Showing posts with label shirasi. Show all posts
Showing posts with label shirasi. Show all posts

Sunday, January 8, 2017

ಶಿರಸಿಯಲ್ಲೊಬ್ಬ ಆಧುನಿಕ ಬಿ.ಎಲ್. ರೈಸ್..................! ಸದ್ದಿಲ್ಲದೇ ಇತಿಹಾಸದ ಬೆನ್ನು ಹತ್ತಿದ ಸಾಹಸಿ.



ಶ್ರೀ  ಲಕ್ಷ್ಮೀಶ್ ಹೆಗ್ಡೆ  ಶಿರಸಿಯಲ್ಲೊಬ್ಬ  ಆಧುನಿಕ  ಬಿ.ಎಲ್. ರೈಸ್   



ನನಗೆ   ಒಬ್ಬರನ್ನು ಅನವಶ್ಯಕವಾಗಿ  ಹೊಗಳೋದು  ಆಗಿಬರಲ್ಲಾ,  ಹಾಗಾಗಿ  ಆದಷ್ಟು  ವ್ಯಕ್ತಿಗಳ  ಬಗ್ಗೆ  ನನ್ನ ಬ್ಲಾಗ್ನಲ್ಲಿ  ಬರಹಗಳು ಕಡಿಮೆ ಇರುತ್ತದೆ. ಆದರೂ  ಕೆಲವೊಮ್ಮೆ  ಕೆಲವು ಮಹನೀಯರು  ತಮ್ಮ   ಸಾಧನೆಗಳಿಂದ  ನನ್ನ  ಮನಸಿನಲ್ಲಿ  ನಿಂತುಬಿಡುತ್ತಾರೆ. ಇನ್ನು ಅಂತಹವರ   ಜ್ಞಾನ  ಭಂಡಾರ  ಕಂಡು ನಾನು  ಮೂಕ ವಿಸ್ಮಿತನಾಗಿಬಿಡುತ್ತೇನೆ  . ಅಂತಹ ಒಬ್ಬ   ಅಪರೂಪದ   ವ್ಯಕ್ತಿಯನ್ನು  ನನ್ನ ಬ್ಲಾಗಿನ  ಆವರಣಕ್ಕೆ ಕರೆ   ತಂದು ಅವರ ಪರಿಚಯ   ಮಾಡಿಕೊಡಲು  ನಿಜಕ್ಕೂ   ಸಂತಸ ಪಡುತ್ತೇನೆ.



ಆಗಿನ್ನೂ ಶಿರಸಿಗೆ  ಬಹಳ ವರ್ಷಗಳ ನಂತರ  ಹೊರಟ ಸಮಯ ,  ಶಿರಸಿ ಸಮೀಪದ  ಕೊಳಗಿ ಬೀಸ್  ನಲ್ಲಿ   ಶ್ರೀ ಗುರುಮೂರ್ತಿ  ಹೆಗ್ಡೆ  ಅವರ ಸಹೋದರನ  ವಿವಾಹಕ್ಕೆ   ಆಮಂತ್ರಣವಿತ್ತು, ಹೊರಡುವ ಮುಂಚೆ ಆಪ್ತ  ಮಿತ್ರ  ಪ್ರಕಾಶ್   ಹೆಗ್ಡೆ ಯವರಿಗೆ  ಶಿರಸಿ ಇತಿಹಾಸ  ತಿಳಿದವರ   ಬಗ್ಗೆ  ಮಾಹಿತಿ ಕೊಡುವಂತೆ  ಪೀಡಿಸಿದೆ , ಪಾಪ  ಅವರೂ ಸಹ   ತಮಗೆ ತಿಳಿದ  ಹಲವಾರು   ವ್ಯಕ್ತಿಗಳ  ವಿವರ ಕೊಟ್ಟರು ಆದರೆ  ಆ ಸಮಯದಲ್ಲಿ  ಶಿರಸಿ  ಮಾರಿಕಾಂಬೆ ಜಾತ್ರೆ  ಇದ್ದ ಕಾರಣ,  ನನಗೂ ಸಮಯ ಕಡಿಮೆ  ಇದ್ದ  ಕಾರಣ, ಮತ್ತೊಬ್ಬ  ಪ್ರೀತಿಯ ತಮ್ಮ  ಹರ್ಷಹೆಗ್ಡೆ  ಜೊತೆ  ಅಲೆದಾಡಿ  ಶಿರಸಿ  ಸುತ್ತ  ಮುತ್ತ  ಅಲೆದಾಡಿ ಸಾಕಷ್ಟು ಛಾಯಾಚಿತ್ರಗಳು  ಹಾಗು  ಸಿಕ್ಕಷ್ಟು   ಮಾಹಿತಿ   ದೋಚಿಕೊಂಡು  ಬಂದಿದ್ದೆ, ಆಗಿನ್ನೂ  ಶಿರಸಿಯ ಬಗ್ಗೆ ಬ್ಲಾಗ್ ನಲ್ಲಿ ಬರೆಯುವ ಮನಸು ಮಾಡಿರಲಿಲ್ಲ. ಒಂದು ದಿನ ಬ್ಲಾಗ್  ಬರಹಕ್ಕೆ ಏನೂ ವಿಚಾರ ಸಿಗದಿದ್ದಾಗ  ಶಿರಸಿಯ ಛಾಯಾಚಿತ್ರಗಳನ್ನು ನೋಡುತ್ತಾ  ಕುಳಿತೆ. ಸಹಸ್ರಲಿಂಗದ ಛಾಯಾಚಿತ್ರ ನೋಡುತ್ತಾ  ಈ ಪ್ರಾಂತದಲ್ಲಿ  ಏನೋ ವಿಶೇಷ ಇದೆ ಅನ್ನಿಸಿತು. ಅದರಂತೆ ಹುಡುಕಾಟ ನಡೆಸಿ, ಹಳೆ  ಗೆಝೆಟಿಯರ್ ಗಳನ್ನೂ ತಿರುವು ಹಾಕತೊಡಗಿದೆ. ಆಹಾ ಇಷ್ಟೆಲ್ಲಾ ಮಾಹಿತಿ ಇದೆಯಾ ಅನ್ನಿಸಿತು.  ಆದರೂ  ಸ್ಥಳೀಯ ವ್ಯಕ್ತಿಗಳ ಮಾಹಿತಿ ಇದ್ದರೆ ಚೆನ್ನ  ಅನ್ನಿಸಿ  ಹುಡುಕಾಟ ನಡೆಸುತ್ತಿದ್ದಾಗ  ನನಗೆ ಬಹುಮಾನವಾಗಿ ಸಿಕ್ಕವರೇ   ಶ್ರೀ  ಲಕ್ಷ್ಮೀಶ್ ಹೆಗ್ಡೆ  ಅವರು,  ಹೇಗೋ ಸಿಕ್ಕ  ಅವರ  ಮೊಬೈಲ್  ನಂಬರ್ ಗೆ ಕರೆ ಮಾಡಿದಾಗ  ಆತ್ಮೀಯವಾಗಿ ಪರಿಚಯ ಮಾಡಿಕೊಂಡು  ಶಿರಸಿ ಇತಿಹಾಸದ  ಬಗ್ಗೆ ಮೈಸೂರಿನಿಂದ  ಕರೆ  ಮಾಡಿದ್ದಕ್ಕೆ ಹರುಷ  ವ್ಯಕ್ತ ಪಡಿಸಿ.  ಕೆಲವು ಮಾಹಿತಿ ನೀಡಿದರು.  ಅಲ್ಲಿಂದ  ನಮ್ಮಿಬ್ಬರ  ಪರಿಚಯ ಆರಂಭವಾಯಿತು. ಹಲವಾರು ಸಾರಿ  ಶಿರಸಿಗೆ ಬಂದ್ರೂ  ಅವರ ಭೇಟಿಮಾಡಲು ಆಗಿರಲಿಲ್ಲ. 



ಇತಿಹಾಸ   ಜಾತ್ರೆಯ  ಮೆರವಣಿಗೆಗೆ   ಶಿರಸಿ ಮಾರಿಕಾಂಬೆ ಆಶೀರ್ವಾದ 


ಶಿರಸಿಯ  ಹಲವಾರು ವಿಚಾರಗಳ ಬಗ್ಗೆ  ಮಾಹಿತಿ  ತಿಳಿಯಲು ಇವರನ್ನು ಬಹಳಷ್ಟು ಸಾರಿ ಫೋನ್ ಮೂಲಕ ನಾನು ಕಾಡಿಸಿದ್ದರೂ  ಬೇಸರ ಮಾಡಿಕೊಳ್ಳದೆ, ಇತಿಹಾಸದ  ಮಾಹಿತಿ ನೀಡುತ್ತಿದ್ದ ಇವರನ್ನು ಭೇಟಿಯಾಗುವ ಹಂಬಲ  ಶುರುವಾಯ್ತು. ಅದಕ್ಕೆ ಕಾಲ ಕೂಡಿಬಂದಿದ್ದೆ  ಶಿರಸಿಯಲ್ಲಿ  ಜರುಗಿದ  ರಾಜ್ಯಮಟ್ಟದ  ಇತಿಹಾಸ ಸಮ್ಮೇಳನದಲ್ಲಿ. ನಿಜಕ್ಕೂ ಶಿರಸಿಯಂತಹ  ಒಂದು ತಾಲೂಕು ಕೇಂದ್ರದಲ್ಲಿ  ಒಂದು  ರಾಜ್ಯಮಟ್ಟದಲ್ಲಿ   ಜರುಗುವ  ಕಾರ್ಯಕ್ರಮಕ್ಕಿಂತ  ಶಿಸ್ತು ಬದ್ದವಾಗಿ ಅಚ್ಚುಕಟ್ಟಾಗಿ ಕಾರ್ಯಕ್ರಮ  ಆಯೋಜಿಸಿ  ನಿರ್ವಹಣೆ ಮಾಡಿದ್ದು  ಲಕ್ಷ್ಮೀಶ್ ಹೆಗ್ಡೆಯವರ  ಸಾಹಸಕ್ಕೆ ಸಾಕ್ಷಿ,


ನನಗೂ ಇಷ್ಟಾ  ಶಿರಸಿಯ  ಇತಿಹಾಸ  ಅಂದ್ರೂ ಕಮಲಾ ಹಂ  ಪ. ನಾ . 


ಶಿರಸಿಯ ಸುತ್ತಮುತ್ತ  ಬಹಳಷ್ಟು ಐತಿಹಾಸಿಕ ತಾಣಗಳಿವೆ, ಪ್ರಕೃತಿಯ ಮಡಿಲಲ್ಲಿ   ಅನೇಕ  ಇತಿಹಾಸದ  ಕುರುಹುಗಳನ್ನು ಬಚ್ಚಿಟ್ಟುಕೊಂಡು  ಶಿರಸಿ  ಇತಿಹಾಸಕಾರರಿಗೆ  ಸವಾಲಾಗಿ ನಿಂತಿದೆ. ಇಂತಹ ಇತಿಹಾಸದ ಚಕ್ರವ್ಯೂಹ ಭೇದಿಸುತ್ತ , ರಾಜ್ಯಮಟ್ಟದ ಇತಿಹಾಸ  ಜಾತ್ರೆ  ಏರ್ಪಡಿಸುತ್ತ   ಹಲವಾರು  ದಿಗ್ಗಜರ  ಸಮಕ್ಷಮದಲ್ಲಿ   ನೋಡ್ರಪ್ಪ  ನಮ್ಮೂರ ಇತಿಹಾಸದ ತಾಕತ್ತು ಇದು ಅಂತಾ ತೋರಿಸುವ  ಶ್ರೀ ಲಕ್ಷ್ಮೀಶ್ ಹೆಗ್ಡೆ  ರ    ಛಲಕ್ಕೆ  ಯಾರಾದ್ರೂ ಸೈ  ಅನ್ನಲೇಬೇಕು.  ಶಿರಸಿಯ ಇತಿಹಾಸ  ಹೇಳುವ  ಇವರ ಇತಿಹಾಸ   ಏನೂ ಅಂತಾ  ಕೆದಕಿದಾಗ   ಸಿಕ್ಕಿದ್ದು  ಮತ್ತೊಂದು ಇತಿಹಾಸ .

ಇತಿಹಾಸಕಾರ  ಹಾಗು ಅವರ ಅಂತರಂಗ      {ಚಿತ್ರ ಕೃಪೆ ಲಕ್ಷ್ಮೀಶ್ ಹೆಗ್ಡೆ. }



 




ಹೌದ್ರೀ  ಇತಿಹಾಸಕಾರನಿಗೂ ಒಂದು ಇತಿಹಾಸ  ಇರುತ್ತೆ,   ಬನ್ನಿ ಬನ್ನಿ ಹೀಗೆ ...! ಅದೊಂದು ದಿನ   ದಿನಾಂಖ  18 ಫೆಬ್ರವರಿ  1984  ರಂದು ಶಿರಸಿಯ  ಸೋಂದೆ ಸಮೀಪದ  ಬಾಡ್ಲಾ ಕೊಪ್ಪದ    ಶ್ರೀ ರಾಮಚಂದ್ರ ಹೆಗ್ಡೆ  ಹಾಗು ಮಮತಾ ಹೆಗ್ಡೆ ಯವರ ಮನೆಯಲ್ಲಿ  ಸಂಭ್ರಮವೋ ಸಂಭ್ರಮ.  ಅಂದು  ಒಂದು ಗಂಡು ಮಗು  ಅಳುತ್ತಾ  ಅಳುತ್ತಾ  ಐತಿಹಾಸಿಕ  ಸೋಂದಾ  ಪ್ರದೇಶದಲ್ಲಿ  ತನ್ನ ಜನ್ಮ ಪಡೆದಿತ್ತು. ಮನೆಯಲ್ಲಿನ ಹಿರಿಯರ ಪ್ರಭಾವವೋ ಅಥವಾ ಆ ಮಗು ಜನಿಸಿದ  ಮಣ್ಣಿನ  ಗುಣವೋ ಕಾಣೆ  ಆ ಮಗು ಬೆಳೆಯುತ್ತಾ  ಬೆಳೆಯುತ್ತಾ   ಇತಿಹಾಸದ ಕಡೆ  ಆಕರ್ಷಿತನಾಗಿ  ಶಿರಸಿ ಸುತ್ತ ಮುತ್ತಲಿನ    ದೇವಾಲಯ, ವೀರಗಲ್ಲು, ಮಾಸ್ತಿ ಕಲ್ಲು,  ಶಾಸನಗಳು,  ಸ್ಮಾರಕಗಳನ್ನು  ಪ್ರೀತಿಸತೊಡಗಿತು.ಆ ಮಗುವೇ  ಇಂದಿನ ಶ್ರೀಯುತರಾದ  ಲಕ್ಷ್ಮೀಶ್ ಹೆಗ್ಡೆಯವರು.      ಬಿ. ಎ . ಮುಗಿಸಿದ  ನಂತರ ಪುರಾತತ್ವ ಶಾಸ್ತ್ರ , ಇತಿಹಾಸದಲ್ಲಿ ಎಂ. ಎ . ಮಾಡಿ ನಂತರ ಎಂ. ಫಿಲ್.  ಮಾಡಿದರು, ನಂತರ ಇತಿಹಾಸಕ್ಕೆ ಶಾಸನಗಳೇ ಭದ್ರ ಬುನಾದಿ ಎಂದು ತಿಳಿದು  ಶಾಸನ ಶಾಸ್ತ್ರದಲ್ಲಿ ಡಿಪ್ಲಮೋ[ Diplama in  epigraphy] ಮಾಡಿ ಹೆಚ್ಚಿನ ಜ್ಞಾನ ಸಂಪಾದಿಸುತ್ತಾರೆ. ಇನ್ನೇನು ಇಷ್ಟೆಲ್ಲಾ ಮಾಡಿದ ಮೇಲೆ ಕೆಲ್ಸಾ ಸಿಗೋಲ್ವೆ  ಅನ್ನೋಹಾಗೆ   ಸೋಂದೆ  ಸ್ವರ್ಣವಲ್ಲಿ  ಸಂಸ್ಥಾನ ಮಠ ಕ್ಕೆ ಸೇರಿದ  ಶ್ರೀನಿಕೇತನ  ವಿದ್ಯಾ ಸಂಸ್ಥೆಯಲ್ಲಿ ಉಪನ್ಯಾಸಕ ಹುದ್ದೆ  ಜೊತೆಗೆ   ಆಡಳಿತಾಧಿಕಾರಿ  ಹುದ್ದೆ  ಲಭಿಸುತ್ತದೆ. ವೃತ್ತಿ ಯಾವುದಾದ್ರೇನು ಪ್ರವೃತ್ತಿ ಗೆ ನ್ಯಾಯ ದೊರಕಬೇಕಲ್ಲ.  ಶಿರಸಿ  ಸುತ್ತಮುತ್ತಲಿನ  ಇತಿಹಾಸದ   ಸೆಳೆತ  ಇವರನ್ನು ಆವರಿಸಿದ ಕಾರಣ,  ಪ್ರವೃತ್ತಿಯನ್ನೇ  ವೃತ್ತಿ ಮಾಡಿಕೊಳ್ಳುತ್ತಾರೆ  ಶಿರಸಿಯ  ಇತಿಹಾಸಕ್ಕೆ ಏನಾದರೂ ಕೊಡುಗೆ ನೀಡುವ  ಹಾದಿಯಲ್ಲಿ ಹೆಜ್ಜೆ ಹಾಕುತ್ತಾರೆ..



ಸೋಂದಾ ಅರಸರ ಕಾಲ್ಪನಿಕ  ಚಿತ್ರ. 


  2007 ರಲ್ಲಿ ಉತ್ತರ ಕನ್ನಡ  ಜಿಲ್ಲೆ ಅದರಲ್ಲೂ ವಿಶೇಷವಾಗಿ  ಶಿರಸಿಯ ಸುತ್ತ ಮುತ್ತ ಐತಿಹಾಸಿಕ  ಬನವಾಸಿ, ಸುಧಾಪುರ ಅಥವಾ ಸೋಂದೆಯ  ಅರಸು ಮನೆತನ , ಒಂದೇ ಎರಡೇ  ಬಗೆದಷ್ಟು  ಇತಿಹಾಸದ  ಅಚ್ಚರಿಗಳು, ಮಾಹಿತಿ ಸಿಗುತ್ತವೆ, ಲಕ್ಷ್ಮೀಶ್ ಹೆಗ್ಡೆ  ಅವರು ಶಿರಸಿ ಸುತ್ತ ಮುತ್ತ ಶಾಸನ, ವೀರಗಲ್ಲುಗಳ   ಅಧ್ಯಯನ,       ಐತಿಹಾಸಿಕ   ಸೋಂದೆ ಅರಸರುಗಳ  ಬಗ್ಗೆ ಅವರ  ಕೋಟೆಗಳ , ಬಗ್ಗೆ ಸಂಶೋಧನೆ , ಬನವಾಸಿಯ  ಚಾಲುಕ್ಯರ  ಬಗ್ಗೆ  ಸಂಶೋಧನೆ  ಮಾಡುತ್ತಾ ಮಾಡುತ್ತಾ   ಹಳೆ ಮೈಸೂರು ಸಂಸ್ಥಾನದಲ್ಲಿ   ಬೆಂಜಮಿನ್  ಲೆವಿಸ್  ರೈಸ್  ಅವರು ಮಾಡಿದ  ಐತಿಹಾಸಿಕ  ಸಂಶೋಧನೆಗಳಿಗೆ ಸರಿ ಸಮಾನವಾಗಿ  ಇತಿಹಾಸದ ವಿಚಾರಗಳನ್ನು ಹೆಕ್ಕಿ ತೆಗೆದು  ಜನರ ಮುಂದಿಡುತ್ತಾರೆ.  ನಂತರ ಅಮೇರಿಕಾದ ಮಿಚಿಗನ್  ವಿಶ್ವವಿದ್ಯಾಲಯದ   ಸಂಶೋಧಕರಾದ "ಎಲಿಜಬತ್ ಬ್ರಡ್ಜಸ್ "  ರವರ  ಜೊತೆಯಲ್ಲಿ  ಇಕ್ಕೇರಿ ಹಾಗು ಕೆಳದಿ   ಸಂಶೋಧನೆಯಲ್ಲಿ  ಕಾರ್ಯನಿರ್ವಹಿಸಿ, ವಿದೇಶಿಯರು  ಹೇಗೆ  ಐತಿಹಾಸಿಕ  ವಿಚಾರಗಳನ್ನು ಸಂಶೋಧನೆ ಮಾಡುತ್ತಾರೆ ಎಂಬುದನ್ನು  ತಿಳಿದುಕೊಳ್ಳುತ್ತಾರೆ. ಅನುಭವ  ಮಾಗಿದಂತೆ  ಬರೆಯುವ ಕೈಗಳು  ಬರೆಯುತೊಡಗುತ್ತವೆ.  ಈ ಬರವಣಿಗೆಯಿಂದ  ಒಂಬತ್ತು  ಐತಿಹಾಸಿಕ ಕೃತಿಗಳು, ಹತ್ತು  ಐತಿಹಾಸಿಕ  ನಾಟಕಗಳು  ಉದಯವಾಗುತ್ತವೆ. ಐತಿಹಾಸಿಕ ನಾಟಕಗಳ  ಪಾತ್ರಗಳಿಗೆ  ಜೀವಕೊಡಲು  "ರಂಗ ಚರಿತ " ಎಂಬ  ರಂಗ ಸಂಘಟನೆಯನ್ನು  ಹುಟ್ಟುಹಾಕುತ್ತಾರೆ. ಈ ಮೂಲಕ  ಸಮಾಜಕ್ಕೆ ಇತಿಹಾಸದ  ಬಗ್ಗೆ ತಿಳುವಳಿಕೆ  ನೀಡಲು  ಹಾದಿ ಕಂಡುಕೊಳ್ಳುತ್ತಾರೆ.

ಬನ್ನಿ ಇತಿಹಾಸ  ತಿಳಿಯೋಣ

ಇತಿಹಾಸದೆಡೆಗೆ  ತುಡಿಯುತ್ತಿದ್ದ  ಶ್ರೀ ಲಕ್ಷ್ಮೀಶ್ ಹೆಗ್ಡೆ  ಸುಮ್ಮನೆ ಕೂರುವ  ವ್ಯಕ್ತಿಯಲ್ಲ  ಜನರಲ್ಲಿ ಇತಿಹಾಸ ಪ್ರೀತಿ  ಬೆಳಸಲು, ರಾಜ್ಯ ಮಟ್ಟದ ಇತಿಹಾಸದ   ಜಾತ್ರೆಯನ್ನು  ಕಳೆದ ಎರಡು ವರ್ಷಗಳಿಂದ  "ಉತ್ತರ ಕನ್ನಡ  ಜಿಲ್ಲಾ ಚರಿತ್ರಾ  ಅಭಿಯಾನ" ಎಂಬ   ಹೆಸರಿನಲ್ಲಿ  ಕಾರ್ಯಕ್ರಮ  ಮಾಡುತ್ತಿದ್ದಾರೆ  , ಸುಮಾರು ಒಂದೂವರೆ ತಾಸು  ಇತಿಹಾಸದ ಹಲವು ವಿಚಾರಗಳ ಬಗ್ಗೆ  ವಿದ್ವಾಂಸರಿಂದ   ವಿಚಾರ ಮಂಡನೆ  , ಉಪನ್ಯಾಸ, ನಂತರ  ದೃಶ್ಯ ಮಾಧ್ಯಮದ ಮೂಲಕ,  ಪ್ರಹಸನಗಳ ಮೂಲಕ  , ಉತ್ತರ ಕನ್ನಡ ಜಿಲ್ಲೆಯ,   ಇತಿಹಾಸದ ವಿಚಾರಗಳನ್ನು    ಜನರಿಗೆ  ಮನಮುಟ್ಟುವಂತೆ   ತಿಳಿಸಿಕೊಡುತ್ತಿದ್ದಾರೆ.  

 
ಇತಿಹಾಸ ತಿಳಿಯಲು ಬಂದ  ಮನಸುಗಳು 


ಹರಿಯುವ ನದಿಯನ್ನು ನಿಲ್ಲಿಸಲು ಸಾಧ್ಯವೇ,   ಹರಿಯುತ್ತಲೇ ಇರುತ್ತದೆ  ಹಾಗೆಯೇ  ಇವರ ಇತಿಹಾಸದ ಅಭಿಯಾನ  ಮುಂದುವರೆದು ಕಳೆದ ನಾಲ್ಕು  ವರ್ಷಗಳಿಂದ   " ನಮ್ಮ ನೆಲದ ಕಥೆ " ಎನ್ನುವ ಅಂಕಣದ ಮೂಲಕ  ಜನರಿಗೆ ಇತಿಹಾಸದ ಕೌತುಕಮಯ ವಿಚಾರಗಳನ್ನು  ತಿಳಿಸಿಕೊಡುತ್ತಿದ್ದಾರೆ.   ಇದನ್ನು ಓದಿದ ಯಾರಾದ್ರೂ   ಅಚ್ಚರಿಯಿಂದ   "ಆಹಾ  ನಮ್ಮೂರಿನಲ್ಲಿ ಹೀಗೂ ಉಂಟಾ.....?  "   ಅನ್ನಲೇಬೇಕು ಹಾಗಿರುತ್ತವೆ    ಮಾಹಿತಿ.  ಯಾರಿಗೆ ತಾನೇ  ತಮ್ಮ ಊರಿನ ಇತಿಹಾಸದ ಬಗ್ಗೆ ಹೆಮ್ಮೆ ಇರೋಲ್ಲಾ   ಹೇಳಿ,  ಹಾಗಾಗೇ   ಶ್ರೀ ಲಕ್ಷ್ಮೀಶ್ ಹೆಗ್ಡೆ ಅವರು  ತಮ್ಮ ಸುತ್ತಮುತ್ತಲಿನ ಸ್ಥಳೀಯ ಇತಿಹಾಸ   ಕುರಿತು ಗಂಭೀರ  ಚಿಂತನೆ ನಡೆಯುವಂತಾಗಲು    ರಾಜ್ಯ ಮಟ್ಟದ  ಇತಿಹಾಸ ಸಮ್ಮೇಳನ   ಆಯೋಜನೆಗೆ ಮುಂದಾಗುತ್ತಾರೆ.  ಜೊತೆಗೆ   ಇತಿಹಾಸದ  ಪಯಣದಲ್ಲಿ ಕಾಣಸಿಗುವ ಸಾಧಕರನ್ನು ಗೌರವಿಸಲು ಸೋದೆ ಸದಾಶಿವರಾಯ  ಪ್ರಶಸ್ತಿಯನ್ನು   ಪ್ರತಿಷ್ಠಾಪಿಸುತ್ತಾರೆ  . ಕಳೆದ ಎರಡು ವರ್ಷಗಳಿಂದ   ಅದ್ಭುತವಾದ  ಯಶಸ್ಸನ್ನು   ಈ  ಇತಿಹಾಸ ಸಮ್ಮೇಳನ  ಗಳಿಸಿ ಶಿರಸಿ  ಊರಿನ   ಗೌರವಕ್ಕೆ  ಇತಿಹಾಸದ  ಹೆಮ್ಮೆಯ ಕಿರೀಟ  ತೊಡಿಸಿದೆ.  ನಾಡಿನ ಹಲವಾರು  ಪ್ರಖ್ಯಾತ  ಇತಿಹಾಸಕಾರರು   ಇದರಲ್ಲಿ ಭಾಗವಹಿಸಿ   ಶಿರಸಿಯ  ಇತಿಹಾಸದ  ಗೌರವವನ್ನು ಹೆಚ್ಚಿಸಿದ್ದಾರೆ.
ಅರೆ ಇತಿಹಾಸದ  ಸಮ್ಮೇಳನಕ್ಕೆ  ಇಷ್ಟು ಜನ ಬರ್ತಾರಾ...?


ಇತಿಹಾಸದ ಹುಚ್ಚನ್ನು ಹತ್ತಿಸಿಕೊಂಡವರು ಸುಮ್ಮನಿರಲು ಸಾಧ್ಯವೇ ...? ಮುಂದಿನ ಪೀಳಿಗೆಯವರು  ಇತಿಹಾಸದ ತೇರನ್ನು ಎಳೆಯ ಬೇಕಲ್ಲವೇ ...? ಅದಕ್ಕಾಗಿ  ತಮ್ಮ ಸಂಸ್ಥೆ   ಶ್ರೀ ನಿಕೇತನದ   ಮಕ್ಕಳಿಗೆ   ಇತಿಹಾಸದ ರುಚಿ ಹತ್ತಿಸಲು  ಶ್ರಮಿಸುತ್ತಿದ್ದಾರೆ, ಹಾಗಾಗಿ ಮಕ್ಕಳಿಂದಲೇ  ಇತಿಹಾಸದ ವಿಚಾರಗಳನ್ನು  ಅಧ್ಯಯನ  ಹಾಗು ಸಂಶೋಧನೆ ಮಾಡಿಸಿ  ನಾಡಿನ  ಐತಿಹಾಸಿಕ  ಸ್ಥಳ ಬನವಾಸಿಯ ಬಗ್ಗೆ  ಮಕ್ಕಳಿಂದಲೇ ಗ್ರಂಥ ರಚನೆ  ಮಾಡಿಸಿದ್ದು   ನಿಜಕ್ಕೂ ಹೆಮ್ಮೆ ಪಡುವ   ವಿಚಾರ.  ೨೦೧೩ ರಲ್ಲಿ  ಆ ಇತಿಹಾಸ ಕಾರರ  ಬಗ್ಗೆ ವಿಚಾರ ತಿಳಿದು ಇವರ ಸಂಶೋಧನಾ ಸಾಹಿತ್ಯಕ್ಕಾಗಿ   ಡಾಕ್ಟರ್ ಎಂ.ಎಂ. ಕಲಬುರ್ಗಿಯವರಿಂದ  " ಬಸವರಾಜ ಕಟ್ಟೇಮನಿ  ರಾಜ್ಯ ಪ್ರಶಸ್ತಿ"  ನೀಡಿ  ಗೌರವಿಸಲಾಗಿದೆ.


ಬನವಾಸಿಯ ಮೂಲ ಮಧುಕೇಶ್ವರ ದೇವಾಲಯ. 


ಇತಿಹಾಸವನ್ನೇ  ಉಸಿರಾಡುತ್ತಿರುವ  ಶ್ರೀ ಲಕ್ಷ್ಮೀಶ್ ಹೆಗ್ಡೆ ಅವರ ಸಾಧನೆಯನ್ನು ಯಾರೂ ಗುರುತಿಸಲಿಲ್ವೇ  ಅಂತಾ  ಅಂದುಕೊಂಡಿರಾ ...?  ನಿಜ   ಇಂತಹ ಸಾಧನೆಗಳನ್ನು  ಗುರುತಿಸುವವರು ಬಹಳ ಕಡಿಮೆ, ಜೊತೆಗೆ  ಇಂತಹ  ಅದ್ಭುತ  ವ್ಯಕ್ತಿಗಳು  ಪ್ರಚಾರ ಪ್ರಿಯರಲ್ಲಾ, ಸದ್ದಿಲ್ಲದೇ  ತಮ್ಮ ಪಾಡಿಗೆ   ತಾವು  ತಮ್ಮ ಕರ್ತವ್ಯ ಮಾಡುತ್ತಿರುತ್ತಾರೆ.  "ಹಾಡು ಹಕ್ಕಿಗೆ ಬೇಕೇ ಬಿರುದು ಸನ್ಮಾನ  " ಎನ್ನುವ ಕವಿತೆಗೆ   ಅನ್ವರ್ಥವಾಗಿ  ಬದುಕುವ  ಈ ಇತಿಹಾಸಕಾರನನ್ನು  ಕನ್ನಡ ನಾಡಿಗೆ ಕೊಡುಗೆ ನೀಡಿದ "ಶಿರಸಿ"  ಗೆ  ಅಲ್ಲಿನ ಇತಿಹಾಸಕ್ಕೆ  ಒಮ್ಮೆ ಜೈ ಅಂದುಬಿಡೋಣ.



Saturday, May 28, 2016

ಅಸಹಾಯಕ "ನೀರು ನಾಯಿ " ಗಳು ಕಣ್ಮರೆಯಾಗುತ್ತಿವೆ, ಆದ್ರೆ ನಮಗೆ ಇವು ನಮ್ಮ ನಡುವೆಯೇ ಇದ್ದದ್ದು ಗೊತ್ತೇ ಆಗ್ಲಿಲ್ಲ .....!



  "ನಾನೇ ಕಣ್ರೀ   ನೀರು ನಾಯಿ ಅಂದ್ರೆ " [ ಚಿತ್ರ ಕೃಪೆ   ಅಂತರ್ಜಾಲ  ] 

ಮೊನ್ನೆ ಅಂತರ್ಜಾಲದಲ್ಲಿ   ಬ್ಲಾಗ್   ವೀಕ್ಷಣೆ   ಮಾಡುತ್ತಿದ್ದಾಗ   ಶಿರಸಿಯ   ವಿನಯ್ ಹೆಗ್ಡೆ  ಅವರ ಬ್ಲಾಗ್    "    ಅಘನಾಶಿನಿ "   ಯಲ್ಲಿ    ಶಿರಸಿಯ ಸಮೀಪ  ಹುಟ್ಟಿ ಹರಿಯುವ    "ಅಘನಾಶಿನಿ"    ನದಿಯು   ಶತಮಾನದಲ್ಲಿ    ಇದೆ ಮೊದಲ ಬಾರಿಗೆ    ಬತ್ತುತ್ತಾ   ಇದ್ದು ಆ ನದಿಯಲ್ಲಿ ವಾಸುಸುತ್ತಿದ್ದ   ನೀರುನಾಯಿಗಳು   ಅಪಾಯದ ಅಂಚಿನಲ್ಲಿರುವ ವಿಚಾರದ    ಬಗ್ಗೆ    ಮನಕರಗುವಂತೆ   ಬರೆಯಲಾಗಿತ್ತು.  ಸರಿ ಅಘನಾಶಿನಿ  ಬ್ಲಾಗಿನ  ಲೇಖನವನ್ನು   ನನ್ನ ಫೇಸ್ಬುಕ್  ಪುಟದಲ್ಲಿ  ಹಂಚಿಕೊಂಡೆ  , ಬಹಳಷ್ಟು ಜನ  ಅದನ್ನು ನೋಡಿ  ವಿಚಾರ ತಿಳಿದರು,  ಇನ್ನು ಕೆಲವರು   ನೀರು ನಾಯಿ ಅಂದ್ರೆ ಏನು ...?    ಅದನ್ನು ನಮ್ಮ ಮನೆಗಳಲ್ಲಿ ಸಾಕುವ  ನಾಯಿಗಳ   ಹಾಗೆ   ಸಾಕ ಬಹುದಾ ..?    ನೀರು ನಾಯಿ  ಅಂದ್ರೆ ಹೇಗಿರುತ್ತೆ ...?  ಅದು ಕಳ್ಳರನ್ನು ಹಿಡಿಯುತ್ತಾ  ...?    ಅದನ್ಯಾಕೆ ನೀರು ನಾಯಿ ಅಂತಾರೆ ..?    ಹೀಗೆ   ಪ್ರಶ್ನೆಗಳನ್ನು  ದೂರವಾಣಿ ಮೂಲಕ  ಕೇಳಿದರು .  ಇನ್ನು ನನ್ನ ಮಗನ ಜೊತೆ ಮಾತನಾಡುತ್ತಾ    ನೀರು ನಾಯಿ  ವಿಚಾರ ಹೇಳಿದೆ  , ಅವನು ಅಪ್ಪಾ   ನೀರು ನಾಯಿ ನಾನಂತೂ ನೋಡಿಲ್ಲ ,   ಈ ಬಗ್ಗೆ     ನಾನು ಓದಿದ    ಶಾಲೆ, ಕಾಲೇಜುಗಳ  ಪುಸ್ತಕದಲ್ಲಿ   ವಿಚಾರ ಇರಲಿಲ್ಲ,  ಯಾವುದೇ ಟಿ. ವಿ.  ಇದರ ಬಗ್ಗೆ  ಮಾಹಿತಿ ನೀಡಿಲ್ಲ  , ಯಾವುದೇ    ನ್ಯೂಸ್  ಪೇಪರ್  ನಲ್ಲಾಗಲಿ   ಮ್ಯಾಗಜಿನ್  ಅಲ್ಲಾಗಲಿ   ಓದಿಲ್ಲ,  ಇದೇನೋ   ಹೊಸ ಕಾರ್ಟೂನ್  ಹೆಸರು ಅನ್ನೋ ಹಾಗೆ ಕಾಣ್ತಿದೆ,  ಅಂದ. ಇನ್ನು ನನ್ನ ಕೆಲವು  ಗೆಳೆಯರನ್ನು   ನೀರು ನಾಯಿ ಬಗ್ಗೆ ಕೇಳಿದೆ   "ಅಯ್ಯೋ ಗುರು   ಅದೇ ನಮ್ಮನೆ  ನಾಯಿಗಳನ್ನು   ನೀರಿಗೆ   ಎತ್ತಿಹಾಕಿ ಅವುಗಳನ್ನೇ    ನೀರುನಾಯಿ ಅನ್ನಬೇಕೂ   ಅಷ್ಟೇ....!"  ಅಂತಾ ಹಾಸ್ಯ ಮಾಡಿದರು,  ಅವರಾದರೂ ಏನು ಮಾಡಿಯಾರು  ನಮ್ಮ   ನಾಡಿನ   ದೊಡ್ಡ ದೊಡ್ಡ ಕೆರೆಗಳಲ್ಲಿ,  ನದಿಗಳಲ್ಲಿ,  ಬದುಕಿ  ಬಾಳುತ್ತಿದ್ದ ಇಂತಹ ಒಂದು ಜೀವಿ  ಹೆಚ್ಚು ಕಡಿಮೆ ಅವಸಾನದ  ಅಂಚಿಗೆ ಬಂದು ನಿಂತಿರಲು   ಯಾರಿಗೆ ತಾನೇ ತಿಳಿಯುತ್ತೆ ಇವುಗಳ ಬಗ್ಗೆ .

ನಾವು ಇರೋದು ಹೀಗೆ ಗೊತ್ತಾ ....?  [ ಚಿತ್ರ ಕೃಪೆ   ಅಂತರ್ಜಾಲ ] 

ನಾನು ಬಾಲ್ಯ ಕಳೆದದ್ದು  ಹಳ್ಳಿಯಲ್ಲಿ  ನನ್ನ ಹಳ್ಳಿ   ನೆಲಮಾಕನ ಹಳ್ಳಿಯಿಂದ     ಮಳವಳ್ಳಿ ಪಟ್ಟಣ ದಲ್ಲಿದ್ದ   ಪ್ರಾಥಮಿಕ  ಹಾಗು  ಪ್ರೌಡ ಶಾಲೆಗೇ   ಸುಮಾರು ಐದು   ಕಿಲೋಮೀಟರು  ಬೈಸಿಕಲ್  ಮೂಲಕ   ತೆರಳುತ್ತಿದ್ದೆ,  ಆ  ಹಾದಿಯಲ್ಲಿ ನನಗೆ ಸಿಗುತ್ತಿದ್ದುದೆ   ಮಳವಳ್ಳಿಯ   ದೊಡ್ಡ ಕೆರೆ    ಆಗ  ಕೆಲವು  ಕೆಲವು ಜೀವಿಗಳು  ಗುಂಪು ಗುಂಪಾಗಿ  ನೀರೊಳಗೆ  ಮುಳುಗುತ್ತಾ    ಏಳುತ್ತಾ   ಚಲಿಸುತ್ತಿರುವುದನ್ನು   ಕಾಣುತ್ತಿದ್ದೆ,   ಆ ಸಮಯದಲ್ಲಿ   ಇವುಗಳ ಬಗ್ಗೆ   ತಿಳಿಯುವಷ್ಟು   ಜ್ಞಾನ ಇರಲಿಲ್ಲ,  ಇನ್ನು  ಬೇಸಿಗೆ ರಜೆಗೆ   ಅಜ್ಜಿಯ ತಂಗಿ ಮನೆ   ಮಳವಳ್ಳಿ ತಾಲೂಕಿನ   "ಮಿಕ್ಕೆರೆ "  ಎಂಬ ಗ್ರಾಮಕ್ಕೆ ಹೋದಾಗ , "ಬಾರೋ ನೀರು ನಾಯಿ   ಆಟಾ ಆಡೋದನ್ನು  ತೋರಿಸ್ತೇನೆ"    ಅಂತಾ    ಸಂಜೆ ವೇಳೆ   ಅಲ್ಲಿನ   ಕೆರೆಯ ದಂಡೆಯ ಮೇಲೆ  ಮನೆಯ ಹಿರಿಯರು  ನನ್ನನ್ನು   ಜೊತೆಯಲ್ಲಿ  ಕರೆದುಕೊಂಡು   ವಾಕಿಂಗ್    ಹೋಗುತ್ತಿದ್ದರು  ,    ಆ ಸಮಯದಲ್ಲಿ    ಗ್ರಾಮದ   ವಿಶಾಲವಾದ  ಕೆರೆಯ   ಕೋಡಿ  ಯ ಸಮೀಪ , ಬಹಳ ಹತ್ತಿರ   ಇವುಗಳ ದರ್ಶನ ಆಗುತ್ತಿತು,   ಗುಂಪುಗುಂಪಾಗಿ   ಕೆರೆಯ ಉದ್ದಗಲಕ್ಕೂ   ನೀರಲ್ಲಿ ಆಟವಾಡುತ್ತಾ ,   ತೇಲುತ್ತಾ   ಮುಳುಗುತ್ತಾ   ಇರುತ್ತಿದ್ದವು .  ನನಗಂತೂ  ಅವು ಪಲ್ಟಿ  ಹೊಡೆಯೋದನ್ನು  ನೋಡೋದೇ ಖುಷಿ ಕೊಡ್ತಾ ಇತ್ತು. ಹೇಗೆ   ಅಂದ್ರೆ  ಉದಾಹರಣೆಗೆ     ಡಾಲ್ಫಿನ್  ಗಳು ಸಮುದ್ರದಲ್ಲಿ ಚಿಮ್ಮಿ  ನೀರಿನೊಳಗೆ   ಪಲ್ಟಿ ಹೊಡೆಯೋ ಹಾಗೆ  ಇರುತ್ತಿತ್ತು.   ಅಂದಿನ ದಿನಗಳಲ್ಲಿ   ಸಾಮಾನ್ಯವಾಗಿ   ಕೆರೆಗಳು  ಯಾವುದೇ  ರೀತಿಯ  ಮಾಲಿನ್ಯಕ್ಕೆ   ಒಳಗಾಗಿರಲಿಲ್ಲ . ಕೆರೆಗಳಲ್ಲಿ   ಜೊಂಡು  ಬೆಳೆದಿರಲಿಲ್ಲ,   ಪರಿಶುದ್ದವಾದ   ನೀರು  ಇಂತಹ  ಜೀವಿಗಳಿಗೆ   ಆಸರೆಯಾಗಿತ್ತು.   ಆದರೆ ಇಂದಿನ  ಪರಿಸ್ಥಿತಿ ಬೇರೆ ಬಿಡೀ.  ಇಂದು  ಅವುಗಳು ವಾಸ ಮಾಡುತ್ತಿದ್ದ  ಕೆರೆಗಳು  ಕಣ್ಮರೆಯಾಗಿವೆ, ಇಲ್ಲದಿದ್ದಲ್ಲಿ  ಕೆರೆಗಳ ತುಂಬಾ ಜೊಂಡು ಹುಲ್ಲು   ಬೆಳೆದು  ನೀರಿನ  ಸೆಲೆ ಕಡಿಮೆಯಾಗಿದೆ,   ಕೆರೆಯಲ್ಲಿ ನೀರಿದ್ದರೂ  ಸಹ   ಮಾಲಿನ್ಯಗೊಂಡು  ಇಂತಹ ಜೀವಿಗಳು  ಬದುಕಲಾಗದಂತಹ   ಪರಿಸ್ಥಿತಿ  ನಿರ್ಮಾಣ ಆಗಿದೆ . ಅಪರೂಪಕ್ಕೆ   ಅಲ್ಲಿ ಇಲ್ಲಿ ಕಂಡುಬಂದರೆ  ಇವುಗಳನ್ನು  ಮಾಂಸಕ್ಕಾಗಿ , ಚರ್ಮಕ್ಕಾಗಿ    ಬೇಟೆಯಾಡಿ    ನಿರ್ನಾಮ  ಮಾಡಲಾಗುತ್ತಿದೆ.     ಇಂದು ನಮ್ಮ ಸುತ್ತ ಮುತ್ತಲಿನ    ಹಳ್ಳಿಗಳ   ಕೆರೆಗಳಲ್ಲಿ  ಇವುಗಳು  ನಿರ್ನಾಮವಾಗಿದ್ದು  ಕಾಣಸಿಗುವುದೇ ಇಲ್ಲಾ,   ನಮ್ಮ ನಾಡಿನ  ಕೆಲವು ನದಿಗಳ   ತಟದಲ್ಲಿ  ಇವುಗಳು    ಬಹಳ  ಅಪರೂಪಕ್ಕೆ ವಿರಳವಾಗಿ   ಕಾಣಸಿಗುತ್ತಿವೆ ,

ನಮ್ಮ ಪಾಡಿಗೆ ನಮ್ಮನ್ನು ಬಿಡ್ರಪ್ಪಾ    [ ಚಿತ್ರ ಕೃಪೆ   ಅಂತರ್ಜಾಲ ] 


    ಇನ್ನು ನೀರು ನಾಯಿಯ ಬಗ್ಗೆ ಸ್ವಲ್ಪ ತಿಳಿಯೋಣ    ಬನ್ನಿ ,  ಈ ನೀರು ನಾಯಿಯ   ವರ್ಣನೆ ಬಹಳ  ವಿಚಿತ್ರ ,  ಇದು  ನಮಗೆ ಕಾಣ ಸಿಗುವ  ಮುಂಗುಸಿ,  ಬೆಕ್ಕು,   ಅಳಿಲು,  ನಾಯಿ   ಇವುಗಳ   ಕೆಲವು ಗುಣಗಳನ್ನು ಅಳವಡಿಸಿಕೊಂಡಿರುವ     ಜೀವಿ .   ನೀರಿನ  ಆಶ್ರಯ ಇದು ಬದುಕಲು ಬೇಕೇ ಬೇಕು  ಹಾಗಾಗಿ ಇವು,   ಕೆರೆ,  ನದಿಗಳ ಆಶ್ರಯದಲ್ಲಿ  ಜೀವನ ಮಾಡುತ್ತವೆ,   ನದಿಗಳ ದಡದಲ್ಲಿ  ಶೀತವಿರುವ ಪ್ರದೇಶದಲ್ಲಿ   ಒಡ್ಡುಗಳ ಹತ್ತಿರ, ಮರಗಳ ಗುಂಪಿನ  ನಡುವೆ    ಪೊಟರೆ ಗಳನ್ನ  ನಿರ್ಮಿಸ್ಕೊಂಡು   ಗುಂಪು ಗುಂಪಾಗಿ  ವಾಸಿಸುತ್ತವೆ.  ಇವುಗಳ  ಮುಖವನ್ನು  ಗಮಸಿಸಿದರೆ   ಬೆಕ್ಕಿನ  ಹೋಲಿಕೆ  ಕಂಡುಬರುತ್ತದೆ,  ಮತ್ತೊಂದು ಕೋನದಿಂದ  ನೋಡಿದರೆ  ಮುಂಗುಸಿಯಂತೆ ಕಾಣುತ್ತದೆ,  ಪುಟ್ಟ ಕಿವಿಗಳು,   ಮುಖದ  ಮುಂಭಾಗಕ್ಕೆ  ಕಾಣುವ ಕಣ್ಣುಗಳು, ಮೂಗು,  ಮುಖದಲ್ಲಿ  ಮೀಸೆಯಂತಹ ಉದ್ದನೆಯ ಕೂದಲುಗಳು ,  ನಾಯಿಯ  ಚರ್ಮದಂತಹ   ಚರ್ಮ,  ಮುಂದಿನ ಎರಡೂ ಕಾಲುಗಳು  ದಪ್ಪವಾಗಿ  ಗಿಡ್ಡವಾಗಿದ್ದು  , ಹಿಂದಿನ ಕಾಲುಗಳು   ಮುಂದಿನ   ಕಾಲುಗಳಿಗಿಂತಾ  ಸಣ್ಣವಾಗಿ  ಉದ್ದವಾಗಿವೆ .  ಇನ್ನು ಇದರ ಬಾಲ ಉದ್ದವಾಗಿದ್ದು  ಬಹಳ ಶಕ್ತಿಯುತವಾಗಿವೆ. ಕೆಲವೊಮ್ಮೆ ಇವುಗಳು ಕಾಂಗರೂ ಗಳಂತೆ  ಎರಡು ಕಾಲಿನಲ್ಲಿ  ನಿಲ್ಲುತ್ತವೆ.   ಇವುಗಳ   ಜೀವಿತ  ಅವಧಿ    ಸುಮಾರು   ಹನ್ನೊಂದರಿಂದಾ  ಹದಿನಾರು ವರ್ಷಾ  ಅಷ್ಟೇ ,  ಈ ನೀರುನಾಯಿಗಳು ಸರಾಸರಿ   ನಾಲ್ಕರಿಂದ   ಐದು ಕಿಲೋ  ಗ್ರಾಂ  ತೂಕ  ತೂಗುತ್ತವೆ,  ಇನ್ನು  ನೀರುನಾಯಿಗಳ  ಸಂತಾನದ ವಿಚಾರಕ್ಕೆ ಬಂದ್ರೆ   ಹೆಣ್ಣು ಗರ್ಭ  ದರಿಸೋದು   ಇಪ್ಪತೆಂಟು  ದಿನಗಳಿಂದ  ಮೂವತ್ತು ದಿನಗಳು,   ಸಾಮಾನ್ಯವಾಗಿ  ಎರಡರಿಂದ ಮೂರು ಮರಿಗಳಿಗೆ   ನೀರುನಾಯಿ ಜನ್ಮ ನೀಡುತ್ತದೆ .  ಇನ್ನು  ಹೊಸದಾಗಿ ಜನಿಸಿದ ಮರಿಗಳು  ಐವತ್ತು  ಗ್ರಾಂ ತೂಕ   ಅಷ್ಟೇ , ಇವುಗಳು    ಮೊದಲ ಎರಡು ಅಥವಾ ಮೂರುವಾರ   ತಾಯಿಯ ಆಸರೆಯಲ್ಲೇ  ಆರೈಕೆ   ಮಾಡಿಸಿಕೊಳ್ಳುತ್ತವೆ,  ಬಾಯಲ್ಲಿ ಹಲ್ಲು ಮೂಡಿ,  ಕಣ್ಣು  ಬಿಟ್ಟು  ಓಡಾಡಲು   ನೀರುನಾಯಿಗೆ  ಸುಮಾರು ನಲವತ್ತು ದಿನಗಳು ಬೇಕು ,  ಆ ನಂತರವಷ್ಟೇ   ಈ  ಮರಿಗಳು ಗಟ್ಟಿಯಾದ  ಆಹಾರ ತಿನ್ನಲು  ಶಕ್ತವಾಗುತ್ತವೆ.   ಹದಿನಾಲ್ಕು ವಾರ  ಕಳೆದಾಗ  ನೀರುನಾಯಿಗಳು   ತಮ್ಮ  ಜೀವನ  ತಾವೇ  ನಿರ್ವಹಣೆ  ಮಾಡೋದನ್ನು  ಕಲಿತು ಬಿಟ್ಟಿರುತ್ತವೆ . ಇನ್ನು ಪರಸ್ಪರ   ಸೂಚನೆ ಕೊಡಲು,   ತಮ್ಮದೇ ಆದ ವಿಚಿತ್ರ ಕ್ರಮ ಅನಿಸರಿಸುತ್ತವೆ.  ಇವು ಹನ್ನೆರಡು  ವಿವಿಧ  ಬಗೆಯ  ಶಬ್ಧವನ್ನು  ತಮ್ಮ ಬಾಯಿಂದ  ಹೊಮ್ಮಿಸುತ್ತವೆ,  ಒಂದೊಂದು ರೀತಿಯ ಶಬ್ದಕ್ಕೂ  ಅದರದೇ  ಆದ ಅರ್ಥ ಇರುತ್ತದೆ,  ಇನ್ನೊಂದು ವಿಶೇಷ  ಅಂದ್ರೆ ಈ ಜೀವಿಗಳು ತಮ್ಮ ದೇಹದಿಂದ   ವಿವಿಧ ಬಗೆಯ  ವಾಸನೆ  ಹೊಮ್ಮಿಸುವ ಮೂಲಕ  ಸಂವಹನ   ನಡೆಸೋದು  ಒಂದು ಅಚ್ಚರಿಯ ವಿಚಾರ.  ಇನ್ನು ಇವುಗಳಿಗೆ  ಜಲಚರಗಳೇ ಆಹಾರ ,  ನೀರಿನಲ್ಲಿ  ಸಿಗುವ ವಿವಿಧ ಬಗೆಯ ಮೀನುಗಳು,   ಹೊಲ ಗದ್ದೆಯಲ್ಲಿ   ಸಿಗುವ   ಏಡಿ,  ಕಪ್ಪೆ , ಮುಂತಾದವುಗಳನ್ನು  ಭಕ್ಷಿಸುತ್ತವೆ.  ಇದು ಇವುಗಳ ಬಗ್ಗೆ  ಇರುವ ಮಾಹಿತಿ. ಕನ್ನಡ  ಅಂತರ್ಜಾಲ ತಾಣಗಳಲ್ಲಿ    ಏನೂ  ಮಾಹಿತಿ ಸಿಗದಿದ್ದರೂ    ಆಂಗ್ಲ    ಭಾಷೆಯಲ್ಲಿನ  ಕೆಲವೇ ಕೆಲವು ತಾಣಗಳಲ್ಲಿ   ನೀರುನಾಯಿಗಳ   ಬಗ್ಗೆ   ಸ್ವಲ್ಪ  ಮಾಹಿತಿ ಸಿಗುತ್ತವೆ,  ಈ ನೀರುನಾಯಿಗಳು   ಹಾಗು   ಸಮುದ್ರದಲ್ಲಿ   ಕಂಡುಬರುವ   ಸೀಲ್ [  ಸೀ  ಲಯನ್ ]  ಗಳು   ಹೊರನೋಟಕ್ಕೆ  ಕೆಲವೊಮ್ಮೆ   ಒಂದೇ ರೀತಿ  ಕಂಡು ಬರುತ್ತವೆ.  ಕೆಲವು ವಿಚಾರಗಳಲ್ಲಿ   ಚಿಕ್ಕಪ್ಪ ದೊಡ್ಡಪ್ಪನ   ಮಕ್ಕಳ ಹಾಗೆ  ಸಾಮ್ಯತೆ ಕಂಡು ಬರುತ್ತದೆ .

ನಮ್ಮನು  ಉಳಿಸಿ ಪ್ಲೀಸ್  [ ಚಿತ್ರ ಕೃಪೆ  ಅಂತರ್ಜಾಲ ] 


ಇನ್ನು ನಮ್ಮ   ನಾಡಿನ  ಕಥೆ  ಪುಸ್ತಕಗಳಲ್ಲಿ  ಇವುಗಳ ಉಲ್ಲೇಖ   ಅಷ್ಟಾಗಿ ಕಂಡು ಬರುವುದಿಲ್ಲ  ಆದರೆ  ಕಡಲ ತೀರದ ಭಾರ್ಗವ  ಕಾರಂತಜ್ಜ     ಬರೆದಿರುವ      "ಸ್ವಪ್ನದ  ಹೊಳೆ "   ಕಥೆಯಲ್ಲಿ  ಒಂದು ಸನ್ನಿವೇಶದಲ್ಲಿ  ನೀರುನಾಯಿಗಳ ಬಗ್ಗೆ  ಸ್ವಲ್ಪ ಮಾಹಿತಿ ನೀಡಿದ್ದಾರೆ.  ಉಳಿದಂತೆ   ಬೇರೆ ಕಥೆಗಾರರ ಕಣ್ಣಿಗೆ ಇವು  ಕಂಡಿಲ್ಲ.  ಇನ್ನು ಇವುಗಳು    ಬಹಳ  ಸಾದು  ಜೀವಿಗಳಾದ  ಕಾರಣ ಇವುಗಳನ್ನು  ಬೇಟೆಗಾರರು  ಬಹಳ ಸುಲಭವಾಗಿ   ಕೊಲ್ಲುತ್ತಾರೆ,  ಹಾಗಾಗಿ ಇವುಗಳು ಅಳಿವಿನ ಅಂಚಿನಲ್ಲಿ  ಬಂದು ನಿಂತಿವೆ ,   ಈಗಲಾದರೂ    ನಾವುಗಳು ಎಚ್ಚರ ವಹಿಸಿ  ಇವುಗಳನ್ನು ರಕ್ಷಣೆ ಮಾಡುವ  ನಿಟ್ಟಿನಲ್ಲಿ   ಕಾರ್ಯಕ್ರಮ  ಹಾಕಿಕೊಳ್ಳಬೇಕಾಗಿದೆ , ಇಲ್ಲದಿದ್ದರೆ   ಇವುಗಳ ಚಿತ್ರವನ್ನು ಗೋಡೆಯ ಮೇಲೆ ಅಂಟಿಸಿ  ಮುಂದಿನ ಪೀಳಿಗೆಗೆ   ತೋರಿಸಬೇಕಾಗುತ್ತದೆ.  ದಯಮಾಡಿ ನಿಮ್ಮ   ಊರಿನ ಅಥವಾ ಹಳ್ಳಿಗಳ   ಕೆರೆಗಳಲ್ಲಿ   ಈ ನೀರುನಾಯಿಗಳು ಕಂಡು ಬಂದರೆ   ಅವುಗಳನ್ನು  ಸಂರಕ್ಷಿಸಲು ಪ್ರಯತ್ನಿಸಿ  ಗೆಳೆಯರೇ.

[ ಸೂಚನೆ :-) ಈ ಲೇಖನದಲ್ಲಿನ  ಚಿತ್ರಗಳನ್ನು  ಅಂತರ್ಜಾಲದ ಸಹಾಯದಿಂದ  ಕೃತಜ್ಞತಾ ಪೂರ್ವಕವಾಗಿ  ಪಡೆದಿದ್ದೇನೆ, ಚಿತ್ರಗಳ ಹಕ್ಕು ಮೂಲ  ಛಾಯಚಿತ್ರಗಾರರದು , ಮಾಹಿತಿಯನ್ನು  ವಿವಿಧ ಪುಸ್ತಕಗಳು, ಅಂತರ್ಜಾಲದ ಸಹಾಯದಿಂದ  , ಕೆಲವು  ಪಶು ವೈಧ್ಯರಿಂದ   ಕೃತಜ್ಞತಾ ಪೂರ್ವಕವಾಗಿ  ಪಡೆದು  ಸಂಗ್ರಹಿಸಿ  ಇಲ್ಲಿ ಬಳಸಿಕೊಳ್ಳಲಾಗಿದೆ .   ನೀರುನಾಯಿಗಳ ಬಗ್ಗೆ ಹೆಚ್ಚಿನ ಮಾಹಿತಿ ಇದ್ದಲ್ಲಿ  ಆ ಮಾಹಿತಿಯನ್ನು   ನಿಮ್ಮ ಅನಿಸಿಕೆಯಲ್ಲಿ   ಹಾಕಿದರೆ ಉಳಿದವರಿಗೆ ಅನುಕೂಲ ಆಗುತ್ತದೆ . ]


 

Monday, April 27, 2015

ಹೀಗೊಂದು ತುಂಟ ಮನಸಿನ ಜೊತೆ ಪಯಣ ......14 "ದೇವಿಸರ" ವೆಂಬ ಪ್ರೀತಿಯ ನಂದಗೋಕುಲದಲ್ಲಿ ವೇಣುಗೋಪಾಲ ಕಾಣಿಸಿದ



ದೇವಿಸರದಲ್ಲಿ  ಕಂಡ ಒಂದು ನೋಟ


ಶಿರಸಿಯ  ಸತ್ಕಾರ್ ಹೋಟೆಲ್ನಲ್ಲಿ   ನಗುತ್ತಿದ್ದ ಮಸಾಲೆ ದೋಸೆಗಳನ್ನು ಹಸಿದ ಹೊಟ್ಟೆಗಳು  ಆದರದಿಂದ  ಸ್ವಾಗತಿಸಿದವು . ಬೆಳಗ್ಗಿನಿಂದ  ಅಲೆದಾಡಿದ್ದ ನಾವು  ದೇವಿಸರ ದ   ಪ್ರಕಾಶಣ್ಣನ    ಮನೆಗೆ  ಹೊರಟೆವು .  ಈ  ದೇವಿಸರ  ಉತ್ತರ ಕನ್ನಡ ಜಿಲ್ಲೆಯ   ಸಿದ್ದಾಪುರ ತಾಲೂಕಿನ  ಒಂದು ಗ್ರಾಮ, ಆದರೆ  ಇಲ್ಲಿನ ಜನ  ಮಕ್ಕಳ  ವಿಧ್ಯಾಭ್ಯಾಸ ಹಾಗು ತಮ್ಮ  ಅವಶ್ಯಕತೆಗಳಿಗೆ  ಒಡನಾಟ ಇಟ್ಟು  ಕೊಂಡಿರೋದು  ಶಿರಸಿ ಪಟ್ಟಣ ಜೊತೆಯಲ್ಲಿ,   ಆದ ಕಾರಣ  ಈ ಊರು ಶಿರಸಿ  ತಾಲೂಕಿಗೆ  ಸೇರಿದ್ದು ಅನ್ನಿಸಿಬಿಡುತ್ತದೆ .


ನಂದಗೋಕುಲ  ಈ ಮನೆ


 ನಮ್ಮ  ಪ್ರಕಾಶ್ ಹೆಗ್ಡೆ  ಹುಟ್ಟಿ ಬೆಳೆದ    ದೇವಿಸರದಲ್ಲಿ   ಎರಡನೇ ದಿನದ  ವಾಸ್ತವ್ಯ  ನಮ್ಮದು , ಬೆಳಗ್ಗಿನಿಂದ  ಅಲೆದು  ಬಂದ  ನಮಗೆ ಪ್ರೀತಿಯ  ಆದರದ  ಆತಿಥ್ಯ ಇಲ್ಲಿ.    ಈ ಮನೆಯಲ್ಲಿ   ಪ್ರೀತಿಸುವ  ಹೃದಯಗಳ  ಒಂದು ಸುಂದರ ಸಂಸಾರವಿದೆ , ಬಂದ  ಕಷ್ಟಗಳನ್ನು  ತಮ್ಮ ತುಂಟ  ನಗೆಯ ಮೂಲಕ  ಎದುರಿಸಿ  ಇಂದು ಮನೆಯಲ್ಲಿ   ಸಂತಸದ  ನೆಮ್ಮದಿ  ಕಾಣುತ್ತಿರುವ  ಕುಟುಂಬ ಇದು .   ಈ  ಊರನ್ನು ನೋಡುತ್ತಿದ್ದಂತೆ  ಈಗಲೇ ಹೀಗೆ    ತುಂಟಾಟ  ಆಡುವ  ಈ ಪ್ರಕಾಶ್ ಹೆಗ್ಡೆ  ಚಿಕ್ಕ ವಯಸ್ಸಿನಲ್ಲಿ  ಏನೇನು  ತಂಟೆ  ಮಾಡಿ  ಮನೆಯವರನ್ನು   ಪೇಚಿಗೆ  ಸಿಕ್ಕಿಸಿರಬಹುದು  ಎಂಬುದನ್ನು  ಕಲ್ಪಿಸಿಕೊಂಡು ನನಗೆ ನಾನೇ ನಕ್ಕೆ ,  ಮನೆಗೆ ಬಂದ  ನನ್ನ ಜೊತೆ ಬಹಳ ಬೇಗ   ಆತ್ಮೀಯವಾಗಿ  ಹೊಂದಿಕೊಂಡಿದ್ದು  ಈ ನಮ್ಮ  ನಾಗೇಶಣ್ಣ ,    ಯಾಕೋ ಇವರದು ನಮ್ಮ  ಮೊದಲ ಸಲದ  ಭೇಟಿ ಅನ್ನಿಸಲಿಲ್ಲ ,  ಬಹಳ ಬೇಗ  ಇವರ ಬಗ್ಗೆ ನನಗೆ   ಗೌರವ ಪೂರ್ವಕ  ವಿಶ್ವಾಸ ಬೆಳೆದು ಬಿಟ್ಟಿತು ,  ಇನ್ನು   ಪತಿಗೆ  ತಕ್ಕ ಪತ್ನಿ ನಮ್ಮ  ನಗುಮುಖದ  ವನಿತಾ ಅತ್ತಿಗೆ,   ಬಾಲಣ್ಣ  ಅಂತಾ ಕರೆದಾಗ   ನನ್ನ ಒಡ ಹುಟ್ಟಿದ ಸಹೋದರಿಯ ವಾತ್ಸಲ್ಯ  ಕಂಡೆ .  ಇನ್ನು ಇವರ ಮಗ  ಗಣಪತಿ  ನಾವು ಭೇಟಿಕೊಟ್ಟ ಸಮಯದಲ್ಲಿ  ಜ್ವರದಿಂದ ಬಳಲುತ್ತಿದ್ದ   ಹೆಚ್ಚಿಗೆ  ಬೆರೆಯಲು ಆಗಲಿಲ್ಲ, ಆದರೆ  ಜ್ವರದಲ್ಲೂ  ನಗು ಮುಖದಿಂದ  ಅಮ್ಮನಿಗೆ ಸಹಾಯ ಮಾಡಿದ್ದ ,  ಇಷ್ಟೇ ಅಲ್ಲಾ  ಆ ಮನೆಯಲ್ಲಿ ಸ್ವಾತಿ ಎಂಬ ಸೈಲೆಂಟ್  ಹುಡುಗಿ ಇದೆ ,  ಬಹಳ ಬುದ್ದಿವಂತ  ಹುಡುಗಿ ಇದು  , ನಗು ನಗುತ್ತಾ  ಅಮ್ಮನ ನೆರಳಾಗಿ  ಸಹಾಯ ಮಾಡುತ್ತಾ   ಮನೆಯ ತುಂಬಾ  ಖುಷಿಯನ್ನು  ಹಂಚುತ್ತಾಳೆ .  ಇವರೆಲ್ಲರಿಗೆ  ಅಮ್ಮನ  ಪ್ರೀತಿಯ ಆಶಿರ್ವಾದದ  ಬೆಂಬಲ ಇದೆ. ಇಂತಹ ಮನೆಯಲ್ಲಿ  ಅಪರಿಚಿತ ನಾನು  ಎಂಬ ಭಾವನೆ ಹೇಗೆ ಬರಲು ಸಾಧ್ಯ ಹೇಳಿ .



ಪ್ರೀತಿ ತುಂಬಿದ ಮನಗಳ ದರ್ಶನ

ಇನ್ನು  ದೇವಿಸರಕ್ಕೆ ಬಂದಮೇಲೆ   ನಾಗೇಶಣ್ಣ  ಸಿಕ್ಕ ಮೇಲೆ  ಪ್ರಕಾಶ್ ಹೆಗ್ಡೆ ಹಂಗೇಕೆ ಅಂತಾ  ಮೆಲ್ಲಗೆ ಜಾರಿಕೊಂಡು ,  ನಾಗೇಶಣ್ಣ ನ ಹತ್ತಿರ ಹರಟೆ ಹೊಡೆಯ ತೊಡಗಿದೆ, ಅಲ್ಲಿನ ಮಳೆ ,  ಬೆಳೆ , ವ್ಯವಸಾಯ  ಪದ್ಧತಿ,  ಕೃಷಿಗೆ ಬಳಸುವ ಸಲಕರಣೆ ,  ಜಾನುವಾರುಗಳ   ಬಗ್ಗೆ  , ಹಾಗು  ಅಲ್ಲಿನ ಆಚಾರ ವಿಚಾರಗಳ ಕುರಿತು  ಅವರಿಂದ ಮಾಹಿತಿ ಪಡೆದೆ , ಎಲ್ಲಾ ವಿಚಾರಗಳಲ್ಲಿ  ಅವರ ಜ್ಞಾನ  ಕಂಡು  ಬೆಕ್ಕಸ ಬೆರಗಾದೆ .    ಹಳ್ಳಿಯ ಜೀವನದ  ಬಗ್ಗೆ  ಇನ್ನೊಬ್ಬ ಹಳ್ಳಿ ಜೀವನ ಕಂಡವ  ಬೆರೆತಾಗ  ಇಂತಹ ವಿಚಾರಗಳ ವಿನಿಮಯ  ಆಗುತ್ತದೆ ,  ಹಾಗೆ  ಎಲ್ಲರೊಡನೆ   ಮಾತನಾಡುತ್ತಾ  ಮನೆ ತುಂಬಾ ಅಡ್ದಾಟ ನಡೆಸಿದ್ದ  ನನಗೆ ಒಂದು ಕಡೆ ಇಸ್ಪೀಟ್ ಪ್ಯಾಕ್ ಕಣ್ಣಿಗೆ  ಬಿತ್ತು , ಅಣ್ಣಾ  ಇದು ಅಂದೇ , ಓ ಅದಾ  ಆಡೋಕೆ ಬರುತ್ತಾ  ಅಂದರು   ಬನ್ನಿ  ಸ್ವಲ್ಪ ಹೊತ್ತು  ಆಡೋಣ  ಅಂತಾ  ಕುಳಿತೆವು ,  ಮೊದ ಮೊದಲ ಎರಡು  ಆಟ  ನನ್ನದೇ ಗೆಲುವು  , ಜಂಬದ  ಮುಖ ಹೊತ್ತು   ಆಡಿದೆ , ನಂತರ  ಸತತವಾಗಿ  ಸುಮಾರು ಹತ್ತು ಆಟಗಳ  ಸೋಲು ,  ತುಂಟ ನಾಗೇಶಣ್ಣ    ನಗು ನಗುತ್ತಾ  ತುಂಟಾಟ  ಮಾಡುತ್ತಾ  ನನ್ನ ಮೊದಲ ಜಯದ  ಹಮ್ಮು ಕೊಚ್ಚಿಕೊಂಡು  ಹೋಗುವಂತೆ ಮಾಡಿದ್ದರು .  ಅಂದು ರಾತ್ರಿ ಭರ್ಜರಿ ರುಚಿಯಾದ  ಅಡಿಗೆ  ವನಿತಾ ಅತ್ತಿಗೆ  ಕೈನಿಂದ   , ಚಪ್ಪರಿಸಿ  ಉಂಡೆವು ಎಲ್ಲರೂ ,   ಟಿ .ವಿ . ಎಂಬ ಭೂತದ ಕಾಟವಿಲ್ಲದೆ , ಮೊಬೈಲ್  ನೆಟ್ವರ್ಕ್  ಇಲ್ಲದೆ  ಕಾರಣ   ಫೋನ್ ಕರೆಗಳ  ಉಪಟಳ  ಇಲ್ಲದೆ ನೆಮ್ಮದಿಯಾಗಿ  ಹರಟೆ ಹೊಡೆಯುತ್ತಾ  ಕುಳಿತೆವು,  ಹಾಗೆ ಯಾವಾಗ ನಿದ್ರಾದೇವಿಯ ಮಡಿಲಿಗೆ ಸೇರಿದೆವೋ  ಅರಿವಾಗಲಿಲ್ಲ,




ವೇಣುಗೋಪಾಲ  ದೇಗುಲದ ಮುಂಭಾಗ
 ದೇಗುಲದ ಒಳಗಡೆ  ಕಂಡ ದೃಶ್ಯ 



ಎಚ್ಚರವಾದಾಗ  ಹಕ್ಕಿಗಳ ಇಂಪಾದ ಚಿಲಿಪಿಲಿ  ಗಾನ,  ಕೇಳಿಸಿತು  , ಮನೆಯಿಂದ ಹೊರಗೆ  ಬಂದಾಗ ತಂಗಾಳಿಯ  ಹಿತವಾದ  ಅನುಭವ,  ಮಂಜಿನ  ತೆರೆಯಲ್ಲಿ ಮಸುಕು ಮಸುಕಾಗಿ  ಕಾಣುವ ಹಳ್ಳಿಯ ನೋಟ  ಇವುಗಳು ಮನ ಸೂರೆಗೊಂಡವು .  ನಿನ್ನೆ ಮಾತನಾಡುವಾಗ   ದೇವಿಸರದಲ್ಲಿ  ಒಂದು ವೇಣುಗೋಪಾಲ  ದೇಗುಲ  ಇದ್ದು   ಅಲ್ಲಿ ಅಭಿಷೇಕ ಮಾಡಲು  ಪ್ರಕಾಶಣ್ಣ ಹಾಗು ನಾಗೇಶಣ್ಣ   ವ್ಯವಸ್ಥೆ ಮಾಡಿದ್ದರು,  ಜೊತೆಗೆ  ದೇಗುಲವನ್ನು ನನಗೆ ತೋರಿಸಬೇಕೆಂಬ  ಅವರ ಆಸೆ  ಕಂಡು  ಅಚ್ಚರಿಯಾಯಿತು . ಅದರಂತೆ ಮುಂಜಾನೆಯೇ  ಶ್ರೀ  ವೇಣುಗೋಪಾಲನ ದರ್ಶನ ಪಡೆಯಲು  ತೆರಳಿದೆವು .  ದೇಗುಲದ ಹೊರಭಾಗ ನೋಡಿ  ಇದೇನಿದು  ಯಾವುದೋ ಮನೆಗೆ  ಕರೆತಂದು  ದೇಗುಲ ಅನ್ನುತ್ತಿದ್ದಾರೆ ಅಂದುಕೊಂಡೆ ಆದರೆ ನನ್ನ ಅನಿಸಿಕೆ ತಪ್ಪಾಗಿತ್ತು,  ಮನೆಯ ಒಳಗಡೆ    ಭಕ್ತಿ ತುಂಬಿದ   ವಾತಾವರಣ ನಿರ್ಮಾಣ ಆಗಿತ್ತು.




ದೇವಿಸರದ    ಶ್ರೀ ವೇಣುಗೋಪಾಲ  ಸ್ವಾಮೀ  ಮೂಲ ವಿಗ್ರಹ 

  ಗರುಡ ದೇವನ ಮೂರ್ತಿ  



ದೇವಿಸರದ  ಈ ದೇಗುಲದ   ಶ್ರೀ ವೇಣುಗೋಪಾಲ ಮೂರ್ತಿ  ಬಹಳ ಮುದ್ದಾಗಿದ್ದು,  ನೋಡುತ್ತಿದ್ದರೆ  ನೋಡುತ್ತಲೇ ಇರಬೇಕು ಅನ್ನಿಸುತ್ತದೆ , ಮೂರ್ತಿಯ  ಶೈಲಿ ಹೊಯ್ಸಳ  ಶಿಲ್ಪಿ ಕಲೆ ಹೋಲುತ್ತಿದ್ದು , ಪ್ರಭಾವಳಿಯಲ್ಲಿ  ವಿಷ್ಣುವಿನ ದಶ ಅವತಾರಗಳನ್ನು ಕೆತ್ತಲಾಗಿದೆ, ಎರಡೂ ಕೈಗಳಲ್ಲಿ ವೇಣು ಹಿಡಿದು  ಮಂದ ಹಾಸ ಬೀರುತ್ತಾ ಇರುವ  ಶ್ರೀ ವೇಣುಗೋಪಾಲ ಮೂರ್ತಿ ಇದು , ಇನ್ನು ಕಾಲ  ಬಳಿ  ಗೋವು ಹಾಗು ಗೋಪಿಕಾ ಸ್ತ್ರೀಯರ  ಬಳಗವನ್ನು ಕಾಣಬಹುದು ,    ಮೂರ್ತಿ ನಿಂತಿರುವ ಪೀಠದಲ್ಲಿ   ಮುಖ್ಯ ಪ್ರಾಣ  ಹನುಮನ  ಮೂರ್ತಿ ಇದೆ ,   ಹಾಗೆ ಈ  ಮೂರ್ತಿಯ  ಮುಂದೆ ಸ್ವಲ್ಪ ದೂರದಲ್ಲಿ  ಸುಂದರವಾದ ಗರುಡ ದೇವನ  ವಿಗ್ರಹ ಕಾಣಬಹುದು .  ಈ ದೇವಾಲಯದ ವಿಗ್ರಹಗಳು  ಪುರಾತನ ಅನ್ನುವುದು  ನಿಜವಾದರೂ , ಇದನ್ನು ಪ್ರತಿಷ್ಟಾಪನೆ ಮಾಡಿದ್ದು ಯಾರು ಎಂದು ತಿಳಿದು ಬರೋದಿಲ್ಲ,



ಊರಿಗೆ ಬಂದ  ಅತಿಥಿಗೆ  ಪ್ರೀತಿಯ   ಆತ್ಮೀಯತೆಯ ದರ್ಶನ ಇಲ್ಲಿ



ದೇವಾಲಯವನ್ನೊಮ್ಮೆ ಅವಲೋಕಿಸುತ್ತಾ ನಡೆದೇ   ಪೂಜೆಗೆ  ಸಿದ್ದತೆ ನಡೆದಿತ್ತು,  ಅಲ್ಲಿನ ಭಕ್ತರು   ದೇಗುಲದಲ್ಲಿ ತಮ್ಮದೇ ಆದ ಕೆಲಸ ಮಾಡಿ ದೇವರ ಪೂಜೆಯಲ್ಲಿ ಪಾಲ್ಗೊಂಡು ಧನ್ಯತೆ ಮೆರೆದಿದ್ದರು,  ಅಲ್ಲಿದ್ದವರಿಗೆ ನನ್ನ ಪರಿಚಯ ಮಾಡಿಕೊಟ್ಟರು ಪ್ರಕಾಶಣ್ಣ ,  ಮತ್ತದೇ ಆತ್ಮೀಯ  ಮನಸುಗಳ  ದರ್ಶನ, ಮುಗುಳ್ನಗೆಯ  ಸ್ವಾಗತ, ಮೈಸೂರು ಎಂದ  ತಕ್ಷಣ  ಮತ್ತಷ್ಟು ಆತ್ಮೀಯತೆ  ತೋರಿ  ಆದರಿಸಿದರು .


ಶ್ರೀ ವೇಣುಗೋಪಾಲ ನಿಗೆ ಮಂಗಳಾರತಿ




ನಸುಕಿನ ಸುಂದರ ನಿಶ್ಯಬ್ಧ  ವಾತಾವರಣ,  ಸುತ್ತಲಿನ ನೋಟಕ್ಕೆ  ಮಂಜಿನ ತೆಳುವಾದ  ತೆರೆ , ಹಿತವಾದ ತಂಗಾಳಿ , ದೇಗುಲದೊಳಗೆ   ಸ್ಪಷ್ಟವಾದ  ಮಂತ್ರಗಳ  ಘೋಷಣೆ  , ಗಂಟೆಯ ನಿನಾದ , ಹಕ್ಕಿಗಳ ಗಾಯನ   ಇಡೀ ವಾತಾವರಣ  ಭಕ್ತಿಯಿಂದ ತುಂಬಿತ್ತು,    ದೇವಿಸರದ  ಶ್ರೀ  ವೇಣುಗೋಪಾಲ ನಿಗೆ ಮುಂಜಾನೆಯ  ಪೂಜೆ ಕಾರ್ಯ ಶುರು ಆಗಿತ್ತು . ಸುಂದರ ಮೂರ್ತಿಗೆ  ಅಭಿಷೇಕ  ನಡೆಸಿ  ಭಕ್ತಿಯಿಂದ  ಮಂತ್ರ ಹೇಳುತ್ತಾ  ಮಂಗಳಾರತಿ  ಮಾಡಿದರು ಅಲ್ಲಿನ ಅರ್ಚಕರು .  ಹೆಚ್ಚು ಜನರಿಲ್ಲದ  ಆ ದೇಗುಲದಲ್ಲಿ   ನಿರ್ಮಲ ವಾತಾವರಣದಲ್ಲಿ   ಶ್ರೀ ವೇಣುಗೋಪಾಲ  ಸ್ವಾಮಿಯ ದರ್ಶನ  ಪಡೆದ ನಾವು ಧನ್ಯರಾದೆವು. ಆದರೆ ಮನವು  ಈ ದೇಗುಲದ ಇತಿಹಾಸ ಅರಿಯಲು ತವಕ ಪಡುತ್ತಿತ್ತು,  ದೇಗುಲದ ಸುತ್ತಾ ಕಣ್ಣಾಡಿಸಿದೆ  ಯಾವುದೇ ಶಾಸನ, ಇತಿಹಾಸದ ಕುರುಹು ಕಂಡು ಬರಲಿಲ್ಲ,   ಬನವಾಸಿಯ ಮಧುಕೇಶ್ವರ , ಯಾಣದ  ಭೈರವೇಶ್ವರ, ಸಹಸ್ರಲಿಂಗ, ಹೀಗೆ ಹೆಚ್ಚಾಗಿ ಶಿವನ   ಆಲಯ ಗಳೇ  ಹೆಚ್ಚಾಗಿ   ಕಂಡು ಬರುವ   ಈ ಪ್ರದೇಶಗಳಲ್ಲಿ   ಮುತ್ತಿನಕೆರೆ ಶ್ರೀನಿವಾಸ , ಮಂಜುಗುಣಿ  ವೆಂಕಟರಮಣ  ಸ್ವಾಮೀ, ಹಾಗು  ದೇವಿಸರದ  ಶ್ರೀ ವೇಣುಗೋಪಾಲ ದೇಗುಲಗಳು  ಗಮನ ಸೆಳೆಯುತ್ತವೆ,  ಮುತ್ತಿನ ಕೆರೆ ಹಾಗು ಮಂಜುಗುಣಿ ದೇಗುಲಗಳಿಗೆ  ಇತಿಹಾಸದ ಬಗ್ಗೆ  ಅಧಾರ ಸಿಕ್ಕಿವೆ , ಆದರೆ ಈ ದೇವಿಸರದ   ಶ್ರೀ ವೇಣುಗೋಪಾಲ ದೇಗುಲದ ಬಗ್ಗೆ  ಸಂಶೋದನೆ ಅಗತ್ಯವಿದೆ ಅನ್ನಿಸಿತು.  ಪೂಜೆ ಮುಗಿಸಿದ ನಾವು ಅಲ್ಲಿಂದ  ಮನೆಯ ಕಡೆ ಹೊರಟೆವು .



ಅದ್ಸರೀ  ನೀವು ಯಾರು ...?  ಅಂದಿತ್ತು ಈ ಎಳೇ ಕರು

ವಾತ್ಸಲ್ಯ  ತೋರಿದ ಅತ್ತಿಗೆ



ಮುಂಜಾನೆಯ ಮಂಜಿನ  ಹೊದಿಕೆಯಲ್ಲಿ  ದೇವಿಸರ  ಗ್ರಾಮ   ಮಲಗಿತ್ತು, ಸೂರ್ಯನ ಕಿರಣಗಳು ಮಂಜಿನ  ತೆರೆಯಲ್ಲಿ ತೂರಿಬಂದು  ಭೂಮಿಗೆ ಬೆಳಕಿನ  ಚಿತ್ತಾರದ  ಸಿಂಚನ  ಮಾಡುತ್ತಿದ್ದವು . ದೇಗುಲದಿಂದ  ಆಗಮಿಸಿದ ನಾನು  ಅಲ್ಲೇ ಇದ್ದ ಕೊಟ್ಟಿಗೆಯಲ್ಲಿ ಕಂಡ  ಈ ಎಳೆಕರುವನ್ನು ನೋಡಿ  ಒಳಗೆ ಬಂದೆ ಮುದ್ದಾದ ಈ ಕರು  ಅಚ್ಚರಿಯಿಂದ  ನನ್ನತ್ತ  ಮುಗ್ಧ ನೋಟ ಬೀರಿತು,    ಅಷ್ಟರಲ್ಲಿ   ಬಾಲಣ್ಣ  ಬನ್ನಿ   ತಿಂಡೀ  ತಿನ್ನೋಣ ಎಂಬ   ಪ್ರಕಾಶಣ್ಣ ನ ಕರೆ ಬಂತು   , ಅಡಿಗೆ ಕೋಣೆ  ಹೊಕ್ಕ ನನಗೆ  ವನಿತಾ ಅತ್ತಿಗೆ  ಬಿಸಿ ಬಿಸಿ ದೋಸೆ  ಸಿದ್ದ ಪಡಿಸುತ್ತಾ, ಬನ್ನಿ ಬಾಲಣ್ಣ   ಎನ್ನುತ್ತಾ  ಬಿಸಿ ಬಿಸಿ ದೋಸೆಯನ್ನು  ಕಾವಲಿಯಿಂದ   ನನ್ನ ಎಲೆಗೆ  ದಾಟಿಸಿದರು,  ಹೊರಗಡೆ ಮಂಜಿನ  ಮಳೆಯ  ಚಳಿಯ ಸಿಂಚನದ ಅನುಭವ ಪಡೆದ ನನಗೆ ಒಳಗಡೆ  ಬಿಸಿ ಬಿಸಿ ದೋಸೆಯ ರುಚಿಯಾದ  ದೋಸೆ,  ಅದಕ್ಕೆ  ಜೋನಿ ಬೆಲ್ಲಾ,  ಉಪ್ಪಿನಕಾಯಿಯ  ಸಾಥ್  ಬೇರೆ,  ಆಹಾ  ಆಹಾ ಎನ್ನುತ್ತಾ  ಯಾವುದೇ ಸಂಕೋಚವಿಲ್ಲದೆ  ತೃಪ್ತಿಯಾಗುವಷ್ಟು  ದೋಸೆಗಳನ್ನು ಸ್ವಾಹ  ಮಾಡಿದ್ದಾಯ್ತು,  ನಗು ಮುಖದ ವನಿತಾ  ಅತ್ತಿಗೆ ವಾತ್ಸಲ್ಯ  ಬೆರೆಸಿ ಮಾಡಿದ್ದ  ಈ ದೋಸೆಗೆ  ಶರಣಾಗಿತ್ತು ನನ್ನ ಹಸಿವು .



ಅಣ್ಣಾ ತಮ್ಮಾ  ಸೇರಿದಾಗ  ತುಂಟಾಟ  ಗ್ಯಾರಂಟೀ 

ಅಂತೂ ಇಂತೂ ನಮ್ಮ ವಾಸ್ತವ್ಯದ  ಕೊನೆ ಘಟ್ಟ  ತಲುಪಿದೆವು ,   ಎಲ್ಲಾ  ಕಾರ್ಯ ಸುಸೂತ್ರವಾಗಿ ಮುಗಿಸಿ, ನಮ್ಮ ಊರುಗಳಿಗೆ  ವಾಪಸ್ಸು  ಹೊರಡಲು ಸಿದ್ದವಾಗುತ್ತಿದ್ದೆವು ..  ಮೊದಲೇ ಎಲ್ಲಾ  ಸಿದ್ದವಾಗಿದ್ದ  ನನ್ನ ಲಗ್ಗೇಜ್  ಕಾರಿನ ಡಿಕ್ಕಿ ಸೇರಿಕೊಂಡಿತು .  ಹಾಗೆ ಮಾತನಾಡುತ್ತಾ  ನಮ್ಮ ನಾಗೇಶಣ್ಣ   ಮದುವೇ ಮಂಟಪಗಳನ್ನು  ಅಂದವಾಗಿ ಮಾಡಿ ಸಿಂಗರಿಸುವ ವಿಚಾರ ಬಂತು ,  ನನಗೆ  ಅಚ್ಚರಿ ...!ಈ  ಅಣ್ಣನಿಗೆ ಬರದ ಇರುವ  ಕೆಲಸ ಯಾವುದು ಅಂತಾ...? , ಅಷ್ಟರಲ್ಲಿ ಬಾಲಣ್ಣ , ತನ್ನ  ಬೈಕ್  ಸಂಪೂರ್ಣ ಕಳಚಿ  ತಾನೇ ಜೋಡಿಸುತ್ತಾರೆ  ಅಂತಾ  ಪ್ರಕಾಶಣ್ಣ  ಹೇಳಿದಾಗ  ನಿಜಕ್ಕೂ  ಅಚ್ಚರಿ ಪಟ್ಟೆ ,   "ಹಣದಾಸೆಗಾಗಿ  ಗೊತ್ತಿಲ್ಲದ ಕೆಲಸವನ್ನು   ಗೊತ್ತು ಎಂದು ಪೋಸ್  ಕೊಡುವ ಜನ ಒಂದು ಕಡೆ  ಮತ್ತೊಂದು ಕಡೆ  ಯಾರ ಹಂಗೂ ಇಲ್ಲದೆ  ತನಗೆ ತಾನೇ  ಹಲವು ಕೆಲಸಗಳನ್ನು ಕಲಿತು  ಆ ಕೆಲಸವನ್ನು  ಹಣಕ್ಕಾಗಿ   ಬಳಸದೆ   ಆತ್ಮ ತೃಪ್ತಿಗಾಗಿ ಮಾಡುತ್ತಾ   ಇರುವ ಇಂತಹ ನಾಗೇಶಣ್ಣ  ಒಂದುಕಡೆ  " ಇದೊಂತರಾ  ವಿಸ್ಮಯದ ವಿಚಾರ ಅನ್ನಿಸಿತು ಅಷ್ಟರಲ್ಲಿ ನಾಗೇಶಣ್ಣ ಕಾಗದದ  ಚಿತ್ತಾರದ  ಹಾರ ಮಾಡಿಕೊಂಡು ಬಂದರು  ನನ್ನ ಕೋರಿಕೆಯಂತೆ  ತಮ್ಮ ಪ್ರಕಾಶ್ ಹೆಗ್ಡೆ ಜೊತೆ ಫೋಟೋ  ತೆಗೆಸಿಕೊಳ್ಳಲು  ಒಪ್ಪಿ  ಪೋಸ್  ಕೊಟ್ಟರು .



ನಂದಗೋಕುಲದ  ಪ್ರೀತಿಯೊಳಗೆ  ನಿಂದ  ಆ ಕ್ಷಣ
ಎಲ್ಲಾ ಸಿದ್ದತೆ  ನಡೆಸಿ ಮನೆಯವರೆಲ್ಲರನ್ನೂ ಮತ್ತೊಮ್ಮೆ ಆತ್ಮೀಯವಾಗಿ ಮಾತನಾಡಿಸಿ  ಅವರಿಗೆ ಕೃತಜ್ಞತೆ  ತಿಳಿಸಿ,  ಪ್ರಕಾಶ್ ಹೆಗ್ಡ ತಾಯಿಯವರ  ಆಶೀರ್ವಾದ ಪಡೆದು  , ಸಂತೋಷಗೊಂಡೆ  , ಎರಡು ದಿನ ಇವರುಗಳ ಪ್ರೀತಿಯ ನಂದಗೋಕುಲದಲ್ಲಿ  ನಲಿದಾಡಿದ ನನಗೆ ಇದೊಂದು ಮರೆಯಲಾರದ  ಅನುಭವ ನೀಡಿತು . ಎಲ್ಲರ  ಶುಭ ಹಾರೈಕೆಗಳೊಂದಿಗೆ   ಮುಂದೆ ಹೊರಟೆವು .   ದೇವಿಸರದ   .  ಗಡಿಯತ್ತ ನಮ್ಮ ಕಾರು ತೆರಳುತ್ತಿತ್ತು .


ಗ್ರಾಮದ  ರಕ್ಷಕ  ಮೂರ್ತಿಯೇ ಇದು ಗೊತ್ತಾಗಲಿಲ್ಲ

ಇನ್ನೇನು ತಿರುವು  ಪಡೆಯಬೇಕು ಅಷ್ಟರಲ್ಲಿ ನನ್ನ ಕಣ್ಣಿಗೆ ಒಂದು  ಕಲ್ಲು ಕಂಡು ಬಂತು , ಅದಕ್ಕೆ ಪೂಜೆ ಸಹ ಮಾಡಿದ್ದರು, ಹೊರಡುವ ಆತುರದಲ್ಲಿದ್ದ  ನಮಗೆ ಹೆಚ್ಚಿನ  ಸಮಯ ಇರಲಿಲ್ಲ ,  ಅದರ ಒಂದು ಚಿತ್ರ ತೆಗೆದು  ಮುಂದಿನ ಸಾರಿ ಬಂದಾಗ  ವಿವರ  ತಿಳಿಯೋಣ ಅಂತಾ  ಮುಂದೆ ಹೊರಟೆ , ಆ ಮೂರ್ತಿಯೂ ಸಹ  ಈಗಲೇ ಎಲ್ಲಾ   ವಿಚಾರ ಸಿಕ್ಕಿ ಬಿಟ್ರೆ ನೀನು ಮತ್ತೆ ಬರೋಲ್ಲಾ, ಅದಕ್ಕೆ ಬಾ ಮುಂದಿನ  ಸಾರಿ  ನನ್ನ ವಿಚಾರ  ತಿಳಿಯೋವಂತೆ ಎನ್ನುತ್ತಾ ನನ್ನನ್ನು  ಬೀಳ್ಕೊಟ್ಟಿತು .  ದೇವಿಸರದ  ಪ್ರೀತಿಯ ಅನುಭವ  ಅನುಭವಿಸಿ , ಪ್ರಕಾಶ್ ಹೆಗ್ಡೆ  ಅವರ  ಭಾವನವರ  ಹೊಸ ಮನೆಯ  ಕಟ್ಟಡದ  ಕಾರ್ಯ ವೀಕ್ಷಿಸಿ , ಶಿರಸಿಗೆ ಬಂದು ಮಾರಿಕಾಂಬೆ ದರ್ಶನ  ಪಡೆದು  ಹೊರಟೆವು .  ಅಣ್ಣಾ ಪ್ರಕಾಶಣ್ಣ  ಯಾವ ಕಡೆಯಿಂದ ಹೋಗೋದು  ಅಂದೇ .....?   ಹ ಬಾಲಣ್ಣ  ಯಾಕದೆ ಹೋಗ ಬಹುದು   ಅಂತಾ ಯೋಚಿಸ್ತೀನಿ ತಾಳಿ ಅಂದರು  ............!    ಶಿರಸಿಯ  ಮಾರಿಕಾಂಬ  ದೇಗುಲದ ಬಳಿ ನಿಂತು   ಯಾವ ಕಡೆಯಿಂದ   ಊರಿಗೆ ವಾಪಸ್ಸ್ ಹೋಗೋದು ಅಂತಾ  ಯೋಚಿಸುತ್ತಾ  ನಿಂತೆವು ....!