Sunday, October 30, 2011

ಕನ್ನಡ ತಾಯಿಗೆ ಇತಿಹಾಸದ ಕಿರೀಟ ತೊಡಿಸಿದ ಬೆಂಜಮಿನ್ ಲೆವಿಸ್ ರೈಸ್ !!!!ಈಗ ಇವನ್ಯಾರೆಂದು ನಮಗೆ ಗೊತ್ತೇ ಇಲ್ಲಾ !!!!

ಕನ್ನಡನಾಡಿಗೆ ತಮ್ಮ ವಿಶೇಷ ಕೊಡುಗೆ ನೀಡಿದ ಹಲವಾರು ಮಹನೀಯರು ಎಲೆಮರೆ ಕಾಯಿಯಂತೆ ಸೇವೆ ಸಲ್ಲಿಸಿ ಮರೆಯಾಗಿದ್ದಾರೆ.ಹಾಲಿ ಇವರು ಯಾರು ಎಂಬುದೇ ಬಹಳಷ್ಟು  ಕನ್ನಡಿಗರಿಗೆ ಗೊತ್ತಿಲ್ಲ , ಯಾಕೆಂದ್ರೆ ಇವರ ಹೆಸರಿನಲ್ಲಿ ನಮ್ಮ ನಾಡಿನಲ್ಲಿ ಯಾವುದೇ ರಸ್ತೆ, ಪುತ್ತಳಿ,,ವೃತ್ತ, ಬಡಾವಣೆ, ಇರುವುದಿಲ್ಲ ಹಾಗು ಇವರ ಬಗ್ಗೆ  ಕನಿಷ್ಠ ನೆನಪೂ ಸಹ ಮೂಡಿಸುವ ಮಾಹಿತಿಗಳೂ ಸಹ ಮರೆಯಾಗುತ್ತಿವೆ.ಯಾವುದೇ ಪ್ರದೇಶದ ಭಾಷೆ , ಸಾಹಿತ್ಯ,ಸಂಸ್ಕೃತಿ,ಇತಿಹಾಸಗಳ ಅಧ್ಯಯನಕ್ಕೆ ಶಾಸನಗಳು ಅಮೂಲ್ಯ ಆಕರಗಳು,ಇವು ಒಂದು ಜನಾಂಗದ ಆಸ್ತಿ , ಕನ್ನಡ ನಾಡಿನ ಶಾಸನ ಸಂಪತ್ತು ಹೇರಳವಾಗಿದ್ದರೂ ಅವುಗಳು ಮರೆಯಾಗಿದ್ದಾಗ , ಅವುಗಳನ್ನು ಹುಡುಕಿ  ಸಂಶೋದಿಸಿ ಕನ್ನಡ ನಾಡಿನ ಹಿರಿಮೆ ಸಾರಿದ ಈ ಸಾಹಸಿ ಗೆ ನಮ್ಮ ನಾಡಿನಲ್ಲಿ ಕನ್ನಡಿಗರ ಹೃದಯದಲ್ಲಿ  ಸ್ಥಾನ  ಸಿಗಬೇಕಾದದ್ದು  ನ್ಯಾಯ.. ಕನ್ನಡಿಗರಾದ ನಾವು   ಕನ್ನಡ ರಾಜ್ಯೋತ್ಸವ  ಆಚರಣೆ ಮಾಡುವ ಮೊದಲು  ಕನ್ನಡ ಇತಿಹಾಸಕ್ಕೆ ಕೊಡುಗೆ ನೀಡಿ ,ಕನ್ನಡ ನಾಡಿನಲ್ಲಿ ಹಲವಾರು ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಮರೆಯಾಗಿಹೋದ ಒಬ್ಬ ಧೀಮಂತ ವ್ಯಕ್ತಿ ಬಗ್ಗೆ  ತಿಳಿಯಬೇಕಾಗಿದೆ ಹಾಗು ಮುಂದಿನ ಪೀಳಿಗೆಗೆ ಇಂತಹ ಮಹನೀಯರ ಬಗ್ಗೆ ತಿಳಿಸಬೇಕಾಗಿದೆ. ಹಾಗಾಗಿ  "ಬೆಂಜಮಿನ್ ಲೆವಿಸ್ ರೈಸ್"  ಬಗ್ಗೆ ತಿಳಿಯೋಣ ಬನ್ನಿ.


1894 ರ ಮೈಸೂರ ಜಿಲ್ಲೆಯ  ಎಪಿಗ್ರಾಫಿಯಾ
         


        .ಬೆಂಜಮಿನ್ ಲೆವಿಸ್ ರೈಸ್ [1837 -1927 ]ರವರು ಹುಟ್ಟಿದ್ದು 17 ನೆ ಜುಲೈ 1837 ರಲ್ಲಿ  ಇಂಗ್ಲೆಂಡಿನಲ್ಲಿ ವಿಧ್ಯಾಭ್ಯಾಸ ಮುಗಿಸಿ 1860 ರಲ್ಲಿ ಭಾರತಕ್ಕೆ ಕಾಲಿಡುತ್ತಾರೆ.ಅವರಿಗೆ ಮೊದಲು ಸಿಕ್ಕ ಕೆಲಸವೇ ಬೆಂಗಳೂರಿನ ಸೆಂಟ್ರಲ್ ಹೈಸ್ಕೂಲಿನ ಮುಖ್ಯೋಪಾಧ್ಯಾಯ ಹುದ್ದೆ.ನಂತರ 1865  ರಿಂದ   1868  ವರೆಗೆ ಮೈಸೂರು ಹಾಗು ಕೊಡಗು ಪ್ರಾಂತಗಳಲ್ಲಿ ಶಾಲಾ ತನಿಖಾಧಿಕಾರಿ ಹುದ್ದೆ ನಿರ್ವಹಣೆ ಮಾಡಿರುತ್ತಾರೆ..ನಂತರ 1868  ರಲ್ಲಿ ವಿಧ್ಯಾ ಇಲಾಖೆಯ ಮುಖ್ಯಾಧಿಕಾರಿಯಾಗಿ  ಉತ್ತಮ ಸೇವೆ ಸಲ್ಲಿಸಿ ಎಲ್ಲರ ಗಮನ ಸೆಳೆಯುತ್ತಾರೆ.[ನಿಮಗೆ ತಿಳಿದಿರಲಿ ಮೈಸೂರು ಪ್ರಾಂತದಲ್ಲಿ ಇವರು ಜನಗಣತಿ ಆರಂಭಿಸಿ ಮಾಹಿತಿ ಅಂಕಿ ಅಂಶ ಕಲೆ ಹಾಕಿ  ಯೋಜನೆ ತಯಾರಿಕೆಗೆ ಅನುವು  ಮಾಡಿಕೊಟ್ಟಿದ್ದಾರೆ ಹಾಗು ಈ ಜನಗಣತಿ ಭಾರತದ ಮೊದಲ ಜನಗಣತಿ ಎಂದು ಇಂದಿಗೂ ಹೇಳಲಾಗುತ್ತದೆ.ಭಾರತದ ಮೊದಲ ಜನಗಣತಿ ಪ್ರಾರಂಭವಾಗಿದ್ದು ಕನ್ನಡ ನಾಡಿನಲ್ಲಿ ಎಂದರೆ ಪ್ರತಿ ಕನ್ನಡಿಗನೂ ಹೆಮ್ಮೆಪಡಬೇಕು.ಇದೆ ಆಧಾರದ ಮೇಲೆ ಇಂದಿಗೂ  ಸಹ ಭಾರತ ಜನಗಣತಿಯನ್ನು ಪ್ರತಿ ಹತ್ತು ವರ್ಷಕೊಮ್ಮೆ ದೇಶಾಧ್ಯಂತ ನಡೆಸಲಾಗುತ್ತಿದೆ]   ನಂತರ 1882  ರಲ್ಲಿ .ಹಂಟರ್ ವಿಧ್ಯಾ ಸಮಿತಿಯ ಕಾರ್ಯದರ್ಶಿಯಾಗಿ  ಇಲಾಖೆಯ ಜವಾಬ್ಶಾರಿ ನಿರ್ವಹಿಸಿ ಅಂದಿನ ಸರ್ಕಾರದ ಮೆಚ್ಚುಗೆಗೆ ಪಾತ್ರರಾಗುತ್ತಾರೆ.ಇವರ ಕಾರ್ಯಶೀಲತೆ ಗಮನಿಸಿದ ಸರ್ಕಾರ ಇವರನ್ನು 1884 ರಲ್ಲಿ ಹೊಸದಾಗಿ ರಚಿಸಿದ ಪುರಾತತ್ವ ಇಲಾಖೆಯ ನಿರ್ದೇಶಕರನ್ನಾಗಿ ನಿಯೋಜಿಸುತ್ತದೆ.ಹಾಗು 1890 ರಲ್ಲಿ ಪೂರ್ಣ ಪ್ರಮಾಣದ ನಿರ್ದೇಶಕರನ್ನಾಗಿ ನಿಯೋಜನೆ ಮಾಡುತ್ತದೆ. ಈ ಅವಧಿಯಲ್ಲಿ ಬಿ.ಎಲ್.ರೈಸ್ ರವರು ಮಹಾತ್ಸಾಧನೆ ಮಾಡುತ್ತಾರೆ. ಮೊದಲೇ ಉತ್ಸಾಹಿಯಾಗಿದ್ದ  ರೈಸ್ ತಾವು ಕರ್ತವ್ಯ  ನಿರ್ವಹಿಸುವ ಅವಧಿಯಲ್ಲೇ ಹಲವು ಭಾಷೆಯಲ್ಲಿ  ಪಾಂಡಿತ್ಯ ಪಡೆದು,ಕನ್ನಡ ನಾಡನ್ನು, ಜನರನ್ನು ಚೆನ್ನಾಗಿ ಅರಿತಿದ್ದರು.ಪ್ರವಾಸ ಮಾಡುವ ಸಮಯದಲ್ಲಿ ತಮಗೆ ದೊರೆತ ಓಲೆಗರಿಗಳು,ಹಸ್ತ ಪ್ರತಿಗಳು,ಸ್ಥಳ ಪುರಾಣ, ಚರಿತ್ರೆ ಇವುಗಳನ್ನು ಕಲೆ ಹಾಕಿದ್ದರು.ಇವರ ಅವಧಿಯಲ್ಲಿ ಹಲವಾರು ದೇವಾಲಯಗಳಲ್ಲಿದ್ದ , ಪಾಳು ಬಿದ್ದ ದೇವಾಲಯ/ಮಂಟಪ ಗಳ ಬಳಿ ದೊರೆತ , ಹೊಲ ಗದ್ದೆಗಳಲ್ಲಿ ಅನಾಥವಾಗಿಬಿದ್ದಿದ್ದ , ಶಾಸನಗಳು,ಊರ ಒಳಗಡೆ ಕಂಡುಬಂದ , ಬಹಳಷ್ಟು ಶಾಸನಗಳನ್ನು ಪತ್ತೆ ಹಚ್ಚಿ  ಅಭ್ಯಾಸ ಮಾಡಿ ಅವುಗಳಿಂದ ತಿಳಿದುಬರುವ  ಮಾಹಿತಿಯನ್ನು ಕ್ರೂಧೀಕರಿಸಿ ರಾಶಿ ಹಾಕಿದರು.





ಮದ್ದೂರ್ ತಾಲೂಕಿನ ಅಪರೂಪದ ಆತಕೂರ್ ಶಾಸನ



.
ತಲಕಾಡಿನ ಶಾಸನ.  



              
ಈ ರೀತಿ  ಶಾಸನ , ಮಾಹಿತಿ ಸಂಗ್ರಹಿಸಿದ ಬಿ.ಎಲ್.ರೈಸ್ ತಾವೇ ಆಸಕ್ತಿ ಯಿಂದ ಹಲವಾರು ಶಾಸನಗಳನ್ನು ಓದಿ, ಹಿರಿಯರಿಂದ ಮಾಹಿತಿ ಪಡೆದು,ಯಾವುದೇ ಪೂರ್ವಾಗ್ರಹವಿಲ್ಲದೆ ಟಿಪ್ಪಣಿ ಮಾಡಿಕೊಂಡು ಆಸಕ್ತಿ ಪೂರ್ಣ ಕಾರ್ಯ ಮುಂದುವರೆಸಿದರು .1876 ರಲ್ಲಿ ಬರ್ಗೆಸ್ ಎಂಬುವರು ಆರಂಭಿಸಿದ" indian antiquary "  ಪತ್ರಿಕೆಯ ಮೊದಲ ಸಂಚಿಕೆಯಲ್ಲೇ ಮಡಿಕೇರಿ ತಾಮ್ರ ಶಾಸನದ ಬಗ್ಗೆ ಲೇಖನ ಪ್ರಕಟಿಸಿದರು.1879  ರಲ್ಲಿ ಮೈಸೂರು ಹಾಗು ಕೊಡಗಿನ ಸೀಮೆಯಲ್ಲಿ ದೊರೆತ ಶಾಸನಗಳ ಇಂಗ್ಲೀಷ್ ಅನುವಾದದ "ಮೈಸೂರ್ ಇನ್ಸ್ಕ್ರಿಪ್ಶನ್ಸ್" ಗ್ರಂಥ ಪ್ರಕಟ  ಮಾಡಿದರು.ನಂತರ ಎಪಿಗ್ರಾಫಿಯ ಕರ್ನಾಟಕ ಗ್ರಂಥ ಮಾಲೆ ಆರಂಭಿಸಿ  ಕೊಡಗಿನ ಸೀಮೆಯಲ್ಲಿ ಕಂಡುಬಂದ ಶಾಸನಗಳ ಅಪೂರ್ವ ಕ್ರೂಧೀಕರಣ ಮಾಡಿ ಕನ್ನಡ ಹಾಗು ಇಂಗ್ಲೀಷ್ ಭಾಷೆಯಲ್ಲಿ ಅರ್ಥ ನೀಡಿ  1896 ರಲ್ಲಿ "ಕೊಡಗಿನ ಗೆಜೆಟೀರ್" ಅನ್ನು ಎಪಿಗ್ರಾಫಿಯ ಕರ್ನಾಟಕ ಮಾಲೆಯಲ್ಲಿ ಮೊದಲು ಹೊರತಂದು ಇತಿಹಾಸ ನಿರ್ಮಿಸಿದರು.ಇದು ಇಡೀ ದೇಶದಲ್ಲೇ ಪ್ರಥಮವಾಗಿ ಪ್ರಕಟವಾದ  ಶಾಸನಗಳ ಒಂದು ಅಪೂರ್ವ ಗ್ರಂಥವಾಯಿತು.ನಂತರ ಇದನ್ನು ಈಗ ದೇಶಾದ್ಯಂತ ಮಾಡಲಾಗುತ್ತಿದೆ.1889 ರಲ್ಲಿ ಹಾಸನ ಜಿಲ್ಲೆ  ಶ್ರವಣ ಬೆಳಗೊಳದಲ್ಲಿ ದೊರೆತ ಶಾಸನಗಳ ಆಧಾರದ ಮೇಲೆ "ಶ್ರವಣ ಬೆಳಗೊಳದ ಶಾಸನಗಳು '' ಎಂಬ ಎರಡನೇ ಸಂಪುಟ ಹೊರಬಂದಿತು.ಅಧಿಕಾರದಲ್ಲಿದ್ದ ಹದಿನಾರು ವರ್ಷದಲ್ಲಿ  ಎಪಿಗ್ರಾಫಿಯಾ ಕರ್ನಾಟಕದ ಉಳಿದ ಹತ್ತು ಬೃಹದ್ ಸಂಪುಟಗಳನ್ನು ಪ್ರಕಟ ಮಾಡಿ ಜಿಲ್ಲಾ ವಾರು  ಶಾಸನಗಳ  ಮಾಹಿತಿ ಪ್ರಕಟಿಸಿದ್ದಾರೆ.




ಶ್ರೀ ರಂಗ ಪಟ್ಟಣದ ಸಮೀಪ  ಕಬ್ಬಿನ ಗದ್ದೆಯಲ್ಲಿ ಸಿಕ್ಕಿರುವ ಶಾಸನ.


ಬಿ.ಎಲ್. ರೈಸ್ ರವರು ಹನ್ನೆರಡು ಸಂಪುಟಗಳ ಕರ್ನಾಟಕ ಎಪಿಗ್ರಾಫಿಯ ಪ್ರಕಟಿಸಿದ ಬೆನ್ನಹಿಂದೆ ಅದರಲ್ಲಿ 8869 ಶಾಸನಗಳು ಬೆಳಕಿಗೆ ಬಂದಿದ್ದವು.ಅವರ ಕಾರ್ಯಕ್ಕೆ ಹಲವಾರು ಘನ ವಿಧ್ವಾಂಸರು, ಮೇಧಾವಿಗಳು, ಹಿರಿಯರು, ಜೊತೆಗೆ ಹಲವು ಗ್ರಾಮಗಳ ಜನತೆ  ಪ್ರೋತ್ಸಾಹ ನೀಡಿ ಮಾಹಿತಿ ಕಲೆಹಾಕಲು ನೆರವಾಗಿದ್ದರು .ಇದರಿಂದಾಗಿ ಕರ್ನಾಟಕದ ಚರಿತ್ರೆಯನ್ನು ಅರಿಯಲು ಒಂದು ಒಳ್ಳೆಯ ಆಧಾರ ಸಿಕ್ಕಿತು.ಬಿ.ಎಲ್.ರೈಸ್ ಕಂಡು ಹಿಡಿದ ಶಾಸನಗಳು ಕರ್ನಾಟಕದ ಚರಿತ್ರೆಯನ್ನು ಕ್ರಿ.ಪೂ.3  ನೆ ಶತಮಾನಕ್ಕೆ ಕರೆದೊಯ್ದವು. ಈ ಎಲ್ಲಾ ಶಾಸನಗಳಿಂದ ತಿಳಿದು ಬಂದ ರಾಜಕೀಯ ತಿರುಳನ್ನು ಬಿ.ಎಲ್.ರೈಸ್ " ಮೈಸೂರ್ ಅಂಡ್ ಕೂರ್ಗ್ ಫ್ರಂ ಇನ್ಸ್ಕ್ರಿಪ್ಶನ್ಸ್"ಎಂಬ ಗ್ರಂಥದಲ್ಲಿ ಬರೆದಿದ್ದಾರೆ. ಇವರು ಪ್ರಕಟಿಸಿರುವ ಎಪಿಗ್ರಾಫಿಯಾ ಶೇಣಿಯ ಗ್ರಂಥಗಳಲ್ಲಿ ಹಲವು ದೇವಾಲಯಗಳ ನಕ್ಷೆ ಪ್ರಕಟಗೊಂಡಿದ್ದು ಇವರು ಎಷ್ಟು ವೈಜ್ಞಾನಿಕವಾಗಿ ಅವುಗಳ ಅಧ್ಯಯನ ಮಾಡಿದ್ದಾರೆ ಎಂಬುದನ್ನು ತೋರಿಸುತ್ತವೆ.



ಸೋಮನಾಥಪುರದ ದೇವಾಲಯದ ನಕ್ಷೆ


Tuesday, October 4, 2011

ಇಲ್ಲೊಂದು ಆಕ್ಸಿಡೆಂಟ್ ಪುರಾಣ!!!ಹರಕೆಕುರಿಯ ಕಥಾಯಣ!!!!!!

  ನಮಸ್ಕಾರ  ಒಳ್ಳೆ ನವರಾತ್ರಿ ಸಮಯದಲ್ಲಿ   ಇದ್ಯಾವುದೋ ಆಕ್ಸಿಡೆಂಟ್ ಪುರಾಣ ತಂದಾ!!!!!! ಅಂತಾ ಬಯ್ದುಕೋ  ಬೇಡಿ , ನವರಾತ್ರಿಯನ್ನು ನಮ್ಮ ಬ್ಲಾಗ್ ಮಿತ್ರರು ನಗು ನಗುತ್ತಾ ಆಚರಿಸಲಿ ಅಂತಾ ಒಂದು ಹಳೆಯ ನೈಜ ಘಟನೆಯ ಚಳಕು ಇಲ್ಲಿ ಹಾಕಿದ್ದೇನೆ. ಓದಿ  ನೀವು ನಕ್ಕರೆ  ಅದೇ ನನ್ನ ನವರಾತ್ರಿಯ  ಶುಭಾಶಯಗಳು .ಬನ್ನಿ ಹೋಗೋಣ ಬಸ್ಸಿಗೆ.

 ಯಾರ್ರೀ ತುಮಕೂರು , ತುಮಕೂರು ಬೇಗ ಬನ್ನಿ ರೈಟ್ .......... ಹತ್ತಿ  ಸರ್ ಹತ್ತಿ ಸಾರ್ ......... ಅಂದ ಕಂಡಕ್ಟರ್ ...............................!!! ಬಸ್ಸಿನಲ್ಲಿ ಪ್ರತಿ ನಿತ್ಯ ಪ್ರಯಾಣಿಸುತ್ತಿದ್ದ .....ವಿವಿಧ ಸರ್ಕಾರಿ ಇಲಾಖೆ, ಬ್ಯಾಂಕ್, ಖಾಸಗಿ , ಇತರ ಸಂಸ್ಥೆಯ ಅಧಿಕಾರಿಗಳು, ನೌಕರರು,    ಸ್ಟಾರ್ಟ್ ಆದ ಬಸ್ಸನ್ನು  ದಡ ದಡ ನೆ ಹತ್ತಿ ತಮ್ಮ ತಮ್ಮ ಜಾಗ ಹಿಡಿದರು, ಬಸ್ಸಿನಲ್ಲಿ ಸೀಟ್ ಸಿಕ್ಕವರು ರಾಜ್ಯ ಗೆದ್ದ ಹರುಷದಲ್ಲಿ ಪೇಪರ್ ಓದುತ್ತಾ ಇರುವಂತೆ ನಟಿಸುತ್ತಾ ನಿಂತವರ ಚಲನ ವಲನ ನೋಡುತ್ತಾ ಮನದಲ್ಲಿ ನಗುತ್ತಾ ಮಂಡಿಗೆ ತಿನ್ನುತ್ತಿದ್ದರೆ , ಸೀಟ್ ಸಿಗದೇ ನಿಂತವರು ತಮ್ಮ ಅಸಮಾಧಾನವನ್ನು ಕಂಡಕ್ಟರ್ , ಡ್ರೈವರ್ ಮೇಲೆ ಹಾಕಿ............  ಈ ಬಸ್ಸು ಬಹಳ ಸ್ಲೋ ಕಣ್ರೀ ಇವರ ಕೊಬ್ಬು ಜಾಸ್ತಿಯಾಯ್ತು . ಇವರಿಂದಾಗಿ ನಾವು ಯಾವತ್ತೂ ಸರಿಯಾದ ಟೈಮಿಗೆ ನಮ್ಮ ಕೆಲಸಕ್ಕೆ ಹೊಗೊಕಾಗಲ್ಲಾ ಅಂತಾ ಶಾಪಾ ಹಾಕ್ತಾ ಇರ್ತಿದ್ರೂ........ ಸೀಟ್ ಸಿಗುವುದು ಸಿಗದಿರುವ ಆಟಾ ಎಲ್ಲರಿಗೂ ಒಂದಲ್ಲಾ ಒಂದು ದಿನ  ಅನುಭವ ಆಗುತ್ತಿದ್ದ ಕಾರಣ ಬರುತ್ತಿದ್ದ ಡೈಲಾಗ್ ಗಳು ವೆತ್ಯಾಸವಾಗುತ್ತಿದ್ದವು....

 ಹಾಗೆ ಕಳೆಯುತ್ತಿದ್ದ ಪ್ರಯಾಣದಲ್ಲಿ  ಒಮ್ಮೆ ಹೀಗಾಯ್ತು .........................."ದುರಾಸೆ ಪುರ "ದ ಬಳಿ ಬರುತ್ತಿದ ನಮ್ಮ ಎಕ್ಸ್ಪ್ರೆಸ್ಸ್ ಬಸ್ಸಿಗೆ ಒಂದು   "ಕುರಿ ಮರಿ"   ರಸ್ತೆಯ ಒಂದು ಬದಿಯಿಂದ  ಗಾಭರಿ ಯಿಂದ ಓಡಿಬಂದು ಚಲಿಸುತ್ತಿದ್ದ ಬಸ್ಸಿನ  ಎಡಭಾಗದ   ಹಿಂದಿನ ಚಕ್ರಕ್ಕೆ ಸಿಕ್ಕಿ  ಹಾಕಿಕೊಂಡು ಮೃತ ಪಟ್ಟಿತು , ಅದನ್ನು  ಅಟ್ಟಿಸಿಕೊಂಡು ಬಂದ ಚಿಕ್ಕ ಮಗು  ಆ "ಕುರಿ ಮರಿ " ಸತ್ತಿದ್ದನ್ನು ಕಂಡು ಸಂತೋಷದಿಂದ  ನಕ್ಕಿತ್ತು. ಅಲ್ಲೇ ರಸ್ತೆಯಲ್ಲಿದ್ದ  ಹಲವು ಜನರು ಬಸ್ಸನ್ನು ಅಡ್ಡ ಹಾಕಿ  ನಿಲ್ಲಿಸಿ  ಡ್ರೈವರ್ ಹಾಗು ಕಂಡಕ್ಟರ್ ಗೆ ಗೂಸ ಕೊಟ್ಟರು ಬನ್ನಿ  ಸನ್ನಿವೇಶ ನೀವು ನೋಡುವಿರಂತೆ..................................!!!!!!!!!!ಯಾವಾಗ ಕುರಿಮರಿ  ಬಸ್ಸಿನ ಚಕ್ರಕ್ಕೆ ಸಿಕ್ಕಿ ಕೊಂಡಿತೋ  , ಬಸ್ಸು ನಿಂತ ತಕ್ಷಣ  , ಪಾಪ ಡ್ರೈವರ್ ಹತ್ತಿರ ಹೋದ ಒಬ್ಬ  ಲೇ ಯಾರ್ಲಾ  ಅದು ಡೈವರ್ರು  ಇಳಿಲಾ  ಕೇಳಾಕೆ ಅಂತಾ ಹೇಳಿ ಕತ್ತಿನ ಪಟ್ಟಿ ಹಿಡಿದು ಕೊಂಡು ಬಸ್ಸಿನಿಂದ ಎಳೆದುಕೊಂಡಾ , ಅಲ್ಲಾ ಕಣ್ಲಾ ಅನ್ಯಾಯವಾಗಿ ಕುರಿಯ  ಸಾಯ್ಸಿ ಬುಟ್ಟೆ ಅಂತಾ ಎರಡು ಏಟು ಕೊಟ್ಟಾ.  ಬಸ್ಸಿನಲ್ಲಿ ಪ್ರತಿನಿತ್ಯ ಪ್ರಯಾಣಿಸುತ್ತಿದ್ದ ಹಲವು ಪ್ರಯಾಣಿಕರು  ಕೆಳಗೆ ಇಳಿದು ಡ್ರೈವರ್ ರಕ್ಷಣೆಗೆ ಧಾವಿಸಿದರು. ಆಗ ಶುರುವಾಯ್ತು. ಪಂಚಾಯ್ತಿ.{ಸುಲಭವಾಗಿ ಅರ್ಥವಾಗಲು ಒಂದೊಂದು ಕ್ಯಾರಕ್ಟರ್ ಗೆ ಹೆಸರಿಟ್ಟಿದ್ದೀನಿ}
.................................................... ...........ಸಪ್ಪೆ  ಕ್ಯಾತಾ :- ಅಲ್ಲಾ ಕಣ್ಲಾ ಡೈವರ್ರು  ಅನ್ನಾಯವಾಗಿ    ಕುರಿಮರಿಯ ತೀರ್ಸಿ ಬುಟ್ಟಲ್ಲಾ.........ಈಗೇನ್   ಮಾಡಬೇಕೂ ಯೋಳು ????                                                                     ...........                                           ಡ್ರೈವರ್ :- ಅಲ್ಲಾ ಯಜಮಾನ  ನಾನು ನಿದಾನವಾಗಿ ಬತ್ತಿದ್ದೆ , ಕುರಿಮರಿ ಬಂದು ಹಿಂದಿನ ಚಕ್ರಕ್ಕೆ ಸಿಗಾಕಂದ್ರೆ ನಾನ್ ಏನ್ ಮಾಡ್ಲಿ ಹೇಳು, ಅಂದಾ................................................................!!!!!!!!!. .................................                                         ಬಸ್ರಾಜ :- ನಾನೂ ನೋಡ್ತಾನೆ ಇವ್ನಿ, ಕುರಿಮರಿ ಬತ್ತಿದ್ದಾಗ ನೀನು ಬಿರೇಕ್ [ಬ್ರೇಕ್] ಹಾಕ್ನೆ ಇಲ್ಲಾ . ಬೊ ಸ್ಪೀಡಾಗಿ ಬಂದು  ಹಿಂದಿನ ಚಕ್ರುಕ್ಕೆ  ಕುರಿ ಸಿಗಾಕ್ಸಿ ಬುಟ್ಟೆ , ನೀನು ಬೇಕೂಂತಲೇ ಇಂಗೆ ಮಾಡಿದ್ದೀಯೇ , ಯೋ ಇವ ಇಂಗೆ ಕನೈಯ್ಯೋ  ನಮ್ಮೂರ ಜನ ಕಂಡ್ರೆ ಆಗಾಕಿಲ್ಲಾ , ಅವತ್ತು  ಪಟ್ಟಣ ದಲ್ಲಿ ಕೈತೊರ್ಸಿದ್ರೆ  ನಿಲ್ಲಿಸದೆ ಮೈಮೇಲೆ ಬಸ್ ಹತ್ತಿಸಕ್ಕೆ ಬತ್ತಾನೆ ಅಂತಾ ತನ್ನ ಹಳೆ ಸೇಡಿನ ಆರೋಪ ಮಾಡಿದಾ................!!!!                                  ಅಷ್ಟರಲ್ಲಿ  ಲಬೋ ಲಬೋ ಅಂತಾ ಬಾಯಿ ಬಡಿದುಕೊಳ್ಳುತ್ತಾ  ಒಂದು ಹೆಂಗಸು ಹಾಗು ಒಂದು ಗಂಡಸು ಬಂದರೂ !!!!!!  ಅಯ್ಯಯ್ಯೋ ಹೊಯ್ತಲ್ಲಾಪ್ಪ ನನ್ನ ಕುರಿ ಹೋದ ತಿಂಗಾ [ ತಿಂಗಳು ]  ತಾನೇ ಸಂತೇಲಿ ಕೊಂದ್ಕಂಡ್ ಬಂದಿದ್ದೆ!!!! ಹಾಳಾದ್ ಬಸ್ಸು  ಸಾಯ್ಸ್ಬುದ್ತೆ ಎನ್ಗಪ್ಪಾ ಬದುಕೋದು ನಮ್ಮಂತಾ ಬಡವರೂ ಅಂತಾ  ಡ್ರೈವರ್ಗೆ ಸಹಸ್ರ ನಾಮ ಸಹಿತ , ಅರ್ಚನೆ ಮಾಡಿ  ಡ್ರೈವರ್ ವಂಶ ಪಾವನ ಮಾಡಿದ್ದಳು.[ ಪಾಪ ಇಂತಹ ಹಳ್ಳಿಗಳ ಕಡೆ ದಿನನಿತ್ಯಾ ಸಂಚರಿಸೋ ಸಾರಿಗೆ ಸಂಸ್ಥೆ / ಖಾಸಗಿ ಬಸ್ಸಿನ  ಸಿಬ್ಬಂದಿಗಳ ಪಾಡೇ ಹಾಗೆ ಆಗಾಗ ಇಂತಹ ಅರ್ಚನೆ ಸಹಸ್ರನಾಮಾರ್ಚನೆ  , ಗೂಸ ತಿನ್ನುವಿಕೆ ನಡೆಯುತ್ತಿರುತ್ತವೆ...].ಇದ್ಯಾಕೋ ನಿಲ್ಲೋ ಲಕ್ಷಣ ಕಾನ್ತಿಲ್ಲಾ ಅನ್ನಿಸಿ ಬಸ್ಸಿನಲ್ಲಿದ್ದ   ಕೆಲವರು ಕೆಳಗೆ ಇಳಿದರೂ ................................................................. ಇಳಿದದ್ದರಲ್ಲಿ ಅವರ ಸ್ವಾರ್ಥವೂ  ಇತ್ತು ಅನ್ನಿ , ಬಸ್ ಡ್ರೈವರ್ ನ ಬಿಡಿಸಿ ಬಸ್ಸನ್ನು ಹೊರಡಿಸಿದರೆ ತಾವು ಕೆಲಸಕ್ಕೆ ಸರಿಯಾದ ಸಮಯಕ್ಕೆ ತಲುಪಬಹುದು ಅನ್ನೋ ತರಾತುರಿ ಯಲ್ಲಿ ಇಳಿದು  ರೀ ಡ್ರೈವರ್ ಅದೇನ್ ಪೈಸಲ್  ಮಾಡಿಬಿಟ್ಟು ಬನ್ರೀ .... ಲೇಟಾಗುತ್ತೆ ಅಂತಾ ಅನ್ನುತ್ತಾ , ಯಾರ್ರೀ  ಕುರಿಯವ್ರು ಅಂತಾ ಪಂಚಾಯ್ತಿ ಶುರುಮಾಡಿದರು.  ನಂತರ ಅಲ್ಲೇ ಇದ್ದ ನಮ್ಮ ಮಲ್ಲಿಕಾರ್ಜುನ ಮೇಷ್ಟ್ರು  ಇಳಿದು ಬಂದು ನ್ಯಾಯ ಶುರುಮಾದಿದ್ರೂ...............ಅವರನ್ನ ಪ್ರೀತಿಯಿಂದ ಮಲ್ಲಿಕ್ ಅನ್ನೋಣ.                                              ಮಲ್ಲಿಕ್ :- ರೀ ಅದ್ಯಾರು ಕುರಿಯವ್ರು ಬನ್ರೀ ಮುಂದಕ್ಕೆ .........!!!!!                                                                         ಕುರಿ ಮಾಲೀಕರು ಯಜಮಾನ್ರು :- ನಾಮೇ ಸಾ , ಅಂತಾ ಬಂದ್ರೂ .............................!!!!!!!!!!!!!                                                                                                                   ಮಲ್ಲಿಕ್ :- ನೋಡಯ್ಯಾ ಯಜಮಾನ  ನಾನೂ ನೋಡ್ತಾ ಇದ್ದೆ  ಬಸ್ನವ್ರ್ದು  ತಪ್ಪಿಲ್ಲಾ ... ಕುರಿ ಓಡಿಬಂದು ಚಕ್ರಕ್ಕೆ ಸಿಗಾಕತು , ಅದೇನು  ಇಸ್ಕಂಡು  ಬಸ್ಸನ್ನು ಬುಟ್ಟು ಬುಡು [ಬಿಟ್ಟು ಬಿಡು ] .......                                                                       ಕುರಿಮಾಲಿಕರು :- ಹೋದ ತಿಂಗಾ[ ತಿಂಗಳು ]  ತಾನೇ ಕಿರ್ಗಾವಲ್ ಸಂತೇಲಿ  ಎಡ್ಸಾವ್ರಾ[ ಎರಡು ಸಾವಿರಾ ] ಕೊಟ್ಟು ತಂದಿದ್ದೆ.ದಿನಾ ಐವತ್ತು ಕರ್ಚುಮಾಡಿ ಹುಳ್ಳಿ, ಬಾಳೆಹಣ್ಣು, ಎಲ್ಲಾ ಕೊಟ್ಟು ತಯಾರಿ ಮಾಡಿದ್ದೆ ....... ಒಂದೈದು ಸಾವಿರಾ ಆಗ್ಬೈದು ಅಂದಾ. [ ಸತ್ತಿದ್ದ ಕುರಿ ಹಿಂದಿನ ಚಕ್ರದಲ್ಲಿ ಬಿದ್ದಿತ್ತು  ಅದರ ದೇಹದಲ್ಲಿ ಅವನು  ಹೇಳಿದ ತಯಾರಿಯ  ಯಾವ ಲಕ್ಷಣಗಳೂ ಇರಲಿಲ್ಲ ] .........!!!!!!!!                                                                                                              ಮಲ್ಲಿಕ್ :- ಯೋ ಯಜಮಾನ ಅವೆಲ್ಲಾ ಬ್ಯಾಡ  ಸುಮ್ನೆ ನೂರ್ ರುಪಾಯಿ ಕೊಡ್ತಾರೆ  ಇಸ್ಕಂಡು ಹೋಗು , ಜಾಸ್ತಿ ಎಳದ್ರೆ         ನಿಂಗೆ ತೊಂದ್ರೆ ಅಂದ್ರೂ. .......!!!!                        ಗ್ರಾಮಸ್ತರು :- ಹ ಹ ಹ ಅಂತಾ ನಕ್ಕು , ಅಲ್ಲಾ ಸಾ ಅದೇನ್ ತೀರ್ಮಾನ ನಿಮ್ಮದು ಅಂತಾ ಹೇಳಿದ್ರೂ, ಅಲ್ಲೇ ಇದ್ದ ಒಬ್ಬಾ ಲೇ ಈ ಕುರಿಯ ನಮ್ಮೂರ ದ್ಯಾವ್ರ್ಗೆ ಹರಕೆ ಬುಟ್ಟಿತ್ತು ಅಲ್ವೇ ..............................................!!! ಅಂದಾ,   ಎಲ್ಲರಿಗೂ ಹೊಸ ಅಸ್ತ್ರ ಸಿಕ್ಕಿತ್ತು.  ಹೂ ಕಲಾ   [ಹೌದು ಕಣೋ ]   ಈಗ ಇವರ ಕುರಿ ಸತ್ತೊಯ್ತಲ್ಲಾ ಅದಕ್ಕೆ  ಇವ್ರು  ದ್ಯಾವ್ರ್ಗೆ ಗೆ "ಐದ  ಸಾವ್ರಾ" ದಂಡಾ  ಕಟ್ ಬೇಕಾಯ್ತದೆ   ಅಂದಾ ....!!!! ಮೊದಲೇ ಉರಿಯುತ್ತಿದ್ದ ಬೆಂಕಿಗೆ ಅವ ತುಪ್ಪಾ ಸುರಿದು ವಿಜಯದ ನಗೆ ನಕ್ಕಿದ್ದಾ.  ಬಸ್ಸಿನಲ್ಲಿ ಇದ್ದವರಿಗೆಲ್ಲಾ ಇವತ್ತು ತಮ್ಮ ಕೆಲಸದ ಜಾಗದಲ್ಲಿ ಮೇಲಧಿಕಾರಿಗಳಿಂದ , ಸಾರ್ವಜನಿಕರಿಂದ ,ಕೇಳಬೇಕಾದ ಮಾತುಗಳನ್ನು ನೆನೆದು ಮೈ ಚಳಿ ಶುರು ಆಗಿತ್ತು  ಬಸ್ಸಿನ ಡ್ರೈವರ್, ಕಂಡಕ್ಟರ್ ಇಬ್ಬರಿಗೂ  ಏನೂ ತಿಳಿಯದೆ ಬೆಪ್ಪಾಗಿ ನಿಂತಿದ್ದರು.                                                                                                                                                                 ಇದನೆಲ್ಲಾ  ಗಮನಿಸುತ್ತಿದ್ದ  ಮಲ್ಲಿಕ್   :- ನೋಡ್ರಪ್ಪಾ ಇದು ಸರ್ಕಾರಿ ಬಸ್ಸು ಅನ್ಗೆಲ್ಲಾ ಬಸ್ ನಿಲ್ಸಿ ತೊಂದ್ರೆ ಕೊಡಬಾರದು, ಅದೇನು ಕೊಡ್ತಾರೋ ಇಸ್ಕಂಡು  ಸುಮ್ನೆ ಬಸ್ ಬುಡಿ,  ಕುರಿಯವ್ರಿಗೆ ಇನ್ನೂರು ಹಾಗು ನಿಮ್ಮೂರ್ ದ್ಯಾವ್ರ್ಗೆ ನಾನೇ ತಪ್ಪು ಕಾಣಿಕೆ ನೂರ್ ರುಪಾಯಿ ಹಾಕ್ತೀನಿ ಅಂದ್ರೂ................................!!!!!!                                                                     ಗ್ರಾಮಸ್ಥರು :- ಏ ಅದೇನ್ಗಾದ್ದೂ ಸಾ , ಇದ್ಯಾವ್ ಸೀಮೆ ತೀರ್ಮಾನ , ಅದೆಲ್ಲಾ ಆಗಾಕಿಲ್ಲಾ ಬುಡಿ ಸಾ ಅಂದ್ರೂ , ಕೊನೆಗೆ ಒಗ್ಲಿ  "ಯೋಳು"[ ಏಳು ಸಾವಿರಾ ]   ಸಾವ್ರಾ   ಕೊಡ್ಸಿ ಅಂದ್ರೂ  ...........................!!!!!                                        ಮಲ್ಲಿಕ್ :- ಅಲ್ಲಾ ಕಣ್ರಪ್ಪಾ ನೀವು ತಪ್ಪು ಮಾಡ್ತಾ ಇದೀರಿ ಅಂತಾ , ಅಲ್ಲೇ ಇದ್ದ  ಕೆಲವು ಮುಖಗಳನ್ನು ನೋಡಿ , ಲೇ ಬಸವ, ಸೀನ, ಕೃಷ್ಣ  ಬನ್ರೋ ಇಲ್ಲಿ  ಅಂದ್ರೂ , .......................................!!!!!  ಆ ಬಹುಷಃ ಹೈಸ್ಕೂಲ್ ಮಕ್ಕಳಿರಬೇಕೂ, ಸಾ ನಮಸ್ತೆ ಸಾ ಅಂತಾ ಓಡಿಬಂದು ನಿಂತವು. [ಆಮೇಲೆ ತಿಳೀತು ಆ ಮಕ್ಕಳು ಅವರ ಶಾಲೆಯ ಮಕ್ಕಳು ಎಂದು ] ಲೇ ನಿಜ ಹೇಳ್ರೋ  ಈ ಕುರಿನ  ದ್ಯಾವ್ರಿಗೆ ಬಿಟ್ಟಿದ್ರೆನೋ ಅಂದ್ರೂ  ,                                                                                                                                                   ಮಕ್ಕಳು:- ಇಲ್ಲಾ ಸಾ ಇದು ಈ ರಾಜೇಶನ ಮನೆ ಕುರಿ ಸಾ ಅಂದವು. ಯಾರೋ ರಾಜೇಶ ಅಂದ್ರೆ ಅದೇ ಎಂಟನೆ ಕ್ಲಾಸಲ್ಲಿ ಇಲ್ವಾ ಸಾ ಅವನವು ಅಂದವು.                                                                                                         ಅಷ್ಟರಲ್ಲಿ ಗ್ರಾಮಸ್ತರ ಕಡೆ ತಿರುಗಿದ  ಮಲ್ಲಿಕ್ ಯಾಕ್ರೈಯ್ಯಾ ಸುಳ್ಳು ಹೇಳ್ತೀರಿ  ಅಂದ್ರೆ ಅಲ್ಲೇ ಇದ್ದ ಒಬ್ಬಾ ಇಲ್ಲಾ ಸಾ ಈಗತಾನೆ  ನಮ್ಮ ಹೈದಾ ಯೋಳ್ದಾ, ಈ ಕುರಿ ಅಲ್ವಂತೆ , ಅದೂ ಇಂಗೆಯ ಇತ್ತಲ್ಲಾ  ಅದಕೆ ಹಂಗಾಯ್ತು ಅಂತಾ ತಿಪ್ಪೆ ಸಾರಿಸಿದ. ಅಲ್ಲಿಗೆ ಹರಕೆ ದಂಡಾ ತಪ್ಪಿತು. ಮುಂದೆ ಸರಿ ಬಿಡ್ರಪ್ಪಾ ಎಂಗೂ ನಮ್ಮ ಟೈಮ್ ವೇಷ್ಟ್ ಮಾಡಿದ್ದೀರಿ ಬನ್ನಿ  ಇನ್ನೇನು ಪೋಲಿಸ್ ಸ್ಟೇಶನ್ ನಲ್ಲೆ ಇತ್ಯರ್ಥ ಆಗ್ಲಿ , ಎಂಗೂ ಬಸ್ಸಿನ ಡ್ರೈವರ್ಗೆ ಹೊಡೆದಿದ್ದೀರಿ, ನಾವೇ ಸಾಕ್ಷಿ ಹೇಳ್ತೀವಿ, ಬಸ್ಸಿನ ನಂಬರ್ ಬರ್ಕೊಳ್ಳಿ  , ಅಂತಾ ತಾಳಿ ಪೋಲಿಸ್ ನವರಿಗೆ ನಾನೇ ಫೋನ್ ಮಾಡ್ತೀನಿ ಅಂತಾ ಫೋನ್ ತೆಗೆದು ಹಲೋ ಅಂದ್ರೂ ಅಷ್ಟೇ .........................................!!!!!!                                                                                                               ಗ್ರಾಮಸ್ಥರು :-  ಏ ಬುಡಿ ಸಾ ಇದಕೆಲ್ಲಾ ಯಾಕೆ ಪೋಲಿಸು , ಕಟ್ಲೆ ಎಲ್ಲಾ  ನಾಮೇ ಸರಿ ಮಾಡ್ಕಂದ್ರಾಯ್ತು    ಅಂತಾ ಹೋಗ್ಲಿ  ಐದು  ಸಾವ್ರಾ ಕೊಡ್ಸಿ ಸಾ ಅಂದ್ರೂ .