಕತ್ತಿನ ಪಟ್ಟಿ ಹಿಡಿದು ಕೊಂಡು ಬಸ್ಸಿನಿಂದ ಎಳೆದುಕೊಂಡಾ , ಅಲ್ಲಾ ಕಣ್ಲಾ ಅನ್ಯಾಯವಾಗಿ ಕುರಿಯ  ಸಾಯ್ಸಿ ಬುಟ್ಟೆ ಅಂತಾ ಎರಡು ಏಟು ಕೊಟ್ಟಾ.  ಬಸ್ಸಿನಲ್ಲಿ ಪ್ರತಿನಿತ್ಯ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರು  ಕೆಳಗೆ ಇಳಿದು ಡ್ರೈವರ್ ರಕ್ಷಣೆಗೆ ಧಾವಿಸಿದರು. ಆಗ ಶುರುವಾಯ್ತು. ಪಂಚಾಯ್ತಿ.{ಸುಲಭವಾಗಿ ಅರ್ಥವಾಗಲು ಒಂದೊಂದು ಕ್ಯಾರಕ್ಟರ್ ಗೆ ಹೆಸರಿಟ್ಟಿದ್ದೀನಿ}
.................................................... ...........ಸಪ್ಪೆ  ಕ್ಯಾತಾ :- ಅಲ್ಲಾ ಕಣ್ಲಾ ಡೈವರ್ರು  ಅನ್ನಾಯವಾಗಿ    ಕುರಿಮರಿಯ ತೀರ್ಸಿ ಬುಟ್ಟಲ್ಲಾ.........ಈಗೇನ್   ಮಾಡಬೇಕೂ ಯೋಳು ????                                                                     ...........                                           ಡ್ರೈವರ್ :- ಅಲ್ಲಾ ಯಜಮಾನ  ನಾನು ನಿದಾನವಾಗಿ ಬತ್ತಿದ್ದೆ , ಕುರಿಮರಿ ಬಂದು ಹಿಂದಿನ ಚಕ್ರಕ್ಕೆ ಸಿಗಾಕಂದ್ರೆ ನಾನ್ ಏನ್ ಮಾಡ್ಲಿ ಹೇಳು, ಅಂದಾ................................................................!!!!!!!!!. .................................                                         ಬಸ್ರಾಜ :- ನಾನೂ ನೋಡ್ತಾನೆ ಇವ್ನಿ, ಕುರಿಮರಿ ಬತ್ತಿದ್ದಾಗ ನೀನು ಬಿರೇಕ್ [ಬ್ರೇಕ್] ಹಾಕ್ನೆ ಇಲ್ಲಾ . ಬೊ ಸ್ಪೀಡಾಗಿ ಬಂದು  ಹಿಂದಿನ ಚಕ್ರುಕ್ಕೆ  ಕುರಿ ಸಿಗಾಕ್ಸಿ ಬುಟ್ಟೆ , ನೀನು ಬೇಕೂಂತಲೇ ಇಂಗೆ ಮಾಡಿದ್ದೀಯೇ , ಯೋ ಇವ ಇಂಗೆ ಕನೈಯ್ಯೋ  ನಮ್ಮೂರ ಜನ ಕಂಡ್ರೆ ಆಗಾಕಿಲ್ಲಾ , ಅವತ್ತು  ಪಟ್ಟಣ ದಲ್ಲಿ ಕೈತೊರ್ಸಿದ್ರೆ  ನಿಲ್ಲಿಸದೆ ಮೈಮೇಲೆ ಬಸ್ ಹತ್ತಿಸಕ್ಕೆ ಬತ್ತಾನೆ ಅಂತಾ ತನ್ನ ಹಳೆ ಸೇಡಿನ ಆರೋಪ ಮಾಡಿದಾ................!!!!                                  ಅಷ್ಟರಲ್ಲಿ  ಲಬೋ ಲಬೋ ಅಂತಾ ಬಾಯಿ ಬಡಿದುಕೊಳ್ಳುತ್ತಾ  ಒಂದು ಹೆಂಗಸು ಹಾಗು ಒಂದು ಗಂಡಸು ಬಂದರೂ !!!!!!  ಅಯ್ಯಯ್ಯೋ ಹೊಯ್ತಲ್ಲಾಪ್ಪ ನನ್ನ ಕುರಿ ಹೋದ ತಿಂಗಾ [ ತಿಂಗಳು ]  ತಾನೇ ಸಂತೇಲಿ ಕೊಂದ್ಕಂಡ್ ಬಂದಿದ್ದೆ!!!! ಹಾಳಾದ್ ಬಸ್ಸು  ಸಾಯ್ಸ್ಬುದ್ತೆ ಎನ್ಗಪ್ಪಾ ಬದುಕೋದು ನಮ್ಮಂತಾ ಬಡವರೂ ಅಂತಾ  ಡ್ರೈವರ್ಗೆ ಸಹಸ್ರ ನಾಮ ಸಹಿತ , ಅರ್ಚನೆ ಮಾಡಿ  ಡ್ರೈವರ್ ವಂಶ ಪಾವನ ಮಾಡಿದ್ದಳು.[ ಪಾಪ ಇಂತಹ ಹಳ್ಳಿಗಳ ಕಡೆ ದಿನನಿತ್ಯಾ ಸಂಚರಿಸೋ ಸಾರಿಗೆ ಸಂಸ್ಥೆ / ಖಾಸಗಿ ಬಸ್ಸಿನ  ಸಿಬ್ಬಂದಿಗಳ ಪಾಡೇ ಹಾಗೆ ಆಗಾಗ ಇಂತಹ ಅರ್ಚನೆ ಸಹಸ್ರನಾಮಾರ್ಚನೆ  , ಗೂಸ ತಿನ್ನುವಿಕೆ ನಡೆಯುತ್ತಿರುತ್ತವೆ...].ಇದ್ಯಾಕೋ ನಿಲ್ಲೋ ಲಕ್ಷಣ ಕಾನ್ತಿಲ್ಲಾ ಅನ್ನಿಸಿ ಬಸ್ಸಿನಲ್ಲಿದ್ದ   ಕೆಲವರು ಕೆಳಗೆ ಇಳಿದರೂ ................................................................. ಇಳಿದದ್ದರಲ್ಲಿ ಅವರ ಸ್ವಾರ್ಥವೂ  ಇತ್ತು ಅನ್ನಿ , ಬಸ್ ಡ್ರೈವರ್ ನ ಬಿಡಿಸಿ ಬಸ್ಸನ್ನು ಹೊರಡಿಸಿದರೆ ತಾವು ಕೆಲಸಕ್ಕೆ ಸರಿಯಾದ ಸಮಯಕ್ಕೆ ತಲುಪಬಹುದು ಅನ್ನೋ ತರಾತುರಿ ಯಲ್ಲಿ ಇಳಿದು  ರೀ ಡ್ರೈವರ್ ಅದೇನ್ ಪೈಸಲ್  ಮಾಡಿಬಿಟ್ಟು ಬನ್ರೀ .... ಲೇಟಾಗುತ್ತೆ ಅಂತಾ ಅನ್ನುತ್ತಾ , ಯಾರ್ರೀ  ಕುರಿಯವ್ರು ಅಂತಾ ಪಂಚಾಯ್ತಿ ಶುರುಮಾಡಿದರು.  ನಂತರ ಅಲ್ಲೇ ಇದ್ದ ನಮ್ಮ ಮಲ್ಲಿಕಾರ್ಜುನ ಮೇಷ್ಟ್ರು  ಇಳಿದು ಬಂದು ನ್ಯಾಯ ಶುರುಮಾದಿದ್ರೂ...............ಅವರನ್ನ ಪ್ರೀತಿಯಿಂದ ಮಲ್ಲಿಕ್ ಅನ್ನೋಣ.                                              ಮಲ್ಲಿಕ್ :- ರೀ ಅದ್ಯಾರು ಕುರಿಯವ್ರು ಬನ್ರೀ ಮುಂದಕ್ಕೆ .........!!!!!                                                                         ಕುರಿ ಮಾಲೀಕರು ಯಜಮಾನ್ರು :- ನಾಮೇ ಸಾ , ಅಂತಾ ಬಂದ್ರೂ .............................!!!!!!!!!!!!!                                                                                                                   ಮಲ್ಲಿಕ್ :- ನೋಡಯ್ಯಾ ಯಜಮಾನ  ನಾನೂ ನೋಡ್ತಾ ಇದ್ದೆ  ಬಸ್ನವ್ರ್ದು  ತಪ್ಪಿಲ್ಲಾ ... ಕುರಿ ಓಡಿಬಂದು ಚಕ್ರಕ್ಕೆ ಸಿಗಾಕತು , ಅದೇನು  ಇಸ್ಕಂಡು  ಬಸ್ಸನ್ನು ಬುಟ್ಟು ಬುಡು [ಬಿಟ್ಟು ಬಿಡು ] .......                                                                       ಕುರಿಮಾಲಿಕರು :- ಹೋದ ತಿಂಗಾ[ ತಿಂಗಳು ]  ತಾನೇ ಕಿರ್ಗಾವಲ್ ಸಂತೇಲಿ  ಎಡ್ಸಾವ್ರಾ[ ಎರಡು ಸಾವಿರಾ ] ಕೊಟ್ಟು ತಂದಿದ್ದೆ.ದಿನಾ ಐವತ್ತು ಕರ್ಚುಮಾಡಿ ಹುಳ್ಳಿ, ಬಾಳೆಹಣ್ಣು, ಎಲ್ಲಾ ಕೊಟ್ಟು ತಯಾರಿ ಮಾಡಿದ್ದೆ ....... ಒಂದೈದು ಸಾವಿರಾ ಆಗ್ಬೈದು ಅಂದಾ. [ ಸತ್ತಿದ್ದ ಕುರಿ ಹಿಂದಿನ ಚಕ್ರದಲ್ಲಿ ಬಿದ್ದಿತ್ತು  ಅದರ ದೇಹದಲ್ಲಿ ಅವನು  ಹೇಳಿದ ತಯಾರಿಯ  ಯಾವ ಲಕ್ಷಣಗಳೂ ಇರಲಿಲ್ಲ ] .........!!!!!!!!                                                                                                              ಮಲ್ಲಿಕ್ :- ಯೋ ಯಜಮಾನ ಅವೆಲ್ಲಾ ಬ್ಯಾಡ  ಸುಮ್ನೆ ನೂರ್ ರುಪಾಯಿ ಕೊಡ್ತಾರೆ  ಇಸ್ಕಂಡು ಹೋಗು , ಜಾಸ್ತಿ ಎಳದ್ರೆ         ನಿಂಗೆ ತೊಂದ್ರೆ ಅಂದ್ರೂ. .......!!!!                        ಗ್ರಾಮಸ್ತರು :- ಹ ಹ ಹ ಅಂತಾ ನಕ್ಕು , ಅಲ್ಲಾ ಸಾ ಅದೇನ್ ತೀರ್ಮಾನ ನಿಮ್ಮದು ಅಂತಾ ಹೇಳಿದ್ರೂ, ಅಲ್ಲೇ ಇದ್ದ ಒಬ್ಬಾ ಲೇ ಈ ಕುರಿಯ ನಮ್ಮೂರ ದ್ಯಾವ್ರ್ಗೆ ಹರಕೆ ಬುಟ್ಟಿತ್ತು ಅಲ್ವೇ ..............................................!!! ಅಂದಾ,   ಎಲ್ಲರಿಗೂ ಹೊಸ ಅಸ್ತ್ರ ಸಿಕ್ಕಿತ್ತು.  ಹೂ ಕಲಾ   [ಹೌದು ಕಣೋ ]   ಈಗ ಇವರ ಕುರಿ ಸತ್ತೊಯ್ತಲ್ಲಾ ಅದಕ್ಕೆ  ಇವ್ರು  ದ್ಯಾವ್ರ್ಗೆ ಗೆ "ಐದ  ಸಾವ್ರಾ" ದಂಡಾ  ಕಟ್ ಬೇಕಾಯ್ತದೆ   ಅಂದಾ ....!!!! ಮೊದಲೇ ಉರಿಯುತ್ತಿದ್ದ ಬೆಂಕಿಗೆ ಅವ ತುಪ್ಪಾ ಸುರಿದು ವಿಜಯದ ನಗೆ ನಕ್ಕಿದ್ದಾ.  ಬಸ್ಸಿನಲ್ಲಿ ಇದ್ದವರಿಗೆಲ್ಲಾ ಇವತ್ತು ತಮ್ಮ ಕೆಲಸದ ಜಾಗದಲ್ಲಿ ಮೇಲಧಿಕಾರಿಗಳಿಂದ , ಸಾರ್ವಜನಿಕರಿಂದ ,ಕೇಳಬೇಕಾದ ಮಾತುಗಳನ್ನು ನೆನೆದು ಮೈ ಚಳಿ ಶುರು ಆಗಿತ್ತು  ಬಸ್ಸಿನ ಡ್ರೈವರ್, ಕಂಡಕ್ಟರ್ ಇಬ್ಬರಿಗೂ  ಏನೂ ತಿಳಿಯದೆ ಬೆಪ್ಪಾಗಿ ನಿಂತಿದ್ದರು.                                                                                                                                                                 ಇದನೆಲ್ಲಾ  ಗಮನಿಸುತ್ತಿದ್ದ  ಮಲ್ಲಿಕ್   :- ನೋಡ್ರಪ್ಪಾ ಇದು ಸರ್ಕಾರಿ ಬಸ್ಸು ಅನ್ಗೆಲ್ಲಾ ಬಸ್ ನಿಲ್ಸಿ ತೊಂದ್ರೆ ಕೊಡಬಾರದು, ಅದೇನು ಕೊಡ್ತಾರೋ ಇಸ್ಕಂಡು  ಸುಮ್ನೆ ಬಸ್ ಬುಡಿ,  ಕುರಿಯವ್ರಿಗೆ ಇನ್ನೂರು ಹಾಗು ನಿಮ್ಮೂರ್ ದ್ಯಾವ್ರ್ಗೆ ನಾನೇ ತಪ್ಪು ಕಾಣಿಕೆ ನೂರ್ ರುಪಾಯಿ ಹಾಕ್ತೀನಿ ಅಂದ್ರೂ................................!!!!!!                                                                     ಗ್ರಾಮಸ್ಥರು :- ಏ ಅದೇನ್ಗಾದ್ದೂ ಸಾ , ಇದ್ಯಾವ್ ಸೀಮೆ ತೀರ್ಮಾನ , ಅದೆಲ್ಲಾ ಆಗಾಕಿಲ್ಲಾ ಬುಡಿ ಸಾ ಅಂದ್ರೂ , ಕೊನೆಗೆ ಒಗ್ಲಿ  "ಯೋಳು"[ ಏಳು ಸಾವಿರಾ ]   ಸಾವ್ರಾ   ಕೊಡ್ಸಿ ಅಂದ್ರೂ  ...........................!!!!!                                        ಮಲ್ಲಿಕ್ :- ಅಲ್ಲಾ ಕಣ್ರಪ್ಪಾ ನೀವು ತಪ್ಪು ಮಾಡ್ತಾ ಇದೀರಿ ಅಂತಾ , ಅಲ್ಲೇ ಇದ್ದ  ಕೆಲವು ಮುಖಗಳನ್ನು ನೋಡಿ , ಲೇ ಬಸವ, ಸೀನ, ಕೃಷ್ಣ  ಬನ್ರೋ ಇಲ್ಲಿ  ಅಂದ್ರೂ , .......................................!!!!!  ಆ ಬಹುಷಃ ಹೈಸ್ಕೂಲ್ ಮಕ್ಕಳಿರಬೇಕೂ, ಸಾ ನಮಸ್ತೆ ಸಾ ಅಂತಾ ಓಡಿಬಂದು ನಿಂತವು. [ಆಮೇಲೆ ತಿಳೀತು ಆ ಮಕ್ಕಳು ಅವರ ಶಾಲೆಯ ಮಕ್ಕಳು ಎಂದು ] ಲೇ ನಿಜ ಹೇಳ್ರೋ  ಈ ಕುರಿನ  ದ್ಯಾವ್ರಿಗೆ ಬಿಟ್ಟಿದ್ರೆನೋ ಅಂದ್ರೂ  ,                                                                                                                                                   ಮಕ್ಕಳು:- ಇಲ್ಲಾ ಸಾ ಇದು ಈ ರಾಜೇಶನ ಮನೆ ಕುರಿ ಸಾ ಅಂದವು. ಯಾರೋ ರಾಜೇಶ ಅಂದ್ರೆ ಅದೇ ಎಂಟನೆ ಕ್ಲಾಸಲ್ಲಿ ಇಲ್ವಾ ಸಾ ಅವನವು ಅಂದವು.                                                                                                         ಅಷ್ಟರಲ್ಲಿ ಗ್ರಾಮಸ್ತರ ಕಡೆ ತಿರುಗಿದ  ಮಲ್ಲಿಕ್ ಯಾಕ್ರೈಯ್ಯಾ ಸುಳ್ಳು ಹೇಳ್ತೀರಿ  ಅಂದ್ರೆ ಅಲ್ಲೇ ಇದ್ದ ಒಬ್ಬಾ ಇಲ್ಲಾ ಸಾ ಈಗತಾನೆ  ನಮ್ಮ ಹೈದಾ ಯೋಳ್ದಾ, ಈ ಕುರಿ ಅಲ್ವಂತೆ , ಅದೂ ಇಂಗೆಯ ಇತ್ತಲ್ಲಾ  ಅದಕೆ ಹಂಗಾಯ್ತು ಅಂತಾ ತಿಪ್ಪೆ ಸಾರಿಸಿದ. ಅಲ್ಲಿಗೆ ಹರಕೆ ದಂಡಾ ತಪ್ಪಿತು. ಮುಂದೆ ಸರಿ ಬಿಡ್ರಪ್ಪಾ ಎಂಗೂ ನಮ್ಮ ಟೈಮ್ ವೇಷ್ಟ್ ಮಾಡಿದ್ದೀರಿ ಬನ್ನಿ  ಇನ್ನೇನು ಪೋಲಿಸ್ ಸ್ಟೇಶನ್ ನಲ್ಲೆ ಇತ್ಯರ್ಥ ಆಗ್ಲಿ , ಎಂಗೂ ಬಸ್ಸಿನ ಡ್ರೈವರ್ಗೆ ಹೊಡೆದಿದ್ದೀರಿ, ನಾವೇ ಸಾಕ್ಷಿ ಹೇಳ್ತೀವಿ, ಬಸ್ಸಿನ ನಂಬರ್ ಬರ್ಕೊಳ್ಳಿ  , ಅಂತಾ ತಾಳಿ ಪೋಲಿಸ್ ನವರಿಗೆ ನಾನೇ ಫೋನ್ ಮಾಡ್ತೀನಿ ಅಂತಾ ಫೋನ್ ತೆಗೆದು ಹಲೋ ಅಂದ್ರೂ ಅಷ್ಟೇ .........................................!!!!!!                                                                                                               ಗ್ರಾಮಸ್ಥರು :-  ಏ ಬುಡಿ ಸಾ ಇದಕೆಲ್ಲಾ ಯಾಕೆ ಪೋಲಿಸು , ಕಟ್ಲೆ ಎಲ್ಲಾ  ನಾಮೇ ಸರಿ ಮಾಡ್ಕಂದ್ರಾಯ್ತು    ಅಂತಾ ಹೋಗ್ಲಿ  ಐದು  ಸಾವ್ರಾ ಕೊಡ್ಸಿ ಸಾ ಅಂದ್ರೂ .  

Friday, September 30, 2011

ರೀತಿ!! ಈ ರೀತಿ !!! ಇನ್ನೊಂದು ರೀತಿ !!!!

ಮೊದಲು ಗೆಳೆಯ  ಪ್ರಕಾಶ್ ಅಣ್ಣ ಬರೆದ  ಬರೆದ "ರೀತಿ" ....   ಓದಿ    ಇಟ್ಟಿಗೆ ಸಿಮೆಂಟು: ರೀತಿ..., ನಂತರ ಮತ್ತೊಬ್ಬ ಗೆಳೆಯ  ದಿನಕರ ಮೊಗೆರ ಬರೆದ  "ಈ ರೀತಿ"....http://dinakarmoger.blogspot.in/2011/09/blog-post.html ಓದಿ ನಂತರ ಬನ್ನಿ ಇಲ್ಲಿದೆ "ಇನ್ನೊಂದು ರೀತಿ"!!!!!!!    ರೀತಿ , ಈ ರೀತಿ ಕತೆಗಳ  ಮುಂದುವರೆದ ಸಂಚಿಕೆಗೆ  ಅದೇ "ಇನ್ನೊಂದು ರೀತಿ "   ತಿರುವಿನ ಹಂದರ.                                                                                                                                ...................................................................................................................................................................                                              " ನಾನು ಬಗ್ಗಿ ನೋಡಿದೆ......

ONE MESSAGE RECEIVED.....!!!!
""                                                                                            
 " I am missing you a lot , how is your wife ????    ............ raagini "
                                      
ಅರೆ ಇದೇನಿದು !!! ಇವಳ್ಯಾರು ರಾಗಿಣಿ ??? ಈ ಬಗ್ಗೆ  ಇವನೇನು ಹೇಳೇ ಇರ್ಲಿಲ್ಲಾ !!!!! ತಾಳು ತಾಳು " ರಾಗಿಣಿ " ಮದುವೆಯ ಆರತಕ್ಷತೆಯಲ್ಲಿ  ಪರಿಚಯಿಸಿದ್ದ ನೆನಪು  ಆದರೆ ಆ ದಿನ ಸೇರಿದ್ದ ಸಾವಿರಾರು ಜನರಲ್ಲಿ  ಯಾರ ಮುಖ ಜ್ಞಾಪಕಕ್ಕೆ ಬರುತ್ತೆ??? ಆಲ್ವಾ . ಯಾಕೋ ಮನದಲ್ಲಿ ನನಗೆ ತುಮುಲ ಶುರುವಾಯ್ತು.............!!!!!!!! ಅಷ್ಟರಲ್ಲಿ ..................................
ನನ್ನ ಮೊಬೈಲಿನಲ್ಲಿ  ಎಸ.ಎಂ.ಎಸ ಬಂದ ಸದ್ದು ............................................!!!!!!!!!!!!!!!!!!!! ಇನ್ಬಾಕ್ಸ್  ತೆರೆದು ಮೆಸ್ಸೇಜ್  ನೋಡಿದೆ........................................................................!!!!!!!!!!    HAPPY WISHES TO "YOU, HOW IS HUBBY ?? IS HE SMARTER THAN ME ???  I MISSED U  A LOT , I..................................GUESS ME!!!!! .................................................A  HERO !!!!.......................!!"
                                                                                                                                                                 ನನಗೆ ಕೆಟ್ಟ ಕೋಪ ಬಂದು  ಮತ್ತೆ ನನ್ನ ಮೊಬೈಲ್ ನಿಂದ  ಎಸ. ಎಂ.ಎಸ. ಮಾಡಿದೆ  WHO'S THIS???...................ಅಷ್ಟರಲ್ಲಿ  ಪುಟ್ಟಣ್ಣಿ   ಆಫಿಸ್ ಗೆ ಲೇಟಾಯ್ತು  ತಿಂಡಿ ಕೊಡ್ತೀಯಾ ........................................... ಅವನ ಕರೆ ಬಂತು ಮನಸ್ಸಿನಲ್ಲಿ .ಗೊಂದಲದ ಗೂಡಾಗಿದ್ದ  ನಾನು  ಯಾಂತ್ರಿಕವಾಗಿ  ಹೋಗಿ  ತಿಂಡಿ ಕೊಟ್ಟೆ. ........................................!!!                  ಯಾಕೆ    "ಪುಟ್ಟಣ್ಣಿ" ರಾತ್ರಿ ಬೇಸರ ಇನ್ನೂ ಹೋಗಿಲ್ವಾ ಚಿನ್ನಾ ................. ಅಂತಾ ಅವನು ಹೇಳಿದ ಮಾತಿಗೆ  ಬಲವಂತದ ನಗೆ ನಕ್ಕು   ಹಾಗೇನಿಲ್ಲಾ  ಅಂತಾ ಸುಮ್ಮನಾದೆ.                .................... ತಿಂಡಿ ತಿನ್ನುವಾಗಲೂ  ಆತಂಕದಿಂದ ಆತ  ತನ್ನ ಮೊಬೈಲ್ ನಿಂದ ಮೆಸ್ಸೇಜ್  ಕಳುಹಿಸುತ್ತಲೇ ಇದ್ದದ್ದು ನನ್ನ ಗಮನಕ್ಕೆ ಬಂದು  "ಈ ಮನುಷ್ಯ ಒಬ್ಬ ಮುಖವಾಡ  ಧರಿಸಿದ  ಮೋಸಗಾರ ಅನ್ನಿಸಿತ್ತು." ಆದರೂ ಈ ಜಗತ್ತಿಗೆ ನಾವಿಬ್ಬರು  ಅಧಿಕೃತ ವಾಗಿ ಗಂಡ ಹೆಂಡಿರೆಂಬ  ಪದವಿ ಹೊತ್ತು ಮೆರೆಯಬೇಕಾದ  ಅನಿವಾರ್ಯತೆ ಇದೆ ಅನ್ನಿಸಿ  ಮೌನವಾಗಿ ರೋಧಿಸಿದ್ದೆ, ಮತ್ತೊಮ್ಮೆ ನನ್ನ  ಮೊಬೈಲಿನ ಮೆಸ್ಸೇಜ್  ಜ್ಞಾಪಕಕ್ಕೆ ಬಂದು  ನನ್ನ ಭಾವನೆಗಳನ್ನು ಅಣಕಿಸುತ್ತಿತ್ತು. ಹಾಗು ಹೀಗೂ ನಮ್ಮಿಬ್ಬರ  ಈ ಜೀವನ  ಆಟ ಈ ರೀತಿ "ಕಣ್ಣಾ ಮುಚ್ಚಾಲೆ"  ಆಟ ಆಗಿತ್ತು.  .........................             ತಿಂಡಿ ತಿಂದ ಆತ   " ಪುಟ್ಟಣ್ಣಿ" .....  ಬೈ ಚಿನ್ನಾ ಅಂತಾ ನನಗೆ ಅರಿವಿಲ್ಲದೆ  ನನ್ನ  ಬಳಸಿ ಕೆನ್ನೆಯ ಮಚ್ಚೆಗೆ  ಮುತ್ತಿಟ್ಟ !!!!!  ಕೋಪ ಬಂದರು ಸಾವರಿಸಿಕೊಂಡು  ನೋಡುವಷ್ಟರಲ್ಲಿ  ಆತ ಗೇಟು ದಾಟಿ  ಕಾರ್ ಒಳಗೆ ಹೊಕ್ಕಿ ಹೊರಟೇಬಿಟ್ಟ..................................!!!!!!!!!!!!!!!!!!!!!! ನಾನು ನಿಧಾನವಾಗಿ ಕೋಪ ಕಡಿಮೆ ಮಾಡಿಕೊಂಡು  ಖಾಲಿ ಇರುವ ಮನೆಯೊಳಗೇ ನಿಧಾನವಾಗಿ  ಬಂದು ನನ್ನ ಹಾಸಿಗೆಯ ಮೇಲೆ ಬಿದ್ದು ಕೊಂಡೆ........ ...............................
    ಮತ್ತೆ ನನ್ನ ಮೊಬೈಲ್ ರಿಂಗ್ ಆದಾಗ  ಎಚ್ಚರ ಗೊಂಡ ನಾನು ಹೆಲೋ ಅಂದದ್ದೇ  ಆ ಕಡೆಯಿಂದಾ  ಸಾರಿ ಕಣೆ ಬೆಳಿಗ್ಗೆ ನಿಂಗೆ ಎಸ. ಎಂ.ಎಸ. ಮಾಡಿದ್ದೆ   ಆದ್ರೆ ನೀನು ಕೋಪದಿಂದ  WHO'S THIS???.         ಅಂದೆ ಹಾಗಾಗಿ ನಿನ್ನೊಡನೆ ನಾನೇ ಮಾತಾಡಿ  ಬಿಡೋಣ ಅಂತಾ ಕಾಲ್ ಮಾಡಿದೆ . ನಾನು ಯಾರು ಗೊತಾಗ್ಲಿಲ್ವಾ ??? ಅರೆ "ಬುದ್ದು"   ನಾನು ಕಣೆ  ಜಯಂತ್  ಈಗ ಗೊತ್ತಾಯ್ತಾ!!!!  ಮಾರಾಯ್ತಿ  ನಿನ್ನನ್ನು ಎಲ್ಲೆಲ್ಲಿ ಹುಡುಕೋದು??????  ಕೊನೆಗೆ ನಿನ್ನ ಫ್ರೆಂಡ್  ಶೀಲ ಹತ್ತಿರ ನಿನ್ನ ನಂಬರ್ ತಗೊಂಡು ಕಾಲ್ ಮಾಡಿದೆ ,ನನ್ನ ಮೇಲೆ ಕೋಪಾನ??? ಅಂತಾ ಒಂದೇ ಸಮನೆ  ನನಗೆ ಮಾತಾಡಲೂ ಅವಕಾಶ ಕೊಡದೆ ಮಾತಾಡಿದ . ಮೊದಮೊದಲು ಅವ ಯಾರೆಂದು ತಿಳಿಯೋದು ಕಷ್ಟವಾದರೂ ನಂತರ ಅವನ್ಯಾರೆಂದು ತಿಳೀತು. ನಂತರ ನಾನು ಏನೋ ಸಮಾಚಾರ ಹೇಗಿದ್ದೀ ?? ಎಲ್ಲಿದ್ದೀ ?? ಅಂದೆ ......................., ಅಯ್ಯೋ ಬುದ್ದು!!!! ಯಾಕೆಳ್ತಿಯಾ ನನ್ನ ಪಾಡು  ಅದು, ಸರಿ ನಿಂಗೆ ಮದುವೇ ಆಯ್ತಂತೆ  ಹ್ಯಾಗಿದ್ದಾನೆ ನಿನ್ನ ಹಬ್ಬಿ , ನನಗಿಂತಾ ಸ್ಮಾರ್ಟಾ!!!!!!! ಅಂದಾ  ಯಾಕೋ ಗೊತ್ತಿಲ್ಲಾ .ಸ್ವಲ್ಪ ಇರೋ ಮತ್ತೆ ಕಾಲ್ ಮಾಡ್ತೆನಿ ಅಂತಾ ಫೋನ್ ಇಟ್ಟೆ!!!!!     ಆಗಲೇ ಮನಸು ನೆನಪಿನಾಳಕ್ಕೆ ಇಳೀತು.....................................................  ...................................................!!!! ಆಗ ಆಗಿದ್ದೆ  ಹಿಂದಿನ ಕಥೆಯ ಅನಾವರಣ.   ಹೌದು ಅಂದು ನಮ್ಮ  ಊರಿನ ಕಾಲೇಜಿನಲ್ಲಿ ಓದುವಾಗ  ನಡೆದ   ಗೋವಾ  ಘಟನೆ ನಂತರ  ನಾನು ಆ ಕಾಲೇಜಿಗೆ ಹೋಗದ ಕಾರಣ  ನನ್ನನ್ನು   ಆ ಕಾಲೇಜು ಬಿಡಿಸಿ  ಓದು ಮುಂದುವರೆಸಲು  ಈ ಊರಿಗೆ ತಂದು ಇಲ್ಲಿನ ಕಾಲೇಜಿಗೆ  ಸೇರಿಸಿದರು. ಹಾಗಾಗಿ ನನ್ನ ಚಿಕ್ಕಪ್ಪನ ಮನೆಗೆ   ಬಂದು ನೆಲೆನಿಂತೆ. ಆದರೂ ನೊಂದ ಮನಸಿನಲ್ಲಿ ಆ ಕಹಿ ನೆನಪು ಹಾಗೆ ಉಳಿದಿತ್ತು.   ಆ ನೋವಿನ ಸಮಯದಲ್ಲಿ ಒಂಟಿಯಾಗಿ ಜೀವನದಲ್ಲಿ ಬಳಲಿದ್ದ  ನನಗೆ ಅರಿವಿಲ್ಲದಂತೆ ಹತ್ತಿರ ಬಂದವನೇ  ಇವನು , ನಾನೆಷ್ಟು ದೂರ ಸರಿದರೂ  ನನಗೆ ಧೈರ್ಯ  ತುಂಬಿ , ಜೀವನದಲ್ಲಿ ಹೊಸ ಆಸೆ  ತುಂಬಿ ಭಾವನೆಗಳನ್ನು  ಚಿಗುರಿಸಿ,  ಹೂ ಬಿಡುವ ವೇಳೆಗೆ ಮಾಯವಾಗಿದ್ದ , ಯಾವಾಗಲೂ "ಬುದ್ದು" ಬುದ್ದು" ಅಂತಾ ರೇಗಿಸುತ್ತಾ  ನನ್ನ ಮನಸನ್ನು ಆಕ್ರಮಿಸಿಕೊಂಡು ಬಿಟ್ಟಿದ್ದ , ಅವನೇ ಒಂದು ದಿನ ಮದುವೇ ಪ್ರಸ್ತಾಪ ಮಾಡಿದನಾದರೂ ನಾನೇ ನನ್ನ ಅಹಂಕಾರದಿಂದ ಅವನನ್ನು ದೂರ ಇಟ್ಟು ಅವಮಾನಿಸಿದ್ದೆ. ಅಂದಿನಿಂದಾ ಅವನು ಒಬ್ಬ ಫ್ರೆಂಡ್ ಅನ್ನಿಸಿದ್ದರೂ ನಾನು ಓದು ಮುಗಿಸಿ  ಮತ್ತೆ  ನನ್ನ ಊರಿಗೆ ಹೊರಟಾಗ  ಅವನ ಬಾಡಿದ ಮುಖ ನೋಡಿ ತಡೆಯಲಾಗದೆ  ನಾನೇ ಅವನನ್ನು ಕಂಡು   ಪ್ರೀತಿಯ ನಿವೇದನೆ ಮಾಡಿದ್ದೆ............................!! ನಂತರ ಕೆಲದಿನಗಳಲ್ಲಿ ಅವ ವಿದೇಶಕ್ಕೆ ಹೊರಟಾಗ  ನಮ್ಮಿಬ್ಬರ  ಪ್ರೀತಿ ಪ್ರೇಮದ ಬಗ್ಗೆ   ನಮ್ಮ ಮನೆಯವರೊಂದಿಗೆ ಹೇಳಿಕೊಳ್ಳಲಾಗದಷ್ಟು  ಅಸಹಾಯಕರಾಗಿ  ನೋವಿನಿಂದ ನರಳುತ್ತಾ  ದೂರಾದೆವು.   ಆ "ಜಯಂತ್ "  ಇಂದು ಕಾಲ್ ಮಾಡಿದಾಗ  ಏನೂ ಮಾಡಲು ತೋಚದೆ  ಏನೋ ಹೇಳಿ ಫೋನ್ ಇಟ್ಟಿದ್ದೆ.                                                                                                      ಈ "ಜಯಂತ್"ನನ್ನ ಬಾಳಿನಲ್ಲಿ ಬಂದಿದ್ದ    ಘಟನೆಯನ್ನು  ನಾನು ಅವನಿಗೆ ಹೇಳದೆ  ಮುಚ್ಚಿಟ್ಟು................................................................. ಅಂದು ನಮ್ಮ ಪ್ರಥಮ  ರಾತ್ರಿಯ ವೇಳೆ ನನ್ನ ಗಂಡ     
"ನಾನು ಮೊದಲೇ ಹೇಳಿದ್ದೇನೆ..
ನಂಬಿಕೆ.. 
ವಿಶ್ವಾಸ ಇರಬೇಕು ಅಂತ...
ನನಗೆ ಇದೆಲ್ಲ ಇಷ್ಟವಾಗೊಲ್ಲ..."   ಅಂದ ಮಾತನ್ನು ಧಿಕ್ಕರಿಸಿ .................. ನನ್ನ ಈ ಕಥೆಯನ್ನು ಅವನಲ್ಲಿ ಹೇಳದೆ  ನಾನು ನನ್ನ ವರ್ತನೆಯಿಂದ  ಗೆದ್ದವಳಂತೆ ಮೆರೆದೆ ಆದರೆ ಅಂದು ನನಗರಿವಿಲ್ಲದೆ ಜೀವನದಲ್ಲಿ ಸೋತಿದ್ದೆ...............................!!!          ಮತ್ತೆ ಮೊಬೈಲ್ ರಿಂಗ್ ಆದಾಗ ಅವನೇ ......................................................ಮಾತಾಡಿ           !!!!!!!!!!!!!!!!!!!                                                   
ಯಾಕೆ ಬುದ್ದು ಫೋನ್ ಅವಾಯಿಡ್  ಮಾಡ್ತಾ ಇದ್ದೀಯ ಇಲ್ಲಿ ಕೇಳು  ನಿನಗೆ ಒಂದು ಸರ್ಪ್ರೈಸ್ ಕೊಡಬೇಕು ನಿನ್ನ ಗಂಡನ ಜೊತೆ ನಾಳೆ  "ಇಂದ್ರ ಲೋಕ"  ಹೋಟೆಲ್ ಗೆ ಬರಬೇಕೂ ಆಯ್ತಾ , ಇಲ್ಲಾನ್ನಬೇಡ , ನೀನು ಬರದೆ ಹೋದ್ರೆ  ನಿಮ್ಮ ಮನೆಗೆ ಬಂದು ಬಿಡ್ತೇನೆ ಅಷ್ಟೇ ಆಮೇಲೆ ನನ್ನ ಬೈಯ್ಯಭಾರದು ಅಂದಾ , ........................................................................... ನಾನು ಬೇಡಾ ಕಣೋ ಇದೆಲ್ಲಾ...............!!!  ನನಗೀಗ ಮದುವೇ ಆಗಿದೆ  ನೆಮ್ಮದಿಯಾಗಿ ಇರೋಕೆ ಬಿಡು  ಅಂದೆ. ನೋಡೇ" ಬುದ್ದು "  ನೀನು ನಾಳೆ ನಿನ್ನ ಹಬ್ಬಿಯ ಜೊತೆ ಹೋಟೆಲ್ ಗೆ ನಾಳೆ ಸಂಜೆ  ಐದೂವರೆ ಗೆ ಬರ್ತೀಯ ಅಷ್ಟೇ  ಬರದಿದ್ದರೆ  ಗೊತ್ತಲ್ಲಾ ಅಂತಾ ಫೋನ್ ಇಟ್ಟಾ...........................................ಕೆಟ್ಟ ಕೋಪ ಬಂದರು  ಹಳೆಯ ನೆನಪು ಅವನನ್ನು ಒಮ್ಮೆ ನೋಡೋಣ ಅಂತಾ ಕಾಡಿಸಿತ್ತು. ಸರಿ ನನ್ನ ಪತಿಗೆ ಹೇಳೋಣ ಅಂತಾ ಅಂದುಕೊಂಡು  ಅವನನ್ನು ಇವನಿಗೆ ಭೇಟಿಮಾದಿಸಿದರೆ, ಇವನು  ಹ್ಯಾಗೆ ರಿಯಾಕ್ಟ್ ಮಾಡ್ತಾನೆ ಅಂತಾ ಯೋಚನೆ ಶುರು ಆಯ್ತು , ಏನೋ ಒಂದು ಹೇಳೋಣ ಅಂತಾ ಅಂದುಕೊಂಡು  ಸಂಜೆ  ನನ್ನ ಪತಿ ಮನೆಗೆ ಬರೋದನ್ನು  ಕಾಯುತ್ತಾ ಟಿ.ವಿ.ಮುಂದೆ ಕುಳಿತೆ ಅದರಲ್ಲಿ  ಬರುತ್ತಿದ್ದ ಸೀರಿಯಲ್  ಯಾಕೋ ಬೋರಾಗಿ ................ಅದನ್ನು ಆಫ್ ಮಾಡಿ ........... ಕಂಪ್ಯೂಟರ್ ಮುಂದೆ ಕುಳಿತು  ನನ್ನ ಬ್ಲಾಗ್ ನಲ್ಲಿ ಒಂದು ವಿರಹ ಗೀತೆ ಬರೆದೆ. ......."ಗತಿಸಿದ ನೆನಪುಗಳ ರಾಡಿಯನ್ನು ತೊಳೆಯಲು ಮಳೆಯಂತೆ ನೀನು ಬಾ>>>>!!!" ......!!!!!!!!!!!!!!!!!!!!! ಸಾಲುಗಳು ಮೂಡಿಬಂದವು.